AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ
ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Edited By: |

Updated on: Aug 19, 2023 | 3:29 PM

Share

ಬೆಂಗಳೂರು, ಆಗಸ್ಟ್ 19: ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕವಾಗುವ ವರೆಗೆ ನೀವೇ ಪಕ್ಷದ ನಾಯಕತ್ವ ವಹಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಬಳಿ ಪಕ್ಷದ ಶಾಸಕರು (BJP MLAs) ಒತ್ತಾಯಿಸಿದ್ದಾರೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಶುಕ್ರವಾರ ರಾತ್ರಿ ಪಕ್ಷದ ನಾಯಕರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಶಾಸಕರು ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕರ ಸಮಸ್ಯೆ ಕೇಳಲು ನಾಯಕರೇ ಇಲ್ಲದಂತಾಗಿದೆ. ಕ್ಷೇತ್ರದ ಸಮಸ್ಯೆ ಕುರಿತು ಚರ್ಚಿಸಲು ಯಾರೂ ಮುಂದಾಗುತ್ತಿಲ್ಲ. ನಮ್ಮ ಕೊರತೆಯನ್ನು ಕಾಂಗ್ರೆಸ್ ಪಕ್ಷ ಬಳಸಿಕೊಳ್ಳುತ್ತಿದೆ. ಅದನ್ನು ತಡೆಯಲು ನೀವೇ ಮುಂದಾಗಬೇಕು. ನೀವು ನಿವೃತ್ತಿ ಘೋಷಿಸಿರುವುದು ಚುನಾವಣಾ ರಾಜಕಾರಣಕ್ಕೆ ಮಾತ್ರ. ನೀವು ನಾಯಕತ್ವ ವಹಿಸಿಕೊಂಡು ಶಾಸಕರ ಬೆನ್ನಿಗೆ ನಿಲ್ಲಬೇಕು ಎಂದು ಸಭೆಯಲ್ಲಿ ಯಡಿಯೂರಪ್ಪ ಅವರಿಗೆ ಶಾಸಕರು ಮನವಿ ಮಾಡಿದ್ದಾರೆ. ಶಾಸಕರ ಒತ್ತಾಯ ಮೇರೆಗೆ ಆಗಸ್ಟ್ 23ರಂದು ಹೋರಾಟಕ್ಕೆ ಯಡಿಯೂರಪ್ಪ ಕರೆ ನೀಡಿದ್ದಾರೆ.

ಇದನ್ನೂ ಓದಿ: Karnataka Politics: ಬಿಜೆಪಿಗೆ ಮತ್ತೆ ಅನಿವಾರ್ಯವಾದರೇ ಬಿಎಸ್ ಯಡಿಯೂರಪ್ಪ, ಇತ್ತೀಚಿನ ಬೆಳವಣಿಗೆಗಳು ಹೇಳುವುದೇನು?

ಆಪರೇಷನ್ ಹಸ್ತದ ಭೀತಿಯ ನಡುವೆ ರಾಜ್ಯ ಬಿಜೆಪಿ ನಾಯಕರ ಅಸಮಾಧಾನಗಳನ್ನು ತಣಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆ ಮಹತ್ವ ಪಡೆದಿತ್ತು. ಅದೇ ರೀತಿ ಮುಂಬರುವ ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಚರ್ಚೆ ನಡೆದಿತ್ತು. ಇದೇ ವೇಳೆ, ರಾಜ್ಯದಲ್ಲಿ ನಾಯಕತ್ವ ವಿಚಾರವಾಗಿಯೂ ಮಾತುಕತೆ ನಡೆದಿತ್ತು. ಶೀಘ್ರದಲ್ಲೇ ಪ್ರತಿಪಕ್ಷ ನಾಯಕನ ನೇಮಕ ಹಾಗೂ ನೂತನ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್