AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ- ಕಾಂಗ್ರೆಸ್ ನಾಯಕರ ಕಿತ್ತಾಟ ಪ್ರಕರಣ: ರೌಡಿ ಡಿಕೆ ಬ್ರದರ್ಸ್​ ಎಂದು ಬಿಜೆಪಿ ಘಟಕ ಟ್ವೀಟ್

ಗೂಂಡಾಗಿರಿಯಿಂದಾಗಿ ರಾಮನಗರ ಹೆಸರುಗಳಿಸಬಾರದು. ಇಂತಹ ಅನಾಗರಿಕ ವರ್ತನೆ ಕೇವಲ ಒಂದು ಪಕ್ಷದಿಂದ ಸಾಧ್ಯ. ನಿಮ್ಮ ಹೋರಾಟ ಅಭಿವೃದ್ಧಿ ವಿಚಾರವಾಗಿರಲಿ ಎಂದು ಅಶ್ವತ್ಥ್​ ಹೇಳಿದ್ದಾರೆ.

ಬಿಜೆಪಿ- ಕಾಂಗ್ರೆಸ್ ನಾಯಕರ ಕಿತ್ತಾಟ ಪ್ರಕರಣ: ರೌಡಿ ಡಿಕೆ ಬ್ರದರ್ಸ್​ ಎಂದು ಬಿಜೆಪಿ ಘಟಕ ಟ್ವೀಟ್
ಡಿಕೆ ಶಿವಕುಮಾರ್ (ಎಡ), ಡಿಕೆ ಸುರೇಶ್ (ಬಲ)
TV9 Web
| Edited By: |

Updated on:Jan 03, 2022 | 5:21 PM

Share

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್, ಸಚಿವ ಅಶ್ವತ್ಥ್ ನಾರಾಯಣ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿ ರೌಡಿ ಡಿಕೆ ಬ್ರದರ್ಸ್​ ಎಂದು ಬಿಜೆಪಿ ಘಟಕ ಆಕ್ರೋಶ ಹೊರಹಾಕಿದೆ. ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಅಧಿಕಾರ ಹಿಡಿದು ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇವರು ಅಧಿಕಾರಕ್ಕೆ ಬಂದ್ರೆ ಕಂಡ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಜನರು ಇಂಥವರಿಗೆ ಅಧಿಕಾರ ನೀಡಲಾರರು ಎಂದು ಡಿಕೆ ಬ್ರದರ್ಸ್​ ವಿರುದ್ಧ ಟ್ವಿಟರ್​​ನಲ್ಲಿ ರಾಜ್ಯ ಬಿಜೆಪಿ ಗರಂ ಆಗಿದೆ.

ಸಂಸದ ಡಿ.ಕೆ.ಸುರೇಶ್-ಸಚಿವ ಅಶ್ವತ್ಥ್ ನಾರಾಯಣ ಕಿತ್ತಾಟ ಘಟನೆ ಸಂಬಂಧಿಸಿ ಟಿವಿ9ಗೆ ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ದೇವರಾಜ ಅರಸು, ಗುಂಡೂರಾವ್ ಕಾಲದಲ್ಲಿ ಗೂಂಡಾಗಿರಿ. ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಗೂಂಡಾಗಿರಿಯನ್ನು ತರುತ್ತಿದೆ. ಸಚಿವರ ಮೇಲೆಯೇ ಹಲ್ಲೆ ಮಾಡಲು ಅವರು ಹೋಗಿದ್ದಾರೆ. ಹೀಗಿರುವಾಗ ಜನಸಾಮಾನ್ಯರನ್ನು ಇವರು ಬಿಡ್ತಾರಾ? ಸಚಿವರು ಯಾವುದೇ ಕೆಟ್ಟ ಪದವನ್ನು ಬಳಕೆ ಮಾಡಿಲ್ಲ. ಜನ ಮಾತಾಡಿದ್ದಕ್ಕೆ ಹಲ್ಲೆ ಮಾಡಲು ಹೋಗುವುದು ಸರಿಯಲ್ಲ. ಸಿಎಂ ಕೂಡಾ ಸ್ಥಳದಲ್ಲಿದ್ದ ಕಾರಣ ಅವರೇ ತೀರ್ಮಾನಿಸುತ್ತಾರೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಗಲಾಟೆ ಕುರಿತು ಸಚಿವ ಡಾ. ಅಶ್ವತ್ಥ್​ ನಾರಾಯಣ ಟ್ವೀಟ್​ ಮಾಡಿದ್ದಾರೆ. ರಾಜ್ಯಕ್ಕೆ ರಾಮನಗರ ಇಬ್ಬರು ಮುಖ್ಯಮಂತ್ರಿಗಳನ್ನ ಕೊಟ್ಟಿದೆ. ಅಭಿವೃದ್ಧಿ ವಿಚಾರವಾಗಿ ರಾಮನಗರ ಹೆಸರು ಗಳಿಸಬೇಕು. ಗೂಂಡಾಗಿರಿಯಿಂದಾಗಿ ರಾಮನಗರ ಹೆಸರುಗಳಿಸಬಾರದು. ಇಂತಹ ಅನಾಗರಿಕ ವರ್ತನೆ ಕೇವಲ ಒಂದು ಪಕ್ಷದಿಂದ ಸಾಧ್ಯ. ನಿಮ್ಮ ಹೋರಾಟ ಅಭಿವೃದ್ಧಿ ವಿಚಾರವಾಗಿರಲಿ ಎಂದು ಅಶ್ವತ್ಥ್​ ಹೇಳಿದ್ದಾರೆ.

ಗಲಾಟೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಸಚಿವರಾದ ಅಶ್ವತ್ಥ್​ ಭಾಷಣ ಬೇಳೆ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಹಾಗೂ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಇಂಥ ರಾಜಕೀಯ ಸಂಸ್ಕೃತಿ ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲ. ರಾಮನಗರ ಕರ್ನಾಟಕದಲ್ಲಿದೆ ಅನ್ನೋದು ನೆನಪಿರಲಿ ಎಂದು ಗಲಾಟೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ; ಚುನಾವಣೆಗೆ ತಿಂಗಳಿರುವಾಗ ರಾಜಕಾರಣ ಮಾಡೋಣ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ!

Published On - 5:19 pm, Mon, 3 January 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು