AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಇದೇನು ಪ್ರಜಾಪ್ರಭುತ್ವವೋ ಅಥವಾ ಸಿದ್ದರಾಮಯ್ಯನವರ ತುಘಲಕ್ ದರ್ಬಾರೋ; ಬಿಜೆಪಿ ಪ್ರಶ್ನೆ

ಶಾಸಕಾಂಗ ಪಕ್ಷದ ಸಭೆಯಲ್ಲಿನ ವಿದ್ಯಮಾನಗಳ ಕುರಿತ ‘ಟಿವಿ 9 ಕನ್ನಡ’ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

Karnataka Politics: ಇದೇನು ಪ್ರಜಾಪ್ರಭುತ್ವವೋ ಅಥವಾ ಸಿದ್ದರಾಮಯ್ಯನವರ ತುಘಲಕ್ ದರ್ಬಾರೋ; ಬಿಜೆಪಿ ಪ್ರಶ್ನೆ
ಸಿದ್ದರಾಮಯ್ಯ ಮತ್ತು ಬಿಜೆಪಿ ಧ್ವಜ
ಗಣಪತಿ ಶರ್ಮಾ
|

Updated on: Jul 28, 2023 | 3:30 PM

Share

ಬೆಂಗಳೂರು: ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್​​ನ ಕೆಲವು ಶಾಸಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಂಡಾಮಂಡಲವಾಗಿದ್ದರು ಎಂಬ ವರದಿಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಕಾಂಗ್ರೆಸ್ (Congress) ಪಕ್ಷದ ಶಾಸಕರ ಸ್ಥಿತಿಯೇ ಹೀಗಾದರೆ, ನಾಳೆ ಸರ್ಕಾರವನ್ನು ಪ್ರಶ್ನಿಸುವ ಜನಸಾಮಾನ್ಯರ ಪಾಡು ಏನಾಗಲಿದೆ ಎಂದು ಬಿಜೆಪಿ (BJP) ಪ್ರಶ್ನಿಸಿದೆ. ಅಲ್ಲದೆ, ಇದೇನು ಪ್ರಜಾಪ್ರಭುತ್ವವೋ ಅಥವಾ ಸಿದ್ದರಾಮಯ್ಯನವರ ತುಘಲಕ್ ದರ್ಬಾರೋ ಎಂದು ಕಿಡಿ ಕಾರಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿನ ವಿದ್ಯಮಾನಗಳ ಕುರಿತ ‘ಟಿವಿ 9 ಕನ್ನಡ’ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿಎಂ ಸಿದ್ದರಾಮಯ್ಯರವರ ಎರಡು ತಿಂಗಳ ಅಸಮರ್ಥ ಹಾಗೂ ಅವೈಜ್ಞಾನಿಕ ಆಡಳಿತದ ಬಗ್ಗೆ ಬಹಿರಂಗವಾಗಿ ಪ್ರಶ್ನಿಸಿದ್ದ ಸ್ವಪಕ್ಷೀಯ ಶಾಸಕರ ವಿರುದ್ಧವೇ ಈಗ ಅವರು ಕೆಂಡಕಾರುತ್ತಿದ್ದಾರೆ. ಸ್ವಾಮಿ ಸಿದ್ದರಾಮಯ್ಯರವರೇ, ನಿಮ್ಮ ಪಕ್ಷದ ಶಾಸಕರ ಪರಿಸ್ಥಿತಿಯೇ ಹೀಗಾದರೆ, ಇನ್ನು ನಾಳೆ ಸರ್ಕಾರವನ್ನು ಪ್ರಶ್ನಿಸುವ ಜನಸಾಮಾನ್ಯರ ಪಾಡೇನು?’ ಎಂದು ಉಲ್ಲೇಖಿಸಿದೆ.

ಸಿದ್ದರಾಮಯ್ಯ ಅವರೇ, ವರ್ಗಾವಣೆ ದಂಧೆ, ಅನುದಾನ ಕಡಿತ, ಸಚಿವರ ಹಾಗೂ ಅವರ ಆಪ್ತ ಕಾರ್ಯದರ್ಶಿಗಳ ಹಸ್ತಕ್ಷೇಪದಿಂದ ರೋಸಿ ಹೋಗಿರುವ ನಿಮ್ಮದೇ ಪಕ್ಷದ ಶಾಸಕರು, ನಿಮ್ಮ ಸಹಾಯ ಕೇಳಿ ಮನವಿ ಪತ್ರ ಸಲ್ಲಿಸಿದರೆ, ಅದನ್ನು ಹರಿದು ಕಸದ ಬುಟ್ಟಿಗೆ ಹಾಕುವಷ್ಟು ಉದ್ಧಟತನ ತೋರಿಸಿದ್ದೀರಿ! ಇದೇನು ಪ್ರಜಾಪ್ರಭುತ್ವವೋ ಅಥವಾ ನಿಮ್ಮ ತುಘಲಕ್ ದರ್ಬಾರೋ? ಎಂದು ಮತ್ತೊಂದು ಟ್ವೀಟ್​​ನಲ್ಲಿ ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ತುಘಲಕ್ ದರ್ಬಾರ್ ಎಷ್ಟರ ಮಟ್ಟಿಗೆ ನಡೆಯುತ್ತಿದೆ ಎನ್ನುವುದಕ್ಕೆ ಸಂತ್ರಸ್ತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಚ್ ಮಾಡಿಸುತ್ತಿರುವುದೇ ಪ್ರತ್ಯಕ್ಷ ಸಾಕ್ಷಿ. ಉಡುಪಿ ಕಾಲೇಜಿನ ಅಮಾನುಷ ಕೃತ್ಯವನ್ನು ಬಯಲಿಗೆಳೆದವರ ಮೇಲೆಯೂ ಪೊಲೀಸರಿಂದ ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಪ್ರಕರಣದ ಸತ್ಯಾಸ‌ತ್ಯತೆಯನ್ನು ಬಯಲಿಗೆಳೆದು ಅನ್ಯಾಯವನ್ನು ತಡೆಯಲು, ನ್ಯಾಯ ಕೇಳಲು, ಜಿಹಾದಿಗಳ ಹೆಡೆಮುರಿ ಕಟ್ಟಲು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರೆ, ಅದನ್ನು ಹತ್ತಿಕ್ಕಲು ಈ ರೀತಿ ಪೊಲೀಸರಿಂದ ದೌರ್ಜನ್ಯ ನಡೆಸಿ ಸಿದ್ದರಾಮಯ್ಯ ಅವರ ಸರ್ಕಾರ ಹೇಡಿತನ ಪ್ರದರ್ಶಿಸಿದೆ‌ ಎಂದು ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು