AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೆನ್ನೆಗೆ ಹೊಡೆದ್ರೆ ತಲೆಯನ್ನೇ ತೆಗೆಯುವ ಸಂತಾನದವರು ನಾವು: ಮತ್ತೆ ವಿವಾದದ ಕಿಡಿ ಹೊತ್ತಿಸಿದ ಅನಂತಕುಮಾರ್ ಹೆಗಡೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಗನೇ ಎನ್ನುವ ಮೂಲಕ ವಿವಾದ ಸೃಷ್ಟಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಮತ್ತೆ ತಮ್ಮ ಮಾತಿನ ವರಸೆ ಮುಂದುವರೆಸಿದ್ದಾರೆ. ಒಂದು ಕೆನ್ನೆಗೆ ಹೊಡೆದ್ರೆ ತಲೆಯನ್ನೇ ತೆಗೆಯುವ ಸಂತಾನದವರು ನಾವು ಎಂದಿದ್ದಾರೆ. ಈ ಮೂಲಕ ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಒಂದು ಕೆನ್ನೆಗೆ ಹೊಡೆದ್ರೆ ತಲೆಯನ್ನೇ ತೆಗೆಯುವ ಸಂತಾನದವರು ನಾವು: ಮತ್ತೆ ವಿವಾದದ ಕಿಡಿ ಹೊತ್ತಿಸಿದ ಅನಂತಕುಮಾರ್ ಹೆಗಡೆ
ಅನಂತಕುಮಾರ್ ಹೆಗಡೆ
TV9 Web
| Edited By: |

Updated on:Jan 16, 2024 | 9:41 PM

Share

ಕಾರವಾರ, (ಜನವರಿ 16): ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಒಂದು ಕೆನ್ನೆಗೆ ಹೊಡೆದ್ರೆ ಮತ್ತೊಂದು ಕೆನ್ನೆ ತೋರಿಸುವ ಸಂತಾನ ನಮ್ಮದಲ್ಲ. ಒಂದು ಕೆನ್ನೆಗೆ ಹೊಡೆದರೆ ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು. ನಮ್ಮದು ವೀರ ಸಂತಾನ, ಹೇಡಿಗಳ ಸಂತಾನ ಅಲ್ಲ ಎಂದು ಗುಡುಗಿದರು.

ನಮ್ಮಮ್ಮ ತನ್ನ ಎದೆಹಾಲು ಕುಡಿಸಿ ಬೆಳೆಸಿದ್ದಾರೆ, ಬೇವರ್ಸಿ ಹಾಲನ್ನು ಅಲ್ಲ. ತಾಯಿ ಹಾಲು ಕುಡಿದಿದ್ದಕ್ಕೆ ಗಂಡುಭಾಷೆ ಹುಟ್ಟಿನಿಂದಲೇ ಬಂದಿದೆ. ಏಕವಚನದಲ್ಲಿ ನೀವು ಮಾತಾಡಿದ್ರೆ ನಾವೂ ಏಕಚನದಲ್ಲಿ ಮಾತನಾಡುತ್ತೇವೆ. ಸಿಎಂ ಸಿದ್ದರಾಮಯ್ಯನವರೇ ನೀವು ಸಭ್ಯತೆ ಬಗ್ಗೆ ಕಲಿತುಕೊಳ್ಳಿ. ವಿಧಾನಸಭೆಯಲ್ಲಿ ಶಾಸಕರಿಗೆ, ಪತ್ರಕರ್ತರಿಗೆ ಏಕವಚನದಲ್ಲಿ ಮಾತಾಡುತ್ತೀರಿ. ನಮಗೆ ತಾಕತ್‌ ಇಲ್ಲವಾ?, ನಮಗೆ ಮಾತನಾಡಲು ಬರೋದಿಲ್ಲವಾ? ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಅನಂತಕುಮಾರ ಹೆಗಡೆ ಎಲ್ಲಿ ಸಿಗ್ತಾನೋ ಅಲ್ಲೇ ಹಿಡಿದು ಹೊಡೆಯುತ್ತೇವೆ: ಮಾಜಿ ಶಾಸಕ ಎಸ್.ರಾಮಪ್ಪ ಎಚ್ಚರಿಕೆ

ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ, ನಡೆಯಲಿ. ಈಶ್ವರನಿಗೆ ರುದ್ರಾಭಿಷೇಕ ನಡೆಯುತ್ತಿದೆ, ನಡೆಯಲಿ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಸುಮ್ಮನಿರುವ ಪ್ರಶ್ನೆಯೇ ಇಲ್ಲ ಜೀವ ಇರುವವರೆಗೆ ತಲೆತಗ್ಗಿಸುವುದು ಸಾಧ್ಯವೇ ಇಲ್ಲ. ನಾನೇನಾದರೂ ತಲೆತಗ್ಗಿಸಿದರೆ ನೀವು ಹಾಕಿದ ವೋಟಿಗೆ ಅಪಮಾನ. ಯಾರ ಕುಣಿಯುತ್ತಾರೋ ಕುಣಿಯಲಿ, ನಮಗೂ ತಾಂಡವ ನೃತ್ಯ ಬರುತ್ತೆ ಎಂದರು.

ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಹೆಗಡೆ ನನ್ನ ವಿರುದ್ಧ ಕೇಸ್ ದಾಖಲಿಸಿ ನನ್ನನ್ನು ಮುನ್ನೆಲೆಗೆ ತಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ. ಅಯೋಧ್ಯೆಯ ರಾಮಮಂದಿರವನ್ನು ಯಾರೋ ಗುತ್ತಿಗೆದಾರ ಕಟ್ಟಿದ್ದಲ್ಲ. ಹಿಂದೂ ಸಮಾಜದ ಭಾವನೆ, ಜಾಗೃತ ಹಿಂದೂ ಸಮಾಜ ಕಟ್ಟಿದ ಮಂದಿರ. ಹಿಂದೂ ಸಮಾಜ ಜಾತ್ಯತೀತತೆಯಿಂದ ಒಡೆದ ತುತ್ತೂರಿಯ ಧ್ವನಿ ಅಲ್ಲ. ಹಿಂದೂ ಸಮಾಜ ಎಂಬುದು ಜಾಗೃತ ರಣಕಹಳೆ. ಯಾರೂ ಬೇಕಾದರೂ ಸಂಸದ ಅಥವಾ ಶಾಸಕರಾಗಬಹುದು. ಆದರೆ ಒಬ್ಬ ನಾಯಕನಾಗಬೇಕಾದರೆ ವಿವಾದವನ್ನು ಸ್ಥಾನ ಮಾಡಬೇಕು ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Tue, 16 January 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ