AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ
ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Edited By: |

Updated on: Aug 19, 2023 | 3:29 PM

Share

ಬೆಂಗಳೂರು, ಆಗಸ್ಟ್ 19: ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕವಾಗುವ ವರೆಗೆ ನೀವೇ ಪಕ್ಷದ ನಾಯಕತ್ವ ವಹಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಬಳಿ ಪಕ್ಷದ ಶಾಸಕರು (BJP MLAs) ಒತ್ತಾಯಿಸಿದ್ದಾರೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಶುಕ್ರವಾರ ರಾತ್ರಿ ಪಕ್ಷದ ನಾಯಕರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಶಾಸಕರು ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕರ ಸಮಸ್ಯೆ ಕೇಳಲು ನಾಯಕರೇ ಇಲ್ಲದಂತಾಗಿದೆ. ಕ್ಷೇತ್ರದ ಸಮಸ್ಯೆ ಕುರಿತು ಚರ್ಚಿಸಲು ಯಾರೂ ಮುಂದಾಗುತ್ತಿಲ್ಲ. ನಮ್ಮ ಕೊರತೆಯನ್ನು ಕಾಂಗ್ರೆಸ್ ಪಕ್ಷ ಬಳಸಿಕೊಳ್ಳುತ್ತಿದೆ. ಅದನ್ನು ತಡೆಯಲು ನೀವೇ ಮುಂದಾಗಬೇಕು. ನೀವು ನಿವೃತ್ತಿ ಘೋಷಿಸಿರುವುದು ಚುನಾವಣಾ ರಾಜಕಾರಣಕ್ಕೆ ಮಾತ್ರ. ನೀವು ನಾಯಕತ್ವ ವಹಿಸಿಕೊಂಡು ಶಾಸಕರ ಬೆನ್ನಿಗೆ ನಿಲ್ಲಬೇಕು ಎಂದು ಸಭೆಯಲ್ಲಿ ಯಡಿಯೂರಪ್ಪ ಅವರಿಗೆ ಶಾಸಕರು ಮನವಿ ಮಾಡಿದ್ದಾರೆ. ಶಾಸಕರ ಒತ್ತಾಯ ಮೇರೆಗೆ ಆಗಸ್ಟ್ 23ರಂದು ಹೋರಾಟಕ್ಕೆ ಯಡಿಯೂರಪ್ಪ ಕರೆ ನೀಡಿದ್ದಾರೆ.

ಇದನ್ನೂ ಓದಿ: Karnataka Politics: ಬಿಜೆಪಿಗೆ ಮತ್ತೆ ಅನಿವಾರ್ಯವಾದರೇ ಬಿಎಸ್ ಯಡಿಯೂರಪ್ಪ, ಇತ್ತೀಚಿನ ಬೆಳವಣಿಗೆಗಳು ಹೇಳುವುದೇನು?

ಆಪರೇಷನ್ ಹಸ್ತದ ಭೀತಿಯ ನಡುವೆ ರಾಜ್ಯ ಬಿಜೆಪಿ ನಾಯಕರ ಅಸಮಾಧಾನಗಳನ್ನು ತಣಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆ ಮಹತ್ವ ಪಡೆದಿತ್ತು. ಅದೇ ರೀತಿ ಮುಂಬರುವ ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಚರ್ಚೆ ನಡೆದಿತ್ತು. ಇದೇ ವೇಳೆ, ರಾಜ್ಯದಲ್ಲಿ ನಾಯಕತ್ವ ವಿಚಾರವಾಗಿಯೂ ಮಾತುಕತೆ ನಡೆದಿತ್ತು. ಶೀಘ್ರದಲ್ಲೇ ಪ್ರತಿಪಕ್ಷ ನಾಯಕನ ನೇಮಕ ಹಾಗೂ ನೂತನ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್