AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಹಿಂದೂಗಳಿಗೆ ಸೀಮಿತವಾಗದೆ ಎಲ್ಲಾ ವಂಚಿತ, ದೀನದಲಿತ ಸಮುದಾಯಗಳನ್ನು ತಲುಪುವಂತೆ ಮೋದಿ ಕರೆ

ಹೈದರಾಬಾದ್​​ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ಮೋದಿಯವರು, ಇತರ ಸಮುದಾಯಗಳಲ್ಲಿಯೂ ವಂಚಿತ ಮತ್ತು ದೀನದಲಿತ ವರ್ಗಗಳಿವೆ ಎಂದು ಹೇಳಿದರು. ನಾವು ಕೇವಲ ಹಿಂದೂಗಳಿಗೆ ಸೀಮಿತವಾಗದೆ ಈ ಎಲ್ಲಾ ವಂಚಿತ ಸಮುದಾಯಗಳಿಗಾಗಿ ಕೆಲಸ ಮಾಡಬೇಕು...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಹಿಂದೂಗಳಿಗೆ ಸೀಮಿತವಾಗದೆ ಎಲ್ಲಾ ವಂಚಿತ, ದೀನದಲಿತ ಸಮುದಾಯಗಳನ್ನು ತಲುಪುವಂತೆ ಮೋದಿ ಕರೆ
ನರೇಂದ್ರ ಮೋದಿ
TV9 Web
| Edited By: |

Updated on:Jul 03, 2022 | 6:15 PM

Share

ವಿರೋಧ ಪಕ್ಷಗಳು ಅನುಸರಿಸುತ್ತಿರುವ ವಂಶಾಡಳಿತ, ಕುಟುಂಬ ಆಧಾರಿತ, ಜಾತಿವಾದಿ ಮತ್ತು ತುಷ್ಟೀಕರಣ ರಾಜಕೀಯವನ್ನು ನಿರ್ಮೂಲನೆ ಮಾಡಲು ಬಿಜೆಪಿ (BJP) ಒತ್ತು ನೀಡುತ್ತಿರುವಾಗಲೂ, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಿಂದೂಗಳು ಮಾತ್ರವಲ್ಲದೆ ವಂಚಿತ ಮತ್ತು ದೀನದಲಿತ ಸಮುದಾಯಗಳನ್ನು ತಲುಪುವಂತೆ ಪಕ್ಷವನ್ನು ಭಾನುವಾರ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೈದರಾಬಾದ್​​ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ (BJP National Executive Meet) ಪ್ರಧಾನಿ ಮೋದಿಯವರು, ಇತರ ಸಮುದಾಯಗಳಲ್ಲಿಯೂ ವಂಚಿತ ಮತ್ತು ದೀನದಲಿತ ವರ್ಗಗಳಿವೆ ಎಂದು ಹೇಳಿದರು. ನಾವು ಕೇವಲ ಹಿಂದೂಗಳಿಗೆ ಸೀಮಿತವಾಗದೆ ಈ ಎಲ್ಲಾ ವಂಚಿತ ಸಮುದಾಯಗಳಿಗಾಗಿ ಕೆಲಸ ಮಾಡಬೇಕು ಎಂದು ಹೇಳಿರುವುದಾಗಿ ಪಕ್ಷದ ಮೂಲವೊಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮೋದಿಯವರು ಪಕ್ಷಕ್ಕೆ ನಿರ್ದೇಶನ ನೀಡಿದ್ದು, ಚುನಾವಣಾ ಪರೀಕ್ಷೆಗಳಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರ ವಹಿಸಿದ ಉತ್ತರ ಪ್ರದೇಶದ ಎರಡು ಕ್ಷೇತ್ರಗಳಾದ ಅಜಂಗಢ ಮತ್ತು ರಾಂಪುರ ಲೋಕಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆದ್ದ ಒಂದು ವಾರದ ನಂತರ ಬಂದಿದೆ.

ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪಸ್ಮಾಂಡ ಮುಸ್ಲಿಮರಂತಹ ಸಮುದಾಯಗಳನ್ನು ತಲುಪಲು ಪ್ರಧಾನಿಯವರ ಹೇಳಿಕೆಯು ಪಕ್ಷಕ್ಕೆ ನೀಡಿದ ಸಂದೇಶವಾಗಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಬಿಜೆಪಿಯು ಗಣನೀಯ ಅಸ್ತಿತ್ವವನ್ನು ಅಥವಾ ಚುನಾವಣಾ ಲಾಭವನ್ನು ಗಳಿಸಲು ಸಾಧ್ಯವಾಗದ ಪ್ರದೇಶಗಳ ಮೇಲೆ ಕಣ್ಣಿಟ್ಟಿರುವುದರಿಂದ ಪಕ್ಷಕ್ಕೆ ಪ್ರಧಾನಿ ಮೋದಿಯವರ ನಿರ್ದೇಶನವು ಮಹತ್ವದ್ದಾಗಿದೆ. ಕಳೆದ ವರ್ಷ ಇದೇ ರೀತಿಯ ಹೇಳಿಕೆಯಲ್ಲಿ ಹಿಂದೂಗಳನ್ನು ಹೊರತುಪಡಿಸಿ ಇತರ ಸಮುದಾಯಗಳ ಹೃದಯವನ್ನು ತಲುಪಲು ಮತ್ತು ಗೆಲ್ಲಲು ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳನ್ನು ಮೋದಿ ಒತ್ತಾಯಿಸಿದ್ದರು.

ಬಿಜೆಪಿಯು ಚುನಾವಣಾ ಲಾಭದ ದೃಷ್ಟಿಯಿಂದ ಗಮನಾರ್ಹ ಪ್ರಗತಿಯನ್ನು ಸಾಧಿಸಲು ವಿಫಲವಾಗಿರುವ ಕೇರಳದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯವನ್ನು ತನ್ನ ಪರವಾಗಿ ಇಟ್ಟುಕೊಳ್ಳುವುದನ್ನು ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದರು.

ರಾಜಕೀಯ ನಿರ್ಣಯದ ಮೇಲಿನ ಚರ್ಚೆಯ ವೇಳೆ ಮೋದಿ ಯಾವುದೇ ಸಲಹೆಗಳನ್ನು ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಪ್ರಧಾನಿಯವರು ಚರ್ಚೆಯಲ್ಲಿ ವಿವಿಧ ಸಲಹೆಗಳನ್ನು ನೀಡಿದ್ದಾರೆ . ಈಶಾನ್ಯ ಭಾಗದ ಅಭಿವೃದ್ಧಿ ಬಗ್ಗೆ ಅವರು ಸಲಹೆ ನೀಡಿದ್ದಾರೆ.

ನಮ್ಮ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕುರಿತಾದ ಸಂದೇಶವನ್ನು ಬಿಜೆಪಿ ಕಾರ್ಯಕರ್ತರು ತಳಮಟ್ಟದಲ್ಲಿ ಹೇಗೆ ಕೊಂಡೊಯ್ಯಬೇಕು ಎಂಬುದರ ಕುರಿತು ಮಾತನಾಡಿದ ಅವರು, ಅವರ ಸರಳತೆ ಮತ್ತು ವಿನಮ್ರ ಹಿನ್ನೆಲೆಯ ಸಂದೇಶವನ್ನು ಅವರ ಹೋರಾಟಗಳ ಕಥೆಯೊಂದಿಗೆ ಜನರಿಗೆ ತಲುಪಿಸಬೇಕು. ಚರ್ಚೆಯ ವಿವಿಧ ಹಂತಗಳಲ್ಲಿ ಅವರು ಸಲಹೆ ನೀಡಿದರು ಎಂದಿದ್ದಾರೆ.

Published On - 5:40 pm, Sun, 3 July 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ