AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಆಯ್ಕೆ: ಸಂಜೆ 4.30ಕ್ಕೆ ಯಡಿಯೂರಪ್ಪ, ಬೊಮ್ಮಾಯಿ ಸುದ್ದಿಗೋಷ್ಠಿ

ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಇಂದು (ಬುಧವಾರ) ಸಂಜೆ 4.30ಕ್ಕೆ ಬಿ.ಎಸ್. ಯಡಿಯೂರಪ್ಪ ಸುದ್ದಿ ಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನ ‌ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಆಯ್ಕೆ: ಸಂಜೆ 4.30ಕ್ಕೆ ಯಡಿಯೂರಪ್ಪ, ಬೊಮ್ಮಾಯಿ ಸುದ್ದಿಗೋಷ್ಠಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 17, 2022 | 5:01 PM

Share

ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಇಂದು (ಬುಧವಾರ) ಸಂಜೆ 4.30ಕ್ಕೆ ಬಿ.ಎಸ್. ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ಜಂಟಿ ಸುದ್ದಿ ಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನ ‌ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಯಡಿಯೂರಪ್ಪರ ಕಾವೇರಿ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದಾರೆ.   ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ(Central Election Committee) ಪುನರ್ ರಚನೆಯಾಗಿದ್ದು ಹೊಸ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿ.ಎಸ್.ಯಡಿಯೂರಪ್ಪಗೆ (BS Yediyurappa) ಸ್ಥಾನ ಲಭಿಸಿದೆ. ಬಿಜೆಪಿಯಲ್ಲಿ ನೀತಿ ತೀರ್ಮಾನ ಕೈಗೊಳ್ಳುವ ಉನ್ನತ ಸಮಿತಿಯೇ ಬಿಜೆಪಿ ಸಂಸದೀಯ ಮಂಡಳಿ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಯಡಿಯೂರಪ್ಪಗೆ ಸ್ಥಾನ

ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ  ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ.  ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ  ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ‌ ನೀಡಿ  ಬಿಜೆಪಿ ಹೈಕಮಾಂಡ್  ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ ಸಂಸದೀಯ ಮಂಡಳಿ, ಕೇಂದ್ರ ಚುನಾವಣಾ ಸಮಿತಿಯಲ್ಲಿ ಯಡಿಯೂರಪ್ಪಗೆ ಸ್ಥಾನ ನೀಡಲು ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ
Image
CT Ravi: ಪಾಕಿಸ್ತಾನಕ್ಕೆ ಹೋಗ್ತೀವಿ ಅನ್ನೋರ್​ನ ಫ್ರೀಯಾಗಿ ಕಳಿಸ್ತೀವಿ; ಕ್ಲಬ್​ಹೌಸ್​ನಲ್ಲಿ ಪಾಕ್​ ಪರ ಘೋಷಣೆಗೆ ಸಿಟಿ ರವಿ ಆಕ್ಷೇಪ
Image
Karnataka Politics: ಮುಸ್ಲಿಂ ಏರಿಯಾ ವಿವಾದ; ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ, ರೇಣುಕಾಚಾರ್ಯ, ಅಶೋಕ್ ವಾಗ್ದಾಳಿ
Image
ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಪುನರ್ ರಚನೆ: ಯಡಿಯೂರಪ್ಪಗೆ ಸ್ಥಾನ; ಗಡ್ಕರಿ, ಶಿವರಾಜ್ ಚೌಹಾಣ್ ಔಟ್
Image
Karnataka Politics: ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ, ಸಿಎಂ ಪ್ರವಾಸ, ಬಿಜೆಪಿ ಜನೋತ್ಸವ, ಕರ್ನಾಟಕಕ್ಕೆ ವರಿಷ್ಠರ ಭೇಟಿ

ಯಡಿಯೂರಪ್ಪ ಅವರಿಗೆ ಅಭಿನಂದನೆ: ನಳೀನ್ ಕುಮಾರ್ ಕಟೀಲ್ ಹೇಳಿಕೆ

ಬಿಜೆಪಿ  ಪಕ್ಷದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಪುನರ್ ರಚನೆ ಆಗಿದೆ. ಕರ್ನಾಟಕದಿಂದ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿದ್ದಾರೆ. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜಗತ್ ಪ್ರಕಾಶ್ ನಡ್ಡಾ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಕೇಂದ್ರದಲ್ಲಿ ನಮ್ಮ ಪರವಾಗಿ ಧ್ವನಿ ಎತ್ತಲು, ನಮ್ಮ ಪರ ನಿರ್ಣಯ ತೆಗೆದುಕೊಳ್ಳಲು ಅನುಕೂಲವಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.  ಬಿಜೆಪಿ ಹಲವು ರಂಧ್ರವಾಗಿದೆ ಎಂಬ ಕಾಂಗ್ರೆಸ್ ಟ್ವೀಟ್ ವಿಚಾರ ಬಗ್ಗೆ  ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಗುಲಾಮ್ ನಬಿ ಆಜಾದ್ ನೋಡಿ ಹೇಳಲಿ.  ಕರ್ನಾಟಕದಲ್ಲಿ ಕಾಂಗ್ರೆಸ್ ನೂರಾರು ರಂಧ್ರ ಆಗಿದೆ. ಇಲ್ಲಿ ಅವರ ಕಾರ್ಯಕ್ರಮ ನೋಡಿದರೆ ಗೊತ್ತಾಗುತ್ತದೆ.  ನಾ ಮುಂದು, ತಾ ಮುಂದು ಅಂತ ಸಮಾವೇಶ, ಪಾದಯಾತ್ರೆ ಅಂತ ಮಾಡ್ತಿದ್ದಾರೆ.  ಈ ಮೂಲಕ ಅವರ ರಂಧ್ರಗಳನ್ನು ತೋರಿಸ್ತಿದ್ದಾರೆ ಎಂದಿದ್ದಾರೆ.

Published On - 4:02 pm, Wed, 17 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ