AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಹೈದರಾಬಾದ್​​ಗೆ ಬಂದಿಳಿದ ಪ್ರಧಾನಿ ಮೋದಿ

BJP National Executive Meeting ಹೈದರಾಬಾದ್​​ಗೆ ವಿಮಾನದಲ್ಲಿ ಬಂದಿಳಿದಿರುವ ಫೋಟೊ ಟ್ವೀಟ್  ಮಾಡಿರುವ ಪ್ರಧಾನಿ ಮೋದಿ ಬಿಜೆಪಿ  ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಡೈನಾಮಿಕ್ ಸಿಟಿ ಹೈದರಾಬಾದ್‌ಗೆ ಬಂದಿಳಿದಿದ್ದೇನೆ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಹೈದರಾಬಾದ್​​ಗೆ ಬಂದಿಳಿದ ಪ್ರಧಾನಿ ಮೋದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 02, 2022 | 4:35 PM

Share

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ (BJP national executive Meeting) ಇಂದು ಹೈದರಾಬಾದ್‌ನಲ್ಲಿ(Hyderabad) ಆರಂಭವಾಗಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೈದರಾಬಾದ್‌ಗೆ ಆಗಮಿಸಿದ್ದಾರೆ. ಹೈದರಾಬಾದ್​​ಗೆ  ವಿಮಾನದಲ್ಲಿ ಬಂದಿಳಿದಿರುವ ಫೋಟೊ ಟ್ವೀಟ್  ಮಾಡಿರುವ ಪ್ರಧಾನಿ ಮೋದಿ ಬಿಜೆಪಿ  ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಡೈನಾಮಿಕ್ ಸಿಟಿ ಹೈದರಾಬಾದ್‌ಗೆ ಬಂದಿಳಿದಿದ್ದೇನೆ. ಈ ಸಭೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಾವು ವ್ಯಾಪಕ ಶ್ರೇಣಿಯ ವಿಷಯಗಳನ್ನು ಚರ್ಚಿಸುತ್ತೇವೆ ಎಂದಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, 19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ಕೊವಿಡ್-19 ಸಾಂಕ್ರಾಮಿಕ ರೋಗದ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.

ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆಯಿತು. ಇದರಲ್ಲಿ ನಾಯಕರು ನೇರವಾಗಿ ಮತ್ತು ವರ್ಚುವಲ್ ಆಗಿ ಭಾಗವಹಿಸಿದ್ದರು.

ಪಕ್ಷದ ಸಭೆಗೆ  ಮುನ್ನ ಇಡೀ ಹೈದರಾಬಾದ್ ನಗರವು ಬಿಜೆಪಿ ಧ್ವಜಗಳು ಮತ್ತು ಬ್ಯಾನರ್‌ಗಳೊಂದಿಗೆ ಕೇಸರಿಮಯವಾಗಿದ್ದು ಕೇಂದ್ರ ಸರ್ಕಾರದ ಸಾಧನೆಯನ್ನು ಬಿಂಬಿಸುವ ಪೋಸ್ಟರ್​​ಗಳು ರಾರಾಜಿಸಿವೆ.

Published On - 3:54 pm, Sat, 2 July 22

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!