AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳಿದ್ದೊಂದು ಮಾಡ್ತಿರೋದು ಇನ್ನೊಂದು, ಅದಕ್ಕೆ ಷರತ್ತುಗಳು ಬೇರೆ! ಜುಲೈ 4 ರಂದು ಧರಣಿಗೆ ಬಿಜೆಪಿ ನಿರ್ಧಾರ

ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ವಿರುದ್ಧ ಜುಲೈ 4 ರಂದು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಪಕ್ಷದ ಶಾಸಕರು ಆಗ್ರಹಿಸಲಿದ್ದಾರೆ.

ಹೇಳಿದ್ದೊಂದು ಮಾಡ್ತಿರೋದು ಇನ್ನೊಂದು, ಅದಕ್ಕೆ ಷರತ್ತುಗಳು ಬೇರೆ! ಜುಲೈ 4 ರಂದು ಧರಣಿಗೆ ಬಿಜೆಪಿ ನಿರ್ಧಾರ
ಬಿಎಸ್ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on: Jun 30, 2023 | 3:02 PM

Share

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ (Congress) ವಿರುದ್ಧ ಜುಲೈ 4 ರಂದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬಿಜೆಪಿ ಶಾಸಕರು ವಿಧಾನಸಭೆ ಒಳಗೆ ಮತ್ತು ಹೊರಗೆ ಪ್ರತಿಭಟನೆ (BJP Protest) ನಡೆಸಲಿದ್ದಾರೆ ಎಂದು ತಿಳಿಸಿದರು.

ಮನೆ ಮನೆಗೆ ಹೋಗಿ ನೀಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಹಿಯುಳ್ಳ ಗ್ಯಾರಂಟಿ ಕಾರ್ಡ್​ಗಳಲ್ಲಿ ಇರುವ ಘೋಷಣೆಗಳನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ನಾವು ವಿಧಾನಸೌಧದ ಮುಂದೆ ಇರುವ ಗಾಂಧಿ ಪ್ರತಿಮೆ ಬಳಿ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲು ತೀರ್ಮಾನ ಮಾಡಿದ್ದೇವೆ. ಬೆಳಗ್ಗೆಯಿಂದ ಸಂಜೆಯವರೆಗೆ ಕಾರ್ಯಕರ್ತರ ಜೊತೆ ಧರಣಿ ನಡೆಯಲಿದೆ ಎಂದರು.

ಕಾಂಗ್ರೆಸ್​ ಪಕ್ಷ ಜನರಿಗೆ ನೀಡಿದ ಗ್ಯಾರಂಟಿ​ಗಳನ್ನು ಜಾರಿಗೆ ತರಬೇಕು. ಭರವಸೆ ನೀಡಿದಂತೆ ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡಬೇಕು. ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500 ರೂ. ಕೊಡಬೇಕು. 200 ಯೂನಿಟ್ ಕರೆಂಟ್ ಕೊಡಲೇಬೇಕು. 80 ಯೂನಿಟ್ ಎಂಬ ಕಂಡಿಷನ್ ರದ್ದು ಮಾಡಬೇಕು. ಭರವಸೆ ನೀಡಿದಂತೆ ಎಲ್ಲ ಮಹಿಳೆಯರಿಗೆ 2 ಸಾವಿರ ರೂ. ಕೊಡಬೇಕು. ಕರೆಂಟ್ ಬಿಲ್ ತೀವ್ರವಾಗಿ ಹೆಚ್ಚಾಗಿದ್ದು, ದರ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: ಸ್ವಪಕ್ಷದವರ ವಿರುದ್ಧವೇ ಬಹಿರಂಗ ಹೇಳಿಕೆ: ಯತ್ನಾಳ್, ರೇಣುಕಾಚಾರ್ಯಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ

ಚುನಾವಣೆ ಸೋಲಿನ ಬಗ್ಗೆ ಕೆಲವು ನಾಯಕರು ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧವೇ ಆಕ್ರೋಶ ಹೊರಹಾಕಲಾಗುತ್ತಿದೆ. ಇದು ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪಕ್ಷಕ್ಕೆ ಮುಜುಗರ ಆಗದಂತೆ ಹೇಳಿಕೆ ಕೊಟ್ಟವರನ್ನು ಕರೆದು ಮಾತಾಡಿದ್ದೇವೆ. ಇನ್ನು ಮುಂದೆ ಹೇಳಿಕೆ ನೀಡದಂತೆ ಸೂಚಿಸಿದ್ದೇವೆ. ಎಚ್ಚರಿಕೆ ವಹಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾಗಿ ಹೇಳಿದ್ದಾರೆ.

ರೇಣುಕಾಚಾರ್ಯ ಜೊತೆ ಯಡಿಯೂರಪ್ಪ ಮಾತುಕತೆ

ಬಿಜೆಪಿ ನಾಯಕರ ವಿರುದ್ಧವೇ ಮುನಿಸಿಕೊಂಡಿರುವ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು ನಡೆದ ಪಕ್ಷದ ಸಭೆಗೆ ಗೈರಾಗಿದ್ದಾರೆ. ಹೀಗಾಗಿ ತನ್ನ ಆಪ್ತನ ಮುನಿಸನ್ನು ಶಮನಗೊಳಿಸಲು ಯಡಿಯೂರಪ್ಪ ಅವರು ರೇಣುಕಾಚಾರ್ಯ ಅವರನ್ನು ಭೇಟಿಯಾಗಿ ಮಾತನಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ರೇಣುಕಾಚಾರ್ಯ, ಕಟೀಲ್ ನಾಯಕತ್ವದಲ್ಲೇ ಬಿಜೆಪಿಗೆ ರಾಜ್ಯದಲ್ಲಿ ಹೀನಾಯ ಸೋಲಾಗಿದ್ದರಿಂದ ಅಧ್ಯಕ್ಷ ಸ್ಥಾನ ಮುಂದುವರಿಯಲು ಅವರಿಗೆ ನೈತಿಕ ಹಕ್ಕಿಲ್ಲ, ಕೂಡಲೇ ರಾಜಿನಾಮೆ ಸಲ್ಲಿಸಬೇಕು ಎಂದು ಬಹಿರಂಗವಾಗಿಯೇ ಹೇಳಿದ್ದರು. ಅಲ್ಲದೆ, ಯಡಿಯೂರಪ್ಪ ವಿರುದ್ಧ ಇಲ್ಲಸಲ್ಲದ ಆಪಾದನೆ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲು ಅವರಿಂದ ಆಗಲಿಲ್ಲ. ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಬೇಡವೆಂದರೂ ಕಟೀಲ್ ಮತ್ತು ಇತರ ನಾಯಕರು ಕಿವಿಗೆ ಹಾಕಿಕೊಳ್ಳಲಿಲ್ಲ ಎಂದರು. ಪಕ್ಷ ಕಟ್ಟಿ ಬೆಳೆಸಿದ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ, ದಿವಂಗತ ಅನಂತ ಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಲಾಯಿತು ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!