AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಲು ಹಣದ ಆಮಿಷ ಇದ್ದದ್ದು ನಿಜ; ನಾನು ಹಣ ಪಡೆಯದೆ ಸ್ಥಾನಮಾನ ಬೇಕು ಎಂದಿದ್ದೆ: ಶ್ರೀಮಂತ ಪಾಟೀಲ್

Karnataka Politics: ಸಚಿವ ಸ್ಥಾನ ಕಳೆದುಕೊಂಡ ನಂತರ ಪಾಟೀಲ್ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಹಣದ ಆಫರ್​​ ಕೊಟ್ರೂ ನಾನು ಬೇಡ ಎಂದಿದ್ದೆ. ಆದರೆ, ಸ್ಥಾನಮಾನ ಬೇಕು ಎಂದು ತಿಳಿಸಿದ್ದೆ ಎಂದು ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಬಿಜೆಪಿಗೆ ಸೇರಲು ಹಣದ ಆಮಿಷ ಇದ್ದದ್ದು ನಿಜ; ನಾನು ಹಣ ಪಡೆಯದೆ ಸ್ಥಾನಮಾನ ಬೇಕು ಎಂದಿದ್ದೆ: ಶ್ರೀಮಂತ ಪಾಟೀಲ್
ಶ್ರೀಮಂತ ಪಾಟೀಲ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Sep 11, 2021 | 6:41 PM

Share

ಬೆಳಗಾವಿ: ಆಪರೇಷನ್ ಕಮಲ ವೇಳೆ ಬಿಜೆಪಿ ನಾಯಕರಿಂದ ಹಣದ ಆಮಿಷ ಇದ್ದದ್ದು ನಿಜ. ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ಕೊಟ್ಟಿದ್ರು ಎಂದು ಬಿಜೆಪಿಯ ಆಫರ್ ಬಗ್ಗೆ ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್​ ಹೇಳಿಕೆ ನೀಡಿದ್ದಾರೆ. ಆಪರೇಷನ್ ಕಮಲ ವೇಳೆ ಬಿಜೆಪಿ ನಾಯಕರಿಂದ ಆಮಿಷ ಇತ್ತು. ನಿಮಗೆ ಎಷ್ಟು ಹಣ ಬೇಕು ಕೇಳಿ ಎಂದು ಆಫರ್ ಕೊಟ್ಟಿದ್ದರು. ಆದರೆ, ನಾನು ಹಣ ಪಡೆಯದೆ ಬಿಜೆಪಿಗೆ ಸೇರ್ಪಡೆ ಆಗಿದ್ದೇನೆ. ಸರ್ಕಾರ ರಚನೆ ಬಳಿಕ ನನಗೆ ಸ್ಥಾನಮಾನ ಬೇಕು ಎಂದಿದ್ದೆ ಎಂದು ಶ್ರೀಮಂತ ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಚಿವ ಸ್ಥಾನ ಕಳೆದುಕೊಂಡ ನಂತರ ಪಾಟೀಲ್ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಹಣದ ಆಫರ್​​ ಕೊಟ್ರೂ ನಾನು ಬೇಡ ಎಂದಿದ್ದೆ. ಆದರೆ, ಸ್ಥಾನಮಾನ ಬೇಕು ಎಂದು ತಿಳಿಸಿದ್ದೆ ಎಂದು ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ನಾನು ಬಿಜೆಪಿಗೆ ಬರುವ ಮುನ್ನ ನನಗೆ ದುಡ್ಡಿನ ಆಫರ್ ಕೊಟ್ಟಿದ್ದು ನಿಜ ಎಂದು ಸ್ಫೋಟಕ ವಿಚಾರ ಬಿಚ್ಚಿಟ್ಟಿದ್ದಾರೆ.

ದುಡ್ಡು ಇಲ್ಲದೆ ನಾನು ಬಿಜೆಪಿ ಪ್ರವೇಶ ಮಾಡಿದ್ದೇನೆ. ನನಗೆ ಹಣದ ಆಫರ ಕೊಟ್ರು ನಾನು ಬೇಡ ಎಂದಿದ್ದೆ. ನನಗೆ ಬೇಡ ಬಿಜೆಪಿ ಬರ್ತಿನಿ ಒಳ್ಳೆಯ ಸರ್ಕಾರ ರಚನೆಯಾದ ಬಳಿಕ ಸ್ಥಾನಮಾನ ನನಗೆ ಬೇಕು ಎಂದಿದ್ದೆ ಎಂದು ಹೇಳಿಕೊಂಡಿದ್ದಾರೆ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಶ್ರೀಮಂತ ಪಾಟೀಲ್ ಹೀಗೆ ಹೇಳಿಕೆ ನೀಡಿದ್ದಾರೆ. ಈಗ ಸಚಿವ ಸ್ಥಾನ ಸಿಕ್ಕಿಲ್ಲ. ಈ ವಿಚಾರದಲ್ಲಿ ಹಿರಿಯ ನಾಯಕರೊಟ್ಟಿಗೆ ಚರ್ಚೆ ಮಾಡಿದ್ದೇನೆ. ಬರುವ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

ಇದನ್ನೂ ಓದಿ: ಸಚಿವ ಸಂಪುಟ ಆಗುವುದಕ್ಕೆ ಕಾಂಗ್ರೆಸ್, ಜೆಡಿಎಸ್​ನಿಂದ ಬಂದವರು ಕಾರಣ; ಅವರ ಋಣ ತೀರಿಸಬೇಕು: ಕೆಎಸ್ ಈಶ್ವರಪ್ಪ

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​