AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ, ಫೇಸ್​ಬುಕ್​​ನಲ್ಲಿ ಪೋಸ್ಟ್ ಮಾಡಿದ ಸಂಸದ ಜಾಧವ್! ವಾಸ್ತು ನೋಡಿ ಹಕ್ಕು ಚಲಾಯಿಸಿದ ರೇವಣ್ಣ!

ಸಂಸದ ಡಾ. ಉಮೇಶ್ ಜಾಧವ್ ಫೇಸ್​ಬುಕ್​​ ಪೋಸ್ಟ್ ಹೀಗಿದೆ: ಇಂದು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಭಾಗವಹಿಸಿ ಜಿಲ್ಲೆಯ ತಾಲೂಕಾ ಪಂಚಾಯತ ಕಛೇರಿಗೆ ತೆರಳಿ ನನ್ನ ಮತವನ್ನು ಚಲಾಯಿಸಿದೆ. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲ್ಲುವ ವಿಶ್ವಾಸ ನಮಗಿದೆ. #MLCElections

ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ, ಫೇಸ್​ಬುಕ್​​ನಲ್ಲಿ ಪೋಸ್ಟ್ ಮಾಡಿದ ಸಂಸದ ಜಾಧವ್! ವಾಸ್ತು ನೋಡಿ ಹಕ್ಕು ಚಲಾಯಿಸಿದ ರೇವಣ್ಣ!
ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ, ಫೇಸ್​ಬುಕ್​​ನಲ್ಲಿ ಪೋಸ್ಟ್ ಮಾಡಿದ ಸಂಸದ ಜಾಧವ್! ವಾಸ್ತು ನೋಡಿ ಹಕ್ಕು ಚಲಾಯಿಸಿದ ರೇವಣ್ಣ!
TV9 Web
| Edited By: |

Updated on:Dec 10, 2021 | 10:08 AM

Share

ಕಲಬುರಗಿ: ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದ ವೇಳೆ ಬಿಜೆಪಿ ಸಂಸದ ಜಾಧವ್ ಗೌಪ್ಯ ಮತದಾನ ನಿಯಮ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಎದ್ದುಕಾಣುತ್ತಿದೆ. ನನ್ನ ಮತ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ ಪರ ಚಲಾಯಿಸಿದೆ ಎಂದು ಬಿ.ಜಿ.ಪಾಟೀಲ್​ಗೆ ಮತಚಲಾವಣೆ ಬಗ್ಗೆ ಫೇಸ್​ಬುಕ್​​ನಲ್ಲಿ ಸಂಸದ ಡಾ. ಉಮೇಶ್ ಜಾಧವ್ ಪೋಸ್ಟ್ ಒಂದನ್ನು ಚಿತ್ರ ಸಮೇತ ಹಾಕಿದ್ದಾರೆ. ಇದರೊಂದಿಗೆ ಕಲಬುರಗಿ ಕ್ಷೇತ್ರದ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ತಾವು ವೋಟ್​ ಹಾಕಿರುವ ಬಗ್ಗೆ ಬಹಿರಂಗವಾಗಿ ಹೇಳಿದಂತಾಗಿದೆ.

ಸಂಸದ ಡಾ. ಉಮೇಶ್ ಜಾಧವ್ ಫೇಸ್​ಬುಕ್​​ ಪೋಸ್ಟ್ ಹೀಗಿದೆ: ಇಂದು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಭಾಗವಹಿಸಿ ಜಿಲ್ಲೆಯ ತಾಲೂಕಾ ಪಂಚಾಯತ ಕಛೇರಿಗೆ ತೆರಳಿ ನನ್ನ ಮತವನ್ನು ಚಲಾಯಿಸಿದೆ. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲ್ಲುವ ವಿಶ್ವಾಸ ನಮಗಿದೆ. #MLCElections

ವಾಸ್ತು ಮತ್ತು ಸಂಖ್ಯಾ ಶಾಸ್ತ್ರದ ಪ್ರಕಾರ ಹಕ್ಕು ಚಲಾಯಿಸಿದ ರೇವಣ್ಣ ಕುಟುಂಬಸ್ಥರು:

hd revanna

ವಾಸ್ತು ಪ್ರಕಾರ ಮತದಾನ ಮಾಡಿಸಿದ ಹೆಚ್.ಡಿ. ರೇವಣ್ಣ

ಈ ಮಧ್ಯೆ ಇಂದು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕೊನೆಯ ಪುತ್ರ ಚುನಾವಣಾ ಕಣದಲ್ಲಿದ್ದು ರೇವಣ್ಣ ಕುಟುಂಬದವರು ವಾಸ್ತು ಮತ್ತು ಸಂಖ್ಯಾ ಶಾಸ್ತ್ರದ ಪ್ರಕಾರ ಹಕ್ಕು ಚಲಾಯಿಸಿದ್ದಾರೆ. ರೇವಣ್ಣ ಅವರು ವಾಸ್ತು ಪ್ರಕಾರ ಹಕ್ಕು ಚಲಾಯಿಸುವ ಮುನ್ನ ಹೊಣೆನರಸೀಪುರದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಮಧ್ಯೆ, ಅವರ ಮತ್ತೊಬ್ಬ ಪುತ್ರ ಪ್ರಜ್ಚಲ್ ರೇವಣ್ಣ ಒಂಬತ್ತು ಅದೃಷ್ಟ ಸಂಖ್ಯೆ ಎನ್ನೋ ಕಾರಣಕ್ಕೆ ನಂಬರ್ ಪ್ರಕಾರ ಹಕ್ಕು ಚಲಾಯಿಸಿದರು.

ಇನ್ನು ಹಾಸನ ವಿಧಾನ ಪರಿಷತ್ ಚುನಾವಣೆಗೆ ಇಂದು ಮತದಾನ ಹಿನ್ನೆಲೆಯಲ್ಲಿ ಮತದಾನಕ್ಕೂ ಮೊದಲು ಸಂಸದ ಪ್ರಜ್ವಲ್ ರೇವಣ್ಣ ಹೊಳೆನರಸೀಪುರ ಶ್ರಿಲಕ್ಷ್ಮಿ ನರಸಿಂಹ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಕೂಡ ಇದೇ ದೇವಸ್ಥಾನದಲ್ಲಿ ತಂದೆ ಹೆಚ್.ಡಿ.ರೇವಣ್ಣ ಜೊತೆಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಹೆಚ್.ಡಿ.ರೇವಣ್ಣ ಪುರಸಭೆ ಸದಸ್ಯರಿಂದ ವಾಸ್ತು ಪ್ರಕಾರ ಮತದಾನ ಮಾಡಿಸಿದ್ದಾರೆ.

Published On - 9:57 am, Fri, 10 December 21

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ