AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್ ವೆಸ್ಟ್ ಎಂಡ್ ಬಗ್ಗೆ ಇನ್ನೂ ಎಳೆ ಎಳೆಯಾಗಿ ಬಿಚ್ಚಿಡಬೇಕಾಗುತ್ತದೆ ಎಂದ ಬಿಜೆಪಿ ನಾಯಕ, ಸಿಡಿ ಯಾತ್ರೆ ಮಾಡಲಿ ಎಂದ ಎಚ್​ಡಿಕೆ

ಕುಮಾರಸ್ವಾಮಿ ಕುರಿತ ಸಿಡಿ, ತೋಟದ ಮನೆ ಮತ್ತು ತಾಜ್ ವೆಸ್ಟ್ ಎಂಡ್ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಡಬೇಕಾಗುತ್ತದೆ ಎಂದು ಬಿಜೆಪಿ ಎಂಎಲ್​ಸಿ ಎನ್.ರವಿಕುಮಾರ್ ಹೇಳಿದರು.

ತಾಜ್ ವೆಸ್ಟ್ ಎಂಡ್ ಬಗ್ಗೆ ಇನ್ನೂ ಎಳೆ ಎಳೆಯಾಗಿ ಬಿಚ್ಚಿಡಬೇಕಾಗುತ್ತದೆ ಎಂದ ಬಿಜೆಪಿ ನಾಯಕ, ಸಿಡಿ ಯಾತ್ರೆ ಮಾಡಲಿ ಎಂದ ಎಚ್​ಡಿಕೆ
ಎನ್.ರವಿಕುಮಾರ್, H.D.ಕುಮಾರಸ್ವಾಮಿ
TV9 Web
| Edited By: |

Updated on:Feb 05, 2023 | 9:12 PM

Share

ಬೆಂಗಳೂರು: ಕುಮಾರಸ್ವಾಮಿ (H D Kumaraswamy) ಕುರಿತ ಸಿಡಿ, ತೋಟದ ಮನೆ ಮತ್ತು ತಾಜ್ ವೆಸ್ಟ್ ಎಂಡ್ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಡಬೇಕಾಗುತ್ತದೆ ಎಂದು ಬಿಜೆಪಿ ಎಂಎಲ್​ಸಿ ಎನ್.ರವಿಕುಮಾರ್ (N Ravikumar) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇದೇ ತರಹ ಮುಂದುವರಿದ್ರೆ ನಾವು ಕೂಡ ಮುಂದೆ ಮಾತಾಡ್ತೇವೆ. ಹೆಚ್​.ಡಿ.ಕುಮಾರಸ್ವಾಮಿ ಏನೂ ಬಹಳ ಸತ್ಯ ಹರಿಶ್ಚಂದ್ರ ಅಲ್ಲ. ತಾಜ್ ವೆಸ್ಟ್ ಎಂಡ್​ ಹೋಟೆಲ್​ನಿಂದ ಆಡಳಿತ ನಡೆಸುತ್ತಿದ್ದರು. H.D.ಕುಮಾರಸ್ವಾಮಿ ಸ್ವಜಾತಿ ಬಿಟ್ಟು ಹೊರಬರದ ಕೂಪ ಮಂಡೂಕ ಎಂದು ಎನ್.ರವಿಕುಮಾರ್ ವಾಗ್ದಾಳಿ ಮಾಡಿದರು.

ನಿಮ್ಮ ಕುಟುಂಬ ಬಿಟ್ಟು ಜೆಡಿಎಸ್ ಸಿಎಂ ಅಭ್ಯರ್ಥಿ ಯಾರೆಂದು ಹೇಳಿ

ಕೂಪ ಮಂಡೂಕ ನಾಯಕ ಯಾರಾದ್ರು ಇದ್ದರೆ ಅದು ಕುಮಾರಸ್ವಾಮಿ. ನಿಮ್ಮ ಕುಟುಂಬ ಬಿಟ್ಟು ಜೆಡಿಎಸ್ ಸಿಎಂ ಅಭ್ಯರ್ಥಿ ಯಾರೆಂದು ಹೇಳಿ ಎಂದು ಪ್ರಶ್ನಿಸಿದರು. ಬ್ರಾಹ್ಮಣ ಸಮಾಜದ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಬಿಜೆಪಿ ಖಂಡಿಸುತ್ತೆ. ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರುತ್ತೆ ಅಂತಾ ಅಂದುಕೊಂಡಿದ್ದಾರೆ. ನನ್ನ ಮನೆ ಬಾಗಿಲಿಗೆ ಬರಬೇಕೆಂದು ಅದ್ಭುತ ಆಸೆ ಇಟ್ಟುಕೊಂಡಿದ್ದಾರೆ. ಕೂಪ ಮಂಡೂಕ ಯೋಚನೆಗಳಿಗೆ H.D.ಕುಮಾರಸ್ವಾಮಿ ಉದಾಹರಣೆ ಎಂದರು.

ಇದನ್ನೂ ಓದಿ: ಸುಮ್ಮ ಸುಮ್ಮನೆ ಹೆದರಿಸೋಕೆ ಬಂದರೆ ತೊಡೆ ತಟ್ಟೋದು ನನಗೆ ಗೊತ್ತಿದೆ: ಸಿದ್ದರಾಮಯ್ಯ

ಸತ್ಯ ಹೇಳಿದರೆ H.D.ಕುಮಾರಸ್ವಾಮಿಗೆ ಕೋಪ ಬರುತ್ತೆ

ಪಂಚರತ್ನ ಯಾತ್ರೆ ಬಗ್ಗೆ ಪ್ರಹ್ಲಾದ್ ಜೋಶಿ ಸರಿಯಾಗಿಯೇ ಹೇಳಿದ್ದಾರೆ. ಸತ್ಯ ಹೇಳಿದರೆ ಮಾಜಿ ಸಿಎಂ H.D.ಕುಮಾರಸ್ವಾಮಿಗೆ ಕೋಪ ಬರುತ್ತದೆ. ಕರ್ನಾಟಕದಲ್ಲಿ ಪೇಶ್ವೆ ಬ್ರಾಹ್ಮಣ, ಸ್ಮಾರ್ತ ಬ್ರಾಹ್ಮಣ ಅಂತಾ ಏನಿಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿ ಏನೂ ಪಿಹೆಚ್​ಡಿ ಮಾಡಿದ್ದಾರಾ ಎಂದರು. ಜೆಡಿಎಸ್​ನಲ್ಲಿದ್ದ ಒಬ್ಬ ಬ್ರಾಹ್ಮಣ YSV ದತ್ತ ಯಾಕೆ ಬಿಟ್ಟು ಹೋದರು? ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ಭಯದಿಂದ HDK ಮಾತಾಡ್ತಿದ್ದಾರೆ. ಜೆಡಿಎಸ್ ಬಗ್ಗೆ ನಾವು ಯಾವತ್ತೂ ಸಾಫ್ಟ್ ಇರಲಿಲ್ಲ ಎಂದು ಎನ್.ರವಿಕುಮಾರ್ ಹೇಳಿದರು.

ರವಿ ಕುಮಾರ್​ಗೆ ಕುಮಾರಸ್ವಾಮಿ ತಿರುಗೇಟು

ಹೆಚ್‌ಡಿಕೆರದ್ದು ಸಿಡಿಯಿದೆ ಎಂದು N.ರವಿಕುಮಾರ್‌ ಹೇಳಿಕೆ ವಿಚಾರಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಬಿಜೆಪಿಯವ್ರು ವಿಜಯೋತ್ಸವ ಯಾತ್ರೆ ಬಿಟ್ಟು, ಸಿಡಿ ಯಾತ್ರೆ ಮಾಡಲಿ. ಸಿಡಿ ತೋಟದ ಮನೆಯದ್ದೋ ಅಥವಾ ವೆಸ್ಟೆಂಡ್‌ ಹೋಟೆಲ್‌ನದ್ದೋ ಯಾವ್ಯಾವ ಸಿಡಿ ಇವೆ ಎಂದು ಯಾತ್ರೆಯಲ್ಲಿ ತೋರಿಸಿಕೊಂಡು ಹೋಗ್ಲಿ. ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ್‌ ಒಂದು ಸಿಡಿ ಬಿಡ್ತಾರಂತಲ್ಲಾ ಎಂದು ಪ್ರಶ್ನಿಸಿದರು. ಇದನ್ನು ಸೇರಿಸಿ 70MM ಸಿನಿಮಾ ತೋರಿಸಿಕೊಂಡು ಹೋಗಲು ಹೇಳಿ. ಸ್ಕ್ರೀನ್ ವ್ಯವಸ್ಥೆ ಮಾಡುತ್ತೇನೆಂದು ಸಚಿವ ಮುನಿರತ್ನ ಹೇಳಿದ್ದಾರೆ ಎಂದು ಟಾಂಗ್​ ನೀಡಿದರು.

ಇದನ್ನೂ ಓದಿ: ಪ್ರಮೋದ್ ಮುತಾಲಿಕ್ ಸ್ಪರ್ಧೆಯಿಂದ ಹಿಂದೂ ಪರ ರಾಜಕೀಯ ಪಕ್ಷಕ್ಕೆ ಹಿನ್ನಡೆ: ಸುನಿಲ್ ಕುಮಾರ್

ಸಿಡಿ ವಿಚಾರದಲ್ಲಿ BJPಯವ್ರು ಎಕ್ಸ್‌ಪರ್ಟ್‌ ಅಂತಾ ನಿನ್ನೆಯೇ ಹೇಳಿದ್ದೀನಿ. ಬಿಜೆಪಿಯವ್ರು ಲೂಟಿ ಮಾಡಿದ್ದಾರೆ, ಬಿಜೆಪಿಗೆ ಇದು ಕೊನೆ ಚುನಾವಣೆ. ಅವರು ಮಾಡಿರುವ ಕರ್ಮ ಕಾಂಡಗಳಿಂದ ಮೂಲೆ ಗುಂಪು ಆಗುತ್ತಾರೆ ಎಂದು ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:22 pm, Sun, 5 February 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ