AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ; ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

ಮಧ್ಯಾಹ್ನ 12.05ಕ್ಕೆ ಸೋಲಿಗ ಸಮುದಾಯದ ಜೊತೆ ನಡ್ಡಾ ಸಂವಾದ ನಡೆಸಲಿದ್ದಾರೆ. ನಂತರ ಸಾಲೂರು ಮಠಕ್ಕೆ ಭೇಟಿ ನೀಡಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Ganapathi Sharma
|

Updated on:Feb 28, 2023 | 8:22 PM

Share

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ನಾಳೆ (ಮಾರ್ಚ್​​ 1) ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಚುನಾವಣಾ ಪ್ರಚಾರ ಅಭಿಯಾನ ವಿಜಯ ಸಂಕಲ್ಪ ಯಾತ್ರೆಗೆ (Vijay Sankalpa Yatra) ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಲಿದ್ದಾರೆ. ಮಲೆಮಹದೇಶ್ವರ ದೇವಾಲಯದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಅವರು, ನಂತರ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 12.05ಕ್ಕೆ ಸೋಲಿಗ ಸಮುದಾಯದ ಜೊತೆ ನಡ್ಡಾ ಸಂವಾದ ನಡೆಸಲಿದ್ದಾರೆ. ನಂತರ ಸಾಲೂರು ಮಠಕ್ಕೆ ಭೇಟಿ ನೀಡಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹನೂರು ಪಟ್ಟಣದ ಗೌರೀಶಂಕರ ಕಲ್ಯಾಣ ‌ಮಂಟಪ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ. ಸಂಜೆ 4.25ಕ್ಕೆ ನಡ್ಡಾ ಅವರು ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ಮಾರ್ಚ್​ 2ರಂದು ರಾಜ್ಯಕ್ಕೆ ಅಮಿತ್ ಶಾ

ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ, ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಪರಿಗಣಿಸಲಾಗಿರುವ ಅಮಿತ್ ಶಾ ಮಾರ್ಚ್​​ 2ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 2ರ ರಾತ್ರಿ 10.40ಕ್ಕೆ ಬೆಂಗಳೂರಿನ ಎಚ್​​ಎಎಲ್​ಗೆ ಬರಲಿರುವ ಅವರು ರೇಸ್​​ಕೋರ್ಸ್​ ರಸ್ತೆಯ ಖಾಸಗಿ ಹೋಟೆಲ್​​ನಲ್ಲಿ ತಂಗಲಿದ್ದಾರೆ. ಮಾರ್ಚ್ 3ರಂದು ಬೆಳಗ್ಗೆ 10.10ಕ್ಕೆ ಬೆಂಗಳೂರಿನಿಂದ ಬೀದರ್​ಗೆ ಪ್ರಯಾಣಿಸಲಿದ್ದಾರೆ. ಮಾ. 3ರ ಬೆಳಗ್ಗೆ 11.50ಕ್ಕೆ ಬೀದರ್​​ನಿಂದ ಬಸವಕಲ್ಯಾಣಕ್ಕೆ ತೆರಳುವ ಶಾ ಮಧ್ಯಾಹ್ನ 12.20ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಸವಕಲ್ಯಾಣದ ತೇರ್ ಮೈದಾನದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಸಿದ್ಧಗೊಂಡ ವಿಶೇಷ ರಥ ಹೀಗಿದೆ ನೋಡಿ

ಸಮಾವೇಶದ ಬಳಿಕ ಬೀದರ್​ನಿಂದ ಬೆಂಗಳೂರಿಗೆ ಮರಳುವ ಅವರು, ಸಂಜೆ 4.50ಕ್ಕೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಆವತಿ ಗ್ರಾಮದ ಚನ್ನಕೇಶವ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 5.10ಕ್ಕೆ ದೇವನಹಳ್ಳಿಯಲ್ಲಿ ವಿಜಯ ಸಂಕಲ್ಪ ರಥಯಾತ್ರೆ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 6.50ರಿಂದ 7.15ರವರೆಗೆ ಕೆಐಎಬಿಯಲ್ಲಿ ಕೆಲಹೊತ್ತು ಇರಲಿರುವ ಶಾ ರಾತ್ರಿ 7.20ಕ್ಕೆ ಬೆಂಗಳೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:37 pm, Tue, 28 February 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ