AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಹೋಗುವ ಸಂದರ್ಭ ಬಂದ್ರೆ ಹೋಗ್ತೇನೆ, ಯಾವ ಪಕ್ಷದಲ್ಲಿದ್ರೂ ಅದರ ತಪ್ಪಿನ ಬಗ್ಗೆ ಮಾತಾಡ್ತೇನೆ: ವಿಶ್ವನಾಥ್

ನೀವು ಮತದಾರ ಪಟ್ಟಿಯನ್ನೇ ಬದಲಿಸುತ್ತಿದ್ದೀರಲ್ಲ ನಾಚಿಕೆ ಆಗಲ್ವಾ?ಎಂದು ಸ್ವಪಕ್ಷದ ವಿರುದ್ಧವೇ ಹೆಚ್​ ವಿಶ್ವನಾಥ್ ವಿರೋಧ ಪಕ್ಷದ ರೀತಿಯಲ್ಲಿ ಗುಡುಗಿದ್ದಾರೆ.

ಕಾಂಗ್ರೆಸ್​ಗೆ ಹೋಗುವ ಸಂದರ್ಭ ಬಂದ್ರೆ ಹೋಗ್ತೇನೆ, ಯಾವ ಪಕ್ಷದಲ್ಲಿದ್ರೂ ಅದರ ತಪ್ಪಿನ ಬಗ್ಗೆ ಮಾತಾಡ್ತೇನೆ: ವಿಶ್ವನಾಥ್
ಹೆಚ್ ವಿಶ್ವನಾಥ್, ಎಮ್ ಎಲ್ ಸಿ
TV9 Web
| Edited By: |

Updated on:Dec 17, 2022 | 6:30 PM

Share

ಮೈಸೂರು: ಮತದಾರರ ದತ್ತಾಂಶ ಕಳವು ಪ್ರಕರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಬಿಜೆಪಿ ಸರ್ಕಾರ ಕುಕ್ಕರ್ ಬಾಂಬ್ ಸ್ಫೋಟ (Mangaluru cooker blast) ಮಾಡಿಸಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar)​ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಡಿಸೆಂಬರ್ 19ರಿಂದ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಡಿಕೆಶಿ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಕರೆ ಕೊಟ್ಟಿದೆ. ಆದ್ರೆ, ಇದೀಗ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ (H VIshwanath)​, ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಮರಳಿ ಕಾಂಗ್ರೆಸ್‌ ಸೇರಲು ವಿಶ್ವನಾಥ್ ತೆರೆಮರೆಯ ಕಸರತ್ತು: ಖರ್ಗೆ, ಸಿದ್ದು ಬಳಿಕ ಡಿಕೆಶಿ ಭೇಟಿಯಾದ ಹಳ್ಳಿಹಕ್ಕಿ!

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನೀವು ಮತದಾರ ಪಟ್ಟಿಯನ್ನೇ ಬದಲಿಸುತ್ತಿದ್ದೀರಲ್ಲ ನಾಚಿಕೆ ಆಗಲ್ವಾ? ಬಿಜೆಪಿಯವರು ಮತದಾರರ ಹಕ್ಕನ್ನೇ ಕಸಿಯಲು ಹೊರಟಿದ್ದಾರೆ. ಬಿಜೆಪಿಯ ಈ ನಡೆಯನ್ನು ನಾನು ಒಪ್ಪುವುದಿಲ್ಲ. ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಯಾಕಿಷ್ಟು ಸುಳ್ಳು ಹೇಳ್ತಿದ್ದೀರಿ. ಡಿಕೆಶಿ ಆಗಲಿ ಕಾಂಗ್ರೆಸ್​​​ ಆಗಲಿ ಭಯೋತ್ಪಾದಕರ ಬೆನ್ನು ತಟ್ಟುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕರಂತೆ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದರು.

ಚುನಾವಣೆಯೇ ಪ್ರಜಾಪ್ರಭುತ್ವದ ಆತ್ಮ. ಮತದಾರರ ಹಕ್ಕನ್ನೇ ಕಸಿಯಲು ಹೊರಟಿದ್ದೀರಿ. ಅದನ್ನ ಕೇಳಿದಾಗ ಇನ್ಯಾವುದನ್ನೋ ತಂದು ಬಿಟ್ಟು ಬಿಡ್ತಿರಿ, ಬಿಜೆಪಿ ಈ ನಡೆಯನ್ನು ನಾನು ಒಪ್ಪುವುದಿಲ್ಲ. ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಯಾಕಿಷ್ಟು ಸುಳ್ಳು ಹೇಳ್ತಿದ್ದೀರಿ. ಡಿಕೆಶಿ ಆಗಲಿ, ಕಾಂಗ್ರೆಸ್ ಆಗಲಿ ಭಯೋತ್ಪಾದಕರ ಬೆನ್ನು ತಟ್ಟುತ್ತಿಲ್ಲ. ನೀವೇ ಸುಮ್ಮನೆ ಮಾತನಾಡುತ್ತಿದ್ದೀರಿ ಎಂದು ಕಾಂಗ್ರೆಸ್ ನಾಯಕರ ಪರ ಬ್ಯಾಟಿಂಗ್ ಮಾಡಿದರು.

ಕಾಂಗ್ರೆಸ್​ಗೆ ಹೋಗುವ ಸಂದರ್ಭ ಬಂದರೆ ಹೋಗುತ್ತೇನೆ. ಇಲ್ಲವಾದರೆ ಬಿಜೆಪಿಯಲ್ಲೇ ಇರುತ್ತೇನೆ. ಅದರಲ್ಲಿ ಏನಿದೆ? ಯಾವ ಪಕ್ಷದಲ್ಲಿದ್ರೂ ಅದರ ತಪ್ಪಿನ ಬಗ್ಗೆ ಮಾತಾಡುತ್ತೇನೆ. ನನ್ನ ಅಜೆಂಡಾದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಹೆಚ್​.ವಿಶ್ವನಾಥ್ ತಮ್ಮ ನಿಲುವು ಸ್ಪಷ್ಟಪಡಿಸಿದರು.

ಇತ್ತೀಚೆಗಷ್ಟೇ ವಿಶ್ವನಾಥ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಆ ಬೆಳವಣಿಗೆ ಆದಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು. ಮೂಲಗಳ ಪ್ರಕಾರ ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್​ನತ್ತ ಮುಖ ಮಾಡಿದ್ದು, ಈ ಬಗ್ಗೆ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:27 pm, Sat, 17 December 22

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!