AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಪುನರ್ ರಚನೆ ‘ಮಿಷನ್ ದಕ್ಷಿಣ್’ ಪರಿಕಲ್ಪನೆ ಪ್ರತಿಫಲನ

ಕರ್ನಾಟಕದಿಂದ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಸ್ಥಾನ ಲಭಿಸಿದ್ದು, ತಮಿಳುನಾಡಿನಿಂದ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸ್...

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಪುನರ್ ರಚನೆ  ‘ಮಿಷನ್ ದಕ್ಷಿಣ್’ ಪರಿಕಲ್ಪನೆ ಪ್ರತಿಫಲನ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on: Aug 17, 2022 | 7:43 PM

Share

ಸಂಸದೀಯ ಮಂಡಳಿ ಪುನರ್ ರಚನೆಯಲ್ಲಿ ‘ಮಿಷನ್ ದಕ್ಷಿಣ್’ ಪರಿಕಲ್ಪನೆ ಎದ್ದು ಕಾಣುತ್ತಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಲ್ಲಿ ದಕ್ಷಿಣ ಭಾರತದ ಐವರಿಗೆ ಸ್ಥಾನ ನೀಡಲಾಗಿದೆ. ಕರ್ನಾಟಕದಿಂದ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಸ್ಥಾನ ಲಭಿಸಿದ್ದು, ತಮಿಳುನಾಡಿನಿಂದ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸ್, ತೆಲಂಗಾಣದಿಂದ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಕೆ.ಲಕ್ಷ್ಮಣ್, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ  ಚುನಾವಣಾ ಸಮಿತಿಯಲ್ಲಿ ಸ್ಥಾನ ಲಭಿಸಿದೆ. ಅದೇ ವೇಳೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ದಕ್ಷಿಣ ಭಾರತದಿಂದ ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ಕೆ.ಲಕ್ಷ್ಮಣ್ ಅವರಿಗೆ ಸ್ಥಾನ ಲಭಿಸಿದೆ.

ಯಡಿಯೂರಪ್ಪಗೆ ಕರೆ ಮಾಡಿ ಶುಭಾಶಯ ತಿಳಿಸಿದ ರಾಜ್ಯಪಾಲ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಯಡಿಯೂರಪ್ಪಗೆ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ನಾನು ಬಂದು ಭೇಟಿ ಮಾಡುವೆ ಎಂದು ಅವರು ಯಡಿಯೂರಪ್ಪಗೆ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ ‘ಕಾವೇರಿ’ ನಿವಾಸದಿಂದ ಯಡಿಯೂರಪ್ಪ ಜತೆ ಸಿಎಂ ಬೊಮ್ಮಾಯಿ ಮಲ್ಲೇಶ್ವರಂಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ. ನಳೀನ್ ಕಟೀಲು, ಸಚಿವರಾದ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್ ಜತೆಗಿದ್ದರು.  ಬಿಜೆಪಿ ಕಚೇರಿಯಲ್ಲಿ ಭಾರತ ಮಾತೆ ಫೋಟೋಗೆ ಬಿಎಸ್ ವೈ ಪುಷ್ಪಾರ್ಚನೆ ಮಾಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಬಿಎಸ್ವೈಗೆ ಶಾಲು ಹೊದಿಸಿ ಗೌರವಿಸಿದ್ದಾರೆ. ಸಚಿವ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಾ ಭೇಟಿ ನೀಡಿದ್ದಾರೆ.

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!