AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ: ಕಾಂಗ್ರೆಸ್ ಪ್ರತಿಭಟನೆಗೆ ನಳಿನ್ ಕುಮಾರ್ ಕಟೀಲ್ ತಿರುಗೇಟು

Nalin Kumar Kateel: ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ. ಇಲ್ಲದಿದ್ದರೆ ಎತ್ತುಗಳೆಲ್ಲಾ ಕಸಾಯಿಖಾನೆಗೆ ಹೋಗ್ತಿದ್ದವು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ: ಕಾಂಗ್ರೆಸ್ ಪ್ರತಿಭಟನೆಗೆ ನಳಿನ್ ಕುಮಾರ್ ಕಟೀಲ್ ತಿರುಗೇಟು
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 13, 2021 | 7:08 PM

Share

ಬೆಂಗಳೂರು: ಕಾಂಗ್ರೆಸ್ ನಾಯಕರಿಂದ ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ. ಇಲ್ಲದಿದ್ದರೆ ಎತ್ತುಗಳೆಲ್ಲಾ ಕಸಾಯಿಖಾನೆಗೆ ಹೋಗ್ತಿದ್ದವು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಂಜನಗೂಡಿನಲ್ಲಿ ಏಕಾಏಕಿ ದೇವಾಲಯ ತೆರವು ವಿಚಾರವಾಗಿಯೂ ಅವರು ಮಾತನಾಡಿದ್ದಾರೆ. ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ಜವಾಬ್ದಾರಿ ಇದೆ. ಆದರೆ ಧಾರ್ಮಿಕ ಕ್ಷೇತ್ರಗಳನ್ನು ಉಳಿಸಬೇಕಾದ ಅಗತ್ಯವಿದೆ. ಹೀಗಾಗಿ ಸರ್ಕಾರದ ಜತೆ ಚರ್ಚಿಸಿ ತೀರ್ಮಾನ ಮಾಡ್ತೇವೆ ಎಂದು ಹೇಳಿದ್ದಾರೆ.

ಪಕ್ಷ ಸಂಘಟನೆಗಾಗಿ ಮುಂದಿನ ತಿಂಗಳು ರಾಜ್ಯ ಪ್ರವಾಸ ಮಾಡುವ ಕುರಿತು ನಳಿನ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನಂಜನಗೂಡಿನಲ್ಲಿ ಏಕಾಏಕಿ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ. ಈ ವಿಷಯ ಕೇಳಿ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸುತ್ತೇನೆ. ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಆದರೆ ಜನರ ಭಾವನೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಜನರ ಭಾವನೆಗೆ ಧಕ್ಕೆಯಾಗದಂತೆ ಆದೇಶ ಪಾಲಿಸಲು ಸೂಚನೆ ನೀಡುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬೆಳಗಾವಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮರಾಠಿ ಜೈಕಾರ ಬೆಳಗಾವಿಯಲ್ಲಿನ ಕಾರ್ಯಕ್ರಮದ ವೇಳೆ ನಳೀನ್ ಕುಮಾರ್ ಕಟೀಲ್​ಗೆ ಮರಾಠಿಯಲ್ಲಿ ಜೈಕಾರ ಹಾಕಲಾಗಿದೆ. ಬೆಳಗಾವಿ ಕಾರ್ಪೋರೇಟರ್​ಗಳಿಂದ ಮರಾಠಿಯಲ್ಲೇ ಜೈಕಾರ ಕೂಗು ಕೇಳಿಬಂದಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮರಾಠಿ ಝೇಂಕಾರ ಕೇಳಿಬಂದಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಎನ್ನುವುದು ಮತ್ತೆ ಖಚಿತವಾಗಿದೆ; ಕಾಂಗ್ರೆಸ್​ ಒಳಜಗಳ ಬಯಲಾಗಿದೆ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ವಾಜಪೇಯಿಯವರೂ ಎತ್ತಿನಗಾಡಿಯಲ್ಲಿ ಸಂಸತ್​ಗೆ ಬಂದಿದ್ದರು, ಶೋಭಾ ಕರಂದ್ಲಾಜೆ ಈಗೆಲ್ಲಿದ್ದಾರೆ? ಸಿದ್ದರಾಮಯ್ಯ ಸವಾಲ್

ಇದನ್ನೂ ಓದಿ: ವಿಧಾನಸೌಧ ಎದುರು ಎತ್ತಿನ ಗಾಡಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್​ ಶಾಸಕರು! ಏನಾಯ್ತು ಅಲ್ಲಿ?

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು