AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ಚುನಾವಣೆಯಲ್ಲಿ ಬಿಎಸ್​​ವೈ ದುಡ್ಡು ಕೊಟ್ಟು ಕಳಿಸಿದ್ರು, ಆದ್ರೆ ಆ ಸೈನಿಕ ಹುಣಸೂರಿಗೆ ಬರಲಿಲ್ಲ: ವಿಶ್ವನಾಥ್ ಸ್ಫೋಟಕ ಹೇಳಿಕೆ

ಬಿಜೆಪಿ ನಾಯಕಾರದ ಶ್ರೀನಿವಾಸ್ ಪ್ರಸಾದ್ ಹಾಗೂ ಹೆಚ್​ ವಿಶ್ವನಾಥ್ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಮೊನ್ನೇ ಅಷ್ಟೇ ಶ್ರೀನಿವಾಸ್ ಪ್ರಸಾದ್ ಮಾಡಿದ್ದ ಆರೋಪಗಳಿಗೆ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಬಿಎಸ್​​ವೈ ದುಡ್ಡು ಕೊಟ್ಟು ಕಳಿಸಿದ್ರು, ಆದ್ರೆ ಆ ಸೈನಿಕ ಹುಣಸೂರಿಗೆ ಬರಲಿಲ್ಲ: ವಿಶ್ವನಾಥ್ ಸ್ಫೋಟಕ ಹೇಳಿಕೆ
ಶ್ರೀನಿವಾಸ್ ಪ್ರಸಾದ್ ಹಾಗೂ ಹೆಚ್​ ವಿಶ್ವನಾಥ್
TV9 Web
| Edited By: |

Updated on: Dec 17, 2022 | 5:45 PM

Share

ಮೈಸೂರು: ಉಪ ಚುನಾವಣೆಗೆ ಹಣ ಪಡೆದಿದ್ದರು ಎನ್ನುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ (Srinivas Prasad) ಹೇಳಿಕೆಗೆ ಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ (H vishwanath) ಪ್ರತಿಕ್ರಿಯಿಸಿದ್ದು, ಉಪ ಚುನಾವಣೆ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಸೈನಿಕನ ಕೈಯಲ್ಲಿ ದುಡ್ಡು ಕೊಟ್ಟು ಕಳುಹಿಸಿದ್ದರು. ಆದರೆ ಆ ಸೈನಿಕ ಹುಣಸೂರಿಗೆ ಬರಲಿಲ್ಲ ಎಂದು ತಿರುಗೇಟು ನೀಡಿದರು.

ಮೈಸೂರಿನಲ್ಲಿ (Mysuru) ಇಂದು(ಡಿಸೆಂಬರ್ 17) ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಚುನಾವಣೆ ಎಂದ ಮೇಲೆ ಪಕ್ಷ ದುಡ್ಡು ಕೊಡುವುದು ಸಹಜ. ಲೆಕ್ಕ ಕೇಳಲು ಶ್ರೀನಿವಾಸ್​ ಪ್ರಸಾದ್​ ಯಾರು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷದವರು ದುಡ್ಡು ಕೊಡುತ್ತಾರೆ ಎಂದು ಶ್ರೀನಿವಾಸ್​ ಪ್ರಸಾದ್​ ಹೇಳಿಕೆಗೆ ಟಾಂಗ್ ಕೊಟ್ಟರು.

ಶ್ರೀನಿವಾಸ್ ಪ್ರಸಾದ್ ಅವರಿಗೆ ಅವರಿದ್ದ ಪಕ್ಷಗಳು ಹಣ ನೀಡುವುದಿಲ್ಲವೇ ? ನನಗೆ ಎಷ್ಟು ಕೋಟಿ ಬಂದಿದೆ ಅಂತ ಶ್ರೀನಿವಾಸ್ ಪ್ರಸಾದ್ ಗೆ ಏನು ಗೊತ್ತು ? ಅವರಿಗೆ ಗೊತ್ತಿಲ್ಲದ ವಿಚಾರವನ್ನು ಯಾಕೆ ಮಾತಾನಾಡಬೇಕು ? ಎಂದು ವಿಶ್ವನಾಥ್ ಪ್ರಶ್ನಿಸಿದರು

ಹುಣಸೂರು ಉಪಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಸೈನಿಕನ ಕೈಯಲ್ಲಿ ದುಡ್ಡು ಕೊಟ್ಟು ಕಳುಹಿಸಿದ್ದರು. ಆದ್ರೆ. ಸೈನಿಕ ಹುಣಸೂರಿಗೆ ಬರಲಿಲ್ಲ. ಈ ವಿಚಾರವನ್ನು ಈಗಾಗಲೇ ಹೇಳಿದ್ದೇನೆ. ಎಲ್ಲಾ ಚುನಾವಣೆಗಳಲ್ಲೂ ಪಕ್ಷದವರು ದುಡ್ಡು ಕೊಡುತ್ತಾರೆ ಎಂದು ಹೇಳಿದರು.

ಶ್ರೀನಿವಾಸ ಪ್ರಸಾದ್​ ದಲಿತರ ಕಷ್ಟಕ್ಕಾಗದ ರಾಜಕಾರಣಿ

ಮುರುಘಾಶ್ರೀ ದಲಿತ ಹೆಣ್ಣು ಮಗಳ ಮೇಲೆ ದೌರ್ಜನ್ಯ ಎಸಗಿದ್ರು. ಅಂಬೇಡ್ಕರ್​ ಮೊಮ್ಮಗ ಆನಂದ್​ರನ್ನು ಬಂಧಿಸಿ ಜೈಲಿಗೆ ಕಳಿಸಿದ್ರು. ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಯಾವ ಸಂದರ್ಭದಲ್ಲಾದರೂ ನೀವು ಧ್ವನಿ ಎತ್ತಿದ್ದೀರಾ?. ಯಾವುದೋ ಬೀದಿ ರೌಡಿ ರೀತಿ ಮಾತನಾಡುತ್ತಿದ್ದೀರಿ. ನನ್ನ ಬಗ್ಗೆ ನೀವು ಬಳಸಿರುವ ಪದಗಳನ್ನ ಜನ ಕ್ಷಮಿಸಲ್ಲ ಎಂದು ಸಂಸದ ಶ್ರೀನಿವಾಸ ಪ್ರಸಾದ್​ ವಿರುದ್ಧ ಹೆಚ್​.ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಶ್ರೀನಿವಾಸ್ ಪ್ರಸಾದ್ ಹೇಳಿದ್ದೇನು?

ಚುನಾವಣೆಗೆ ಕೇವಲ 4 ರಿಂದ 5 ಲಕ್ಷ ಖರ್ಚು ಮಾಡಿದ್ದಾರೆ. 10 ಕೋಟಿ ಮನೆಗೆ ತಗೆದುಕೊಂಡು ಹೋಗಿದ್ದಾರೆ. ಪೆಟ್ರೋಲ್ ಬಂಕ್, ಬಾರ್ ಮಾಡಿಕೊಂಡಿದ್ದು ಯಾವ ಹಣದಲ್ಲಿ ಹೇಳಿ? ನಾನು ಜೆಡಿಎಸ್ ರಾಜ್ಯಾದ್ಯಕ್ಷ ಆದರೂ ಕೆ.ಆರ್.ನಗರ ಪುರಸಭೆಗೆ ಒಂದೇ ಒಂದು ಟಿಕೆಟ್ ಕೊಟ್ಟಿಲ್ಲ. ನನಗೆ ಅವಮಾನ ಮಾಡಿದರು ಅಂತ ನನ್ನ ಮನೆಗೆ ಬಂದೆ. ನಾನು ಯಡಿಯೂರಪ್ಪ ಅವರ ಬಳಿ ಮುಖಾಮುಖಿಯಾಗಿ ಮಾತನಾಡಿ ಅಂದಿದ್ದೆ. ವಿಶ್ವನಾಥ್‌ಗೆ ಕಾಂಗ್ರೆಸ್‌ನಿಂದ ಏನು ಅನ್ಯಾಯ ಆಗಿದೆ. ಸೋತ ಮೇಲೆ ಸಿದ್ದರಾಮಯ್ಯ ಅವರ ಬಳಿ ದುಡ್ಡು ಕೇಳಿ, ಅಧಿಕಾರವನ್ನೂ ಕೇಳಿದ್ದರು.‌ ಹೀಗಾಗಿಯೇ ವಿಶ್ವನಾಥ್ ಕಾಂಗ್ರೆಸ್ ಬಿಟ್ಟರು ಎಂದು ಹೇಳಿದ್ದರು.

Follow Us
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ