AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಲು ಹಣದ ಆಮಿಷ ಇದ್ದದ್ದು ನಿಜ; ನಾನು ಹಣ ಪಡೆಯದೆ ಸ್ಥಾನಮಾನ ಬೇಕು ಎಂದಿದ್ದೆ: ಶ್ರೀಮಂತ ಪಾಟೀಲ್

Karnataka Politics: ಸಚಿವ ಸ್ಥಾನ ಕಳೆದುಕೊಂಡ ನಂತರ ಪಾಟೀಲ್ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಹಣದ ಆಫರ್​​ ಕೊಟ್ರೂ ನಾನು ಬೇಡ ಎಂದಿದ್ದೆ. ಆದರೆ, ಸ್ಥಾನಮಾನ ಬೇಕು ಎಂದು ತಿಳಿಸಿದ್ದೆ ಎಂದು ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಬಿಜೆಪಿಗೆ ಸೇರಲು ಹಣದ ಆಮಿಷ ಇದ್ದದ್ದು ನಿಜ; ನಾನು ಹಣ ಪಡೆಯದೆ ಸ್ಥಾನಮಾನ ಬೇಕು ಎಂದಿದ್ದೆ: ಶ್ರೀಮಂತ ಪಾಟೀಲ್
ಶ್ರೀಮಂತ ಪಾಟೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 11, 2021 | 6:41 PM

Share

ಬೆಳಗಾವಿ: ಆಪರೇಷನ್ ಕಮಲ ವೇಳೆ ಬಿಜೆಪಿ ನಾಯಕರಿಂದ ಹಣದ ಆಮಿಷ ಇದ್ದದ್ದು ನಿಜ. ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ಕೊಟ್ಟಿದ್ರು ಎಂದು ಬಿಜೆಪಿಯ ಆಫರ್ ಬಗ್ಗೆ ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್​ ಹೇಳಿಕೆ ನೀಡಿದ್ದಾರೆ. ಆಪರೇಷನ್ ಕಮಲ ವೇಳೆ ಬಿಜೆಪಿ ನಾಯಕರಿಂದ ಆಮಿಷ ಇತ್ತು. ನಿಮಗೆ ಎಷ್ಟು ಹಣ ಬೇಕು ಕೇಳಿ ಎಂದು ಆಫರ್ ಕೊಟ್ಟಿದ್ದರು. ಆದರೆ, ನಾನು ಹಣ ಪಡೆಯದೆ ಬಿಜೆಪಿಗೆ ಸೇರ್ಪಡೆ ಆಗಿದ್ದೇನೆ. ಸರ್ಕಾರ ರಚನೆ ಬಳಿಕ ನನಗೆ ಸ್ಥಾನಮಾನ ಬೇಕು ಎಂದಿದ್ದೆ ಎಂದು ಶ್ರೀಮಂತ ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಚಿವ ಸ್ಥಾನ ಕಳೆದುಕೊಂಡ ನಂತರ ಪಾಟೀಲ್ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನನಗೆ ಹಣದ ಆಫರ್​​ ಕೊಟ್ರೂ ನಾನು ಬೇಡ ಎಂದಿದ್ದೆ. ಆದರೆ, ಸ್ಥಾನಮಾನ ಬೇಕು ಎಂದು ತಿಳಿಸಿದ್ದೆ ಎಂದು ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ನಾನು ಬಿಜೆಪಿಗೆ ಬರುವ ಮುನ್ನ ನನಗೆ ದುಡ್ಡಿನ ಆಫರ್ ಕೊಟ್ಟಿದ್ದು ನಿಜ ಎಂದು ಸ್ಫೋಟಕ ವಿಚಾರ ಬಿಚ್ಚಿಟ್ಟಿದ್ದಾರೆ.

ದುಡ್ಡು ಇಲ್ಲದೆ ನಾನು ಬಿಜೆಪಿ ಪ್ರವೇಶ ಮಾಡಿದ್ದೇನೆ. ನನಗೆ ಹಣದ ಆಫರ ಕೊಟ್ರು ನಾನು ಬೇಡ ಎಂದಿದ್ದೆ. ನನಗೆ ಬೇಡ ಬಿಜೆಪಿ ಬರ್ತಿನಿ ಒಳ್ಳೆಯ ಸರ್ಕಾರ ರಚನೆಯಾದ ಬಳಿಕ ಸ್ಥಾನಮಾನ ನನಗೆ ಬೇಕು ಎಂದಿದ್ದೆ ಎಂದು ಹೇಳಿಕೊಂಡಿದ್ದಾರೆ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಶ್ರೀಮಂತ ಪಾಟೀಲ್ ಹೀಗೆ ಹೇಳಿಕೆ ನೀಡಿದ್ದಾರೆ. ಈಗ ಸಚಿವ ಸ್ಥಾನ ಸಿಕ್ಕಿಲ್ಲ. ಈ ವಿಚಾರದಲ್ಲಿ ಹಿರಿಯ ನಾಯಕರೊಟ್ಟಿಗೆ ಚರ್ಚೆ ಮಾಡಿದ್ದೇನೆ. ಬರುವ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

ಇದನ್ನೂ ಓದಿ: ಸಚಿವ ಸಂಪುಟ ಆಗುವುದಕ್ಕೆ ಕಾಂಗ್ರೆಸ್, ಜೆಡಿಎಸ್​ನಿಂದ ಬಂದವರು ಕಾರಣ; ಅವರ ಋಣ ತೀರಿಸಬೇಕು: ಕೆಎಸ್ ಈಶ್ವರಪ್ಪ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ