Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ಚುನಾವಣೆಯಲ್ಲಿ ಬಿಎಸ್​​ವೈ ದುಡ್ಡು ಕೊಟ್ಟು ಕಳಿಸಿದ್ರು, ಆದ್ರೆ ಆ ಸೈನಿಕ ಹುಣಸೂರಿಗೆ ಬರಲಿಲ್ಲ: ವಿಶ್ವನಾಥ್ ಸ್ಫೋಟಕ ಹೇಳಿಕೆ

ಬಿಜೆಪಿ ನಾಯಕಾರದ ಶ್ರೀನಿವಾಸ್ ಪ್ರಸಾದ್ ಹಾಗೂ ಹೆಚ್​ ವಿಶ್ವನಾಥ್ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಮೊನ್ನೇ ಅಷ್ಟೇ ಶ್ರೀನಿವಾಸ್ ಪ್ರಸಾದ್ ಮಾಡಿದ್ದ ಆರೋಪಗಳಿಗೆ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಬಿಎಸ್​​ವೈ ದುಡ್ಡು ಕೊಟ್ಟು ಕಳಿಸಿದ್ರು, ಆದ್ರೆ ಆ ಸೈನಿಕ ಹುಣಸೂರಿಗೆ ಬರಲಿಲ್ಲ: ವಿಶ್ವನಾಥ್ ಸ್ಫೋಟಕ ಹೇಳಿಕೆ
ಶ್ರೀನಿವಾಸ್ ಪ್ರಸಾದ್ ಹಾಗೂ ಹೆಚ್​ ವಿಶ್ವನಾಥ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 17, 2022 | 5:45 PM

ಮೈಸೂರು: ಉಪ ಚುನಾವಣೆಗೆ ಹಣ ಪಡೆದಿದ್ದರು ಎನ್ನುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ (Srinivas Prasad) ಹೇಳಿಕೆಗೆ ಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ (H vishwanath) ಪ್ರತಿಕ್ರಿಯಿಸಿದ್ದು, ಉಪ ಚುನಾವಣೆ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಸೈನಿಕನ ಕೈಯಲ್ಲಿ ದುಡ್ಡು ಕೊಟ್ಟು ಕಳುಹಿಸಿದ್ದರು. ಆದರೆ ಆ ಸೈನಿಕ ಹುಣಸೂರಿಗೆ ಬರಲಿಲ್ಲ ಎಂದು ತಿರುಗೇಟು ನೀಡಿದರು.

ಮೈಸೂರಿನಲ್ಲಿ (Mysuru) ಇಂದು(ಡಿಸೆಂಬರ್ 17) ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಚುನಾವಣೆ ಎಂದ ಮೇಲೆ ಪಕ್ಷ ದುಡ್ಡು ಕೊಡುವುದು ಸಹಜ. ಲೆಕ್ಕ ಕೇಳಲು ಶ್ರೀನಿವಾಸ್​ ಪ್ರಸಾದ್​ ಯಾರು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷದವರು ದುಡ್ಡು ಕೊಡುತ್ತಾರೆ ಎಂದು ಶ್ರೀನಿವಾಸ್​ ಪ್ರಸಾದ್​ ಹೇಳಿಕೆಗೆ ಟಾಂಗ್ ಕೊಟ್ಟರು.

ಶ್ರೀನಿವಾಸ್ ಪ್ರಸಾದ್ ಅವರಿಗೆ ಅವರಿದ್ದ ಪಕ್ಷಗಳು ಹಣ ನೀಡುವುದಿಲ್ಲವೇ ? ನನಗೆ ಎಷ್ಟು ಕೋಟಿ ಬಂದಿದೆ ಅಂತ ಶ್ರೀನಿವಾಸ್ ಪ್ರಸಾದ್ ಗೆ ಏನು ಗೊತ್ತು ? ಅವರಿಗೆ ಗೊತ್ತಿಲ್ಲದ ವಿಚಾರವನ್ನು ಯಾಕೆ ಮಾತಾನಾಡಬೇಕು ? ಎಂದು ವಿಶ್ವನಾಥ್ ಪ್ರಶ್ನಿಸಿದರು

ಹುಣಸೂರು ಉಪಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಸೈನಿಕನ ಕೈಯಲ್ಲಿ ದುಡ್ಡು ಕೊಟ್ಟು ಕಳುಹಿಸಿದ್ದರು. ಆದ್ರೆ. ಸೈನಿಕ ಹುಣಸೂರಿಗೆ ಬರಲಿಲ್ಲ. ಈ ವಿಚಾರವನ್ನು ಈಗಾಗಲೇ ಹೇಳಿದ್ದೇನೆ. ಎಲ್ಲಾ ಚುನಾವಣೆಗಳಲ್ಲೂ ಪಕ್ಷದವರು ದುಡ್ಡು ಕೊಡುತ್ತಾರೆ ಎಂದು ಹೇಳಿದರು.

ಶ್ರೀನಿವಾಸ ಪ್ರಸಾದ್​ ದಲಿತರ ಕಷ್ಟಕ್ಕಾಗದ ರಾಜಕಾರಣಿ

ಮುರುಘಾಶ್ರೀ ದಲಿತ ಹೆಣ್ಣು ಮಗಳ ಮೇಲೆ ದೌರ್ಜನ್ಯ ಎಸಗಿದ್ರು. ಅಂಬೇಡ್ಕರ್​ ಮೊಮ್ಮಗ ಆನಂದ್​ರನ್ನು ಬಂಧಿಸಿ ಜೈಲಿಗೆ ಕಳಿಸಿದ್ರು. ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಯಾವ ಸಂದರ್ಭದಲ್ಲಾದರೂ ನೀವು ಧ್ವನಿ ಎತ್ತಿದ್ದೀರಾ?. ಯಾವುದೋ ಬೀದಿ ರೌಡಿ ರೀತಿ ಮಾತನಾಡುತ್ತಿದ್ದೀರಿ. ನನ್ನ ಬಗ್ಗೆ ನೀವು ಬಳಸಿರುವ ಪದಗಳನ್ನ ಜನ ಕ್ಷಮಿಸಲ್ಲ ಎಂದು ಸಂಸದ ಶ್ರೀನಿವಾಸ ಪ್ರಸಾದ್​ ವಿರುದ್ಧ ಹೆಚ್​.ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಶ್ರೀನಿವಾಸ್ ಪ್ರಸಾದ್ ಹೇಳಿದ್ದೇನು?

ಚುನಾವಣೆಗೆ ಕೇವಲ 4 ರಿಂದ 5 ಲಕ್ಷ ಖರ್ಚು ಮಾಡಿದ್ದಾರೆ. 10 ಕೋಟಿ ಮನೆಗೆ ತಗೆದುಕೊಂಡು ಹೋಗಿದ್ದಾರೆ. ಪೆಟ್ರೋಲ್ ಬಂಕ್, ಬಾರ್ ಮಾಡಿಕೊಂಡಿದ್ದು ಯಾವ ಹಣದಲ್ಲಿ ಹೇಳಿ? ನಾನು ಜೆಡಿಎಸ್ ರಾಜ್ಯಾದ್ಯಕ್ಷ ಆದರೂ ಕೆ.ಆರ್.ನಗರ ಪುರಸಭೆಗೆ ಒಂದೇ ಒಂದು ಟಿಕೆಟ್ ಕೊಟ್ಟಿಲ್ಲ. ನನಗೆ ಅವಮಾನ ಮಾಡಿದರು ಅಂತ ನನ್ನ ಮನೆಗೆ ಬಂದೆ. ನಾನು ಯಡಿಯೂರಪ್ಪ ಅವರ ಬಳಿ ಮುಖಾಮುಖಿಯಾಗಿ ಮಾತನಾಡಿ ಅಂದಿದ್ದೆ. ವಿಶ್ವನಾಥ್‌ಗೆ ಕಾಂಗ್ರೆಸ್‌ನಿಂದ ಏನು ಅನ್ಯಾಯ ಆಗಿದೆ. ಸೋತ ಮೇಲೆ ಸಿದ್ದರಾಮಯ್ಯ ಅವರ ಬಳಿ ದುಡ್ಡು ಕೇಳಿ, ಅಧಿಕಾರವನ್ನೂ ಕೇಳಿದ್ದರು.‌ ಹೀಗಾಗಿಯೇ ವಿಶ್ವನಾಥ್ ಕಾಂಗ್ರೆಸ್ ಬಿಟ್ಟರು ಎಂದು ಹೇಳಿದ್ದರು.

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ