Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕರ್ನಾಟಕದಲ್ಲಿ ರಾಹುಕಾಲ ಆರಂಭ: ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ವ್ಯಂಗ್ಯಭರಿತ ಸ್ವಾಗತ!

ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಇರುವ ಕರ್ನಾಟಕದಲ್ಲಿ ಕಾಂಗ್ರೆಸ್‌ ಪರ ಅಲೆ ಎಬ್ಬಿಸಲು ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಆಗಮಿಸಿದ್ದು, ಇದಕ್ಕೆ ಬಿಜೆಪಿ ವ್ಯಂಗ್ಯಭರಿತವಾಗಿ ಸ್ವಾಗತ ಮಾಡಿದೆ.

ಇಂದಿನಿಂದ ಕರ್ನಾಟಕದಲ್ಲಿ  ರಾಹುಕಾಲ ಆರಂಭ: ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ವ್ಯಂಗ್ಯಭರಿತ ಸ್ವಾಗತ!
bharat jodo yatra In Karnataka
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 30, 2022 | 12:06 PM

ಬೆಂಗಳೂರು/ಚಾಮರಾನಗರ: ದೇಶದಲ್ಲಿ ಒಗ್ಗಟ್ಟು ಮೂಡಿಸುವ ಅಭಿಲಾಷೆಯೊಂದಿಗೆ ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ (Bharat Jodo Yatra)ಹೆಸರಿನಲ್ಲಿ ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು 20 ದಿನಗಳ ಕಾಲ ಕೇರಳದಲ್ಲಿ ಯಾತ್ರೆ ನಡೆಸಿ ಇಂದು(ಸೆಪ್ಟೆಂಬರ್ 30) ಕರ್ನಾಟಕ ಪ್ರವೇಶಿಸಿದ್ದಾರೆ.

ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ (Rahul Gandhi) ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ರಾಹುಲ್ ಗಾಂಧಿಯವರಿಗೆ ರೇಷ್ಮೆ ಹಾರ ಹಾಕುವ ಮೂಲಕ‌ ಸ್ವಾಗತ ಕೋರಿದರು. ಜೋಡೋ ಯಾತ್ರೆ ನೇತೃತ್ವದ ವಹಿಸಿಕೊಂಡು ಕರ್ನಾಟಕಕ್ಕೆ ಆಗಮಿಸುತ್ತಿದ್ದಂತೆಯೇ ಇತ್ತ ಬಿಜೆಪಿ (BJP)ಐಟಿ ಸೆಲ್ ಹಾಗೂ ನಾಯಕರು ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಗಿ ಸ್ವಾಗತಿಸಿದ್ದಾರೆ.

ಇದನ್ನೂ ಓದಿ: Bharat Jodo Yatra: ಕರ್ನಾಟಕಕ್ಕೆ ರಾಹುಲ್ ಗಾಂಧಿ ಪ್ರವೇಶ; ತಮಿಳುನಾಡು ಗಡಿಯಲ್ಲೇ ಸಿದ್ದರಾಮಯ್ಯ ಸ್ವಾಗತ

ವ್ಯಂಗ್ಯವಾಗಿ ಸ್ವಾಗತಿಸಿದ ಬಿಜೆಪಿ

ಈ ಹಿಂದೆ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾಗ ಕಾಂಗ್ರೆಸ್​ ಸಾಮಾಜಿ ಜಾಲತಾಣಗಳಲ್ಲಿ ವ್ಯಂಗ್ಯಭರತವಾಗಿ ಸ್ವಾಗತ ಮಾಡಿತ್ತು. ಇದೀಗ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಕರ್ನಾಟಕಕ್ಕೆ ಆಮಿಸಿದ್ದು, ಇದಕ್ಕೆ ಬಿಜೆಪಿ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಗಿ ಸ್ವಾಗತ ಕೋರಿದೆ.

ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ ಎಂದು ಟ್ವೀಟ್ ಮಾಡಿದೆ.

ಜಾಮೀನಿನ ಆಧಾರದಲ್ಲಿ ಜೈಲಿನಿಂದ ಹೊರಗಿದ್ದುಕೊಂಡು ಭಾರತ್‌ ಜೋಡೋ ಯಾತ್ರೆ ಮಾಡುತ್ತಿರುವ ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್ ಗಾಂಧಿ ಅವರಿಗೆ ಕರ್ನಾಟಕಕ್ಕೆ ಆತ್ಮೀಯ ಸ್ವಾಗತ.

ಇದನ್ನೂ ಓದಿ: Bharat Jodo Yatra: ಭಾರತ ಜೋಡಿಸುತ್ತಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷ ಜೋಡಿಸುವುದು ಯಾವಾಗ

ಭಯೋತ್ಪಾದಕರ ಬಗ್ಗೆ ಮೃದು ಧೊರಣೆ ಹೊಂದಿ, ದೇಶ ವಿಭಜಕರ ಜೊತೆ ಸಂಬಂಧ ಹೊಂದಿರುವ ರಾಹುಲ್‌ ಗಾಂಧಿ ಅವರಿಗೆ ಸ್ವಾಗತ. ರಾಹುಲ್ ಗಾಂಧಿ‌ ಮಾಡುತ್ತಿರುವುದು ಭಾರತ ಜೋಡೋ ಯಾತ್ರೆಯಲ್ಲ, ಎಐಸಿಸಿ ಮುಂದಿನ ಅಧ್ಯಕ್ಷ ಸ್ಥಾನವನ್ನು ನಕಲಿ ಗಾಂಧಿಗಳ ಕುಟುಂಬದಲ್ಲೇ ಇರಿಸಿಕೊಳ್ಳಲು ಮತ್ತು ನಿಯಂತ್ರಿಸಲು ನಡೆಸುತ್ತಿರುವ ಕಸರತ್ತು ಎಂದು ಟಾಂಗ್ ಕೊಟ್ಟಿದೆ.

‘ಭಾರತ್​ ಜೋಡೋ’ ಪಾದಯಾತ್ರೆ ಬಗ್ಗೆ ಜೋಶಿ ಟ್ವೀಟ್ ​ವಿಭಜನಕಾರಿ ಶಕ್ತಿಗಳೊಂದಿಗೆ ಭಾರತ್ ಜೋಡೋ ಚರ್ಚಿಸಿ. ಭಾರತ ಮಾತೆಗೆ ಅಪಮಾನಿಸುತ್ತ ಜಾತ್ರೆಯೊಂದಿಗೆ ಬಂದಿದ್ದೀರಿ. ಭಾರತ್ ಜೋಡೋ ಯಾತ್ರೆ ಎಂಬ ಜಾತ್ರೆ ಜೊತೆ ಬಂದಿದ್ದೀರಿ. ಭಾರತಮಾತೆಗೆ ಅಪಾರ ಗೌರವ ಕೊಡುವ ಜಾಗಕ್ಕೆ ಬಂದಿದ್ದೀರಿ. ಭಾರತಮಾತೆಗೆ ಗೌರವ ಕೊಡುವ ಕರ್ನಾಟಕಕ್ಕೆ ಬಂದಿದ್ದೀರಿ, ಇಲ್ಲಿ ನೀವು ಅಪಮಾನಿಸಲ್ಲ ಎಂಬ ಆಶಯದೊಂದಿಗೆ ಸ್ವಾಗತ. ಭಾರತಮಾತೆಗೆ ಅಪಮಾನಿಸಲ್ಲವೆಂಬ ಆಶಯದೊಂದಿಗೆ ಸ್ವಾಗತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Fri, 30 September 22

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್