AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ- ಕಾಂಗ್ರೆಸ್ ನಾಯಕರ ಕಿತ್ತಾಟ ಪ್ರಕರಣ: ರೌಡಿ ಡಿಕೆ ಬ್ರದರ್ಸ್​ ಎಂದು ಬಿಜೆಪಿ ಘಟಕ ಟ್ವೀಟ್

ಗೂಂಡಾಗಿರಿಯಿಂದಾಗಿ ರಾಮನಗರ ಹೆಸರುಗಳಿಸಬಾರದು. ಇಂತಹ ಅನಾಗರಿಕ ವರ್ತನೆ ಕೇವಲ ಒಂದು ಪಕ್ಷದಿಂದ ಸಾಧ್ಯ. ನಿಮ್ಮ ಹೋರಾಟ ಅಭಿವೃದ್ಧಿ ವಿಚಾರವಾಗಿರಲಿ ಎಂದು ಅಶ್ವತ್ಥ್​ ಹೇಳಿದ್ದಾರೆ.

ಬಿಜೆಪಿ- ಕಾಂಗ್ರೆಸ್ ನಾಯಕರ ಕಿತ್ತಾಟ ಪ್ರಕರಣ: ರೌಡಿ ಡಿಕೆ ಬ್ರದರ್ಸ್​ ಎಂದು ಬಿಜೆಪಿ ಘಟಕ ಟ್ವೀಟ್
ಡಿಕೆ ಶಿವಕುಮಾರ್ (ಎಡ), ಡಿಕೆ ಸುರೇಶ್ (ಬಲ)
TV9 Web
| Edited By: |

Updated on:Jan 03, 2022 | 5:21 PM

Share

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್, ಸಚಿವ ಅಶ್ವತ್ಥ್ ನಾರಾಯಣ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿ ರೌಡಿ ಡಿಕೆ ಬ್ರದರ್ಸ್​ ಎಂದು ಬಿಜೆಪಿ ಘಟಕ ಆಕ್ರೋಶ ಹೊರಹಾಕಿದೆ. ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಅಧಿಕಾರ ಹಿಡಿದು ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇವರು ಅಧಿಕಾರಕ್ಕೆ ಬಂದ್ರೆ ಕಂಡ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಜನರು ಇಂಥವರಿಗೆ ಅಧಿಕಾರ ನೀಡಲಾರರು ಎಂದು ಡಿಕೆ ಬ್ರದರ್ಸ್​ ವಿರುದ್ಧ ಟ್ವಿಟರ್​​ನಲ್ಲಿ ರಾಜ್ಯ ಬಿಜೆಪಿ ಗರಂ ಆಗಿದೆ.

ಸಂಸದ ಡಿ.ಕೆ.ಸುರೇಶ್-ಸಚಿವ ಅಶ್ವತ್ಥ್ ನಾರಾಯಣ ಕಿತ್ತಾಟ ಘಟನೆ ಸಂಬಂಧಿಸಿ ಟಿವಿ9ಗೆ ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ದೇವರಾಜ ಅರಸು, ಗುಂಡೂರಾವ್ ಕಾಲದಲ್ಲಿ ಗೂಂಡಾಗಿರಿ. ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಗೂಂಡಾಗಿರಿಯನ್ನು ತರುತ್ತಿದೆ. ಸಚಿವರ ಮೇಲೆಯೇ ಹಲ್ಲೆ ಮಾಡಲು ಅವರು ಹೋಗಿದ್ದಾರೆ. ಹೀಗಿರುವಾಗ ಜನಸಾಮಾನ್ಯರನ್ನು ಇವರು ಬಿಡ್ತಾರಾ? ಸಚಿವರು ಯಾವುದೇ ಕೆಟ್ಟ ಪದವನ್ನು ಬಳಕೆ ಮಾಡಿಲ್ಲ. ಜನ ಮಾತಾಡಿದ್ದಕ್ಕೆ ಹಲ್ಲೆ ಮಾಡಲು ಹೋಗುವುದು ಸರಿಯಲ್ಲ. ಸಿಎಂ ಕೂಡಾ ಸ್ಥಳದಲ್ಲಿದ್ದ ಕಾರಣ ಅವರೇ ತೀರ್ಮಾನಿಸುತ್ತಾರೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಗಲಾಟೆ ಕುರಿತು ಸಚಿವ ಡಾ. ಅಶ್ವತ್ಥ್​ ನಾರಾಯಣ ಟ್ವೀಟ್​ ಮಾಡಿದ್ದಾರೆ. ರಾಜ್ಯಕ್ಕೆ ರಾಮನಗರ ಇಬ್ಬರು ಮುಖ್ಯಮಂತ್ರಿಗಳನ್ನ ಕೊಟ್ಟಿದೆ. ಅಭಿವೃದ್ಧಿ ವಿಚಾರವಾಗಿ ರಾಮನಗರ ಹೆಸರು ಗಳಿಸಬೇಕು. ಗೂಂಡಾಗಿರಿಯಿಂದಾಗಿ ರಾಮನಗರ ಹೆಸರುಗಳಿಸಬಾರದು. ಇಂತಹ ಅನಾಗರಿಕ ವರ್ತನೆ ಕೇವಲ ಒಂದು ಪಕ್ಷದಿಂದ ಸಾಧ್ಯ. ನಿಮ್ಮ ಹೋರಾಟ ಅಭಿವೃದ್ಧಿ ವಿಚಾರವಾಗಿರಲಿ ಎಂದು ಅಶ್ವತ್ಥ್​ ಹೇಳಿದ್ದಾರೆ.

ಗಲಾಟೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಸಚಿವರಾದ ಅಶ್ವತ್ಥ್​ ಭಾಷಣ ಬೇಳೆ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಹಾಗೂ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಇಂಥ ರಾಜಕೀಯ ಸಂಸ್ಕೃತಿ ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲ. ರಾಮನಗರ ಕರ್ನಾಟಕದಲ್ಲಿದೆ ಅನ್ನೋದು ನೆನಪಿರಲಿ ಎಂದು ಗಲಾಟೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ; ಚುನಾವಣೆಗೆ ತಿಂಗಳಿರುವಾಗ ರಾಜಕಾರಣ ಮಾಡೋಣ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ!

Published On - 5:19 pm, Mon, 3 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ