AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ; ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

ಮಧ್ಯಾಹ್ನ 12.05ಕ್ಕೆ ಸೋಲಿಗ ಸಮುದಾಯದ ಜೊತೆ ನಡ್ಡಾ ಸಂವಾದ ನಡೆಸಲಿದ್ದಾರೆ. ನಂತರ ಸಾಲೂರು ಮಠಕ್ಕೆ ಭೇಟಿ ನೀಡಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಗಣಪತಿ ಶರ್ಮಾ
|

Updated on:Feb 28, 2023 | 8:22 PM

Share

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ನಾಳೆ (ಮಾರ್ಚ್​​ 1) ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಚುನಾವಣಾ ಪ್ರಚಾರ ಅಭಿಯಾನ ವಿಜಯ ಸಂಕಲ್ಪ ಯಾತ್ರೆಗೆ (Vijay Sankalpa Yatra) ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಲಿದ್ದಾರೆ. ಮಲೆಮಹದೇಶ್ವರ ದೇವಾಲಯದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಅವರು, ನಂತರ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 12.05ಕ್ಕೆ ಸೋಲಿಗ ಸಮುದಾಯದ ಜೊತೆ ನಡ್ಡಾ ಸಂವಾದ ನಡೆಸಲಿದ್ದಾರೆ. ನಂತರ ಸಾಲೂರು ಮಠಕ್ಕೆ ಭೇಟಿ ನೀಡಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹನೂರು ಪಟ್ಟಣದ ಗೌರೀಶಂಕರ ಕಲ್ಯಾಣ ‌ಮಂಟಪ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ. ಸಂಜೆ 4.25ಕ್ಕೆ ನಡ್ಡಾ ಅವರು ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ಮಾರ್ಚ್​ 2ರಂದು ರಾಜ್ಯಕ್ಕೆ ಅಮಿತ್ ಶಾ

ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ, ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಪರಿಗಣಿಸಲಾಗಿರುವ ಅಮಿತ್ ಶಾ ಮಾರ್ಚ್​​ 2ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 2ರ ರಾತ್ರಿ 10.40ಕ್ಕೆ ಬೆಂಗಳೂರಿನ ಎಚ್​​ಎಎಲ್​ಗೆ ಬರಲಿರುವ ಅವರು ರೇಸ್​​ಕೋರ್ಸ್​ ರಸ್ತೆಯ ಖಾಸಗಿ ಹೋಟೆಲ್​​ನಲ್ಲಿ ತಂಗಲಿದ್ದಾರೆ. ಮಾರ್ಚ್ 3ರಂದು ಬೆಳಗ್ಗೆ 10.10ಕ್ಕೆ ಬೆಂಗಳೂರಿನಿಂದ ಬೀದರ್​ಗೆ ಪ್ರಯಾಣಿಸಲಿದ್ದಾರೆ. ಮಾ. 3ರ ಬೆಳಗ್ಗೆ 11.50ಕ್ಕೆ ಬೀದರ್​​ನಿಂದ ಬಸವಕಲ್ಯಾಣಕ್ಕೆ ತೆರಳುವ ಶಾ ಮಧ್ಯಾಹ್ನ 12.20ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಸವಕಲ್ಯಾಣದ ತೇರ್ ಮೈದಾನದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಸಿದ್ಧಗೊಂಡ ವಿಶೇಷ ರಥ ಹೀಗಿದೆ ನೋಡಿ

ಸಮಾವೇಶದ ಬಳಿಕ ಬೀದರ್​ನಿಂದ ಬೆಂಗಳೂರಿಗೆ ಮರಳುವ ಅವರು, ಸಂಜೆ 4.50ಕ್ಕೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಆವತಿ ಗ್ರಾಮದ ಚನ್ನಕೇಶವ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 5.10ಕ್ಕೆ ದೇವನಹಳ್ಳಿಯಲ್ಲಿ ವಿಜಯ ಸಂಕಲ್ಪ ರಥಯಾತ್ರೆ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 6.50ರಿಂದ 7.15ರವರೆಗೆ ಕೆಐಎಬಿಯಲ್ಲಿ ಕೆಲಹೊತ್ತು ಇರಲಿರುವ ಶಾ ರಾತ್ರಿ 7.20ಕ್ಕೆ ಬೆಂಗಳೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:37 pm, Tue, 28 February 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ