AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚೆಗೆ ನಾನು ಕಲ್ಲು ಹಾಕಲ್ಲ: ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು

ತನ್ನ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ ಅವರನ್ನು ಕೊಚ್ಚೆಗೆ ಹೋಲಿಸಿದರು. ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ತಿರುಗೇಟು ಕೊಟ್ಟರು. ಪ್ರತಾಪ್ ಸಿಂಹ ಅವರನ್ನು ಪ್ರದೀಪ್ ಈಶ್ವರ್ ಅವರು ಮುಠಾಳ, ಅಯೋಗ್ಯ ಎಂದೆಲ್ಲಾ ಹೇಳಿದ್ದರು.

ಕೊಚ್ಚೆಗೆ ನಾನು ಕಲ್ಲು ಹಾಕಲ್ಲ: ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು
ಪ್ರತಾಪ್ ಸಿಂಹ ಮತ್ತು ಪ್ರದೀಪ್ ಈಶ್ವರ್
ರಾಮ್​, ಮೈಸೂರು
| Updated By: Rakesh Nayak Manchi|

Updated on:Jan 13, 2024 | 3:34 PM

Share

ಮೈಸೂರು, ಜ.13: ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ (Pratap Simha) ಅವರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರಿಗೆ ಕೌಂಟರ್ ಕೊಟ್ಟರು.

ಮೈಸೂರಿನಲ್ಲಿ ಮಾತನಾಡಿದ ಅವರು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದರು. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ‌. ನಾನು ತಿಳಿಗೇಡಿಯಲ್ಲ, ನಾನು ಆ ಕೊಚ್ಚೆಗೆ ಕಲ್ಲು ಹಾಕಲ್ಲ ಎಂದು ಹೇಳುವ ಮೂಳಕ ಪ್ರದೀಶ್ ಈಶ್ವರ್ ಹೇಳಿಕೆಗಳಿಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದರು.

ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಅವರ ಗೆಲುವು ನಿಶ್ಚಿತ ಎಂದು ಹೇಳುವ ಮೂಲಕ ಪ್ರದೀಪ್ ಈಶ್ವರ್ ಅವರು ಯತೀಂದ್ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ಕುಮಾರಸ್ವಾಮಿ ಬಿಡದಿ ಮನೆಗೆ ತೆರಳಿ ಶುಭಕೋರಿ ಆಶೀರ್ವಾದ ಪಡೆದ ಸಂಸದ ಪ್ರತಾಪ್ ಸಿಂಹ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಚುನಾವಣೆಯಲ್ಲಿ ಯತೀಂದ್ರ ಅವರು ಪ್ರತಿಸ್ಪರ್ಧಿಯಾದರೆ ಉತ್ತಮ ಎಂದರು. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ. ನನ್ನ ಪರ ಎರಡು ಪಕ್ಷದ (ಬಿಜೆಪಿ-ಜೆಡಿಎಸ್) ನಾಯಕರ ಆಶೀರ್ವಾದವಿದೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಿರ್ಣಯಿಸಿದ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ರಾಮ ಜನ್ಮಭೂಮಿಗಾಗಿ ಎಲ್​ಕೆ ಅಡ್ವಾಣಿ ರಥಯಾತ್ರೆ ಮಾಡಿದ್ದರು. ರವಿಶಂಕರ್ ಪ್ರಸಾದ್ ಕಾನೂನು ಹೋರಾಟ ಮಾಡಿದವರು. ಪ್ರಧಾನಿ ಮೋದಿ ಅವರು ದೇಶಾದ್ಯಂತ ಜಾಗೃತಿ ಮೂಡಿಸಿದವರು. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿಯ ಪಾತ್ರ ದೊಡ್ಡದಿದೆ. ಆದರೆ ಕಾಂಗ್ರೆಸ್ ಪಕ್ಷದ ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಈ ಕಾರಣಕ್ಕೆ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದರು.

ಅಯೋಧ್ಯೆಗೆ ಬಿಡಿಗಾಸು ಕೊಡಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಉದ್ಘಾಟನೆ ನಂತರ ಅಯೋಧ್ಯೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ, ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ ಕಾಂಗ್ರೆಸ್​ನ ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ ಶಿಷ್ಯರ ಜೊತೆ ಅಯೋಧ್ಯೆಗೆ ಹೋಗಿ ಬರಲಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Sat, 13 January 24

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ