AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು: ಭೂಪೇಂದ್ರ ಯಾದವ್

ಲೋಕಸಭೆ ಚುನಾವಣೆಗೆ ಮೂರು ನಾಲ್ಕು ತಿಂಗಳಷ್ಟೇ ಬಾಕಿ ಇರುವಾಗ ಬಿಜೆಪಿ ದೇಶಾದ್ಯಂತ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಕರ್ನಾಟಕದಲ್ಲಿ ಕ್ಷೇತ್ರವಾರು ಉಸ್ತುವಾರಿಗಳು, ಸಹ ಉಸ್ತುವಾರಿಗಳನ್ನು ನೇಮಿಸಿದೆ. ಅಲ್ಲದೆ, 2024ರ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆದ್ದುಕೊಳ್ಳುವ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು: ಭೂಪೇಂದ್ರ ಯಾದವ್
ಕರ್ನಾಟಕದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು ಎಂದ ಕೇಂದ್ರ ಸಚಿವ ಭೂಪೇಂದ್ರ ಯಾದವ್
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on: Jan 27, 2024 | 10:42 PM

Share

ಬೆಂಗಳೂರು, ಜ.27: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 400 ಸೀಟುಗಳು ಸಿಗುವುದು ಖಚಿತ, ನರೇಂದ್ರ ಮೋದಿ (Narendra Modi) ಅವರು ಮತ್ತೆ ಪ್ರಧಾನಿ ಆಗುವುದೂ ಖಚಿತ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ (Bhupender Yadav) ಹೇಳಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ (BJP) ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು ಎಂದರು.

ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈಗಾಗಲೇ ಕೆಲಸ ಆರಂಭಿಸಿದ್ದಾರೆ ಎಂದ ಕೇಂದ್ರ ಸಚಿವರು, ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್​​ನ ಸುಳ್ಳುಗಳು ಜನರಿಗೆ ಗೊತ್ತಾಯಿತು. ಹಾಗಾಗಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲಾಯಿತು. ಕಾಂಗ್ರೆಸ್​ನ ಗ್ಯಾರಂಟಿಗಳು ವಿಫಲವಾಗಿವೆ ಎಂದರು. ಕಾಂಗ್ರೆಸ್ ಕೇವಲ ಗಾಂಧಿ ಪರಿವಾರ ಹಾಗೂ ಅಲ್ಪಸಂಖ್ಯಾತರಿಗೆ ಸೀಮಿತವಾಗಿ ಅಧಿಕಾರ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲೋದು ಪಕ್ಕಾ ಎಂದರು.

ಇದನ್ನೂ ಓದಿ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ; ಪಟ್ಟಿ ಇಲ್ಲಿದೆ

ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್​ಗಳಿಗೆ ಬಿಜೆಪಿ ಉಸ್ತುವಾರಿ ನೇಮಕ

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಭರದ ಸಿದ್ಧತೆ ನಡೆಯುತ್ತಿದ್ದು, ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್​ಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ. 28 ಕ್ಷೇತ್ರಗಳನ್ನು 8 ಕ್ಲಸ್ಟರ್​ಗಳಾಗಿ ವಿಂಗಡಿಸಲಾಗಿದ್ದು, ಎಸ್.ಎ.ರಾಮದಾಸ್, ಎಂ.ಬಿ.ಭಾನುಪ್ರಕಾಶ್, ಮಹೇಶ್ ಟೆಂಗಿನಕಾಯಿ, ರಾಜಕುಮಾರ್ ಪಾಟೀಲ್ ತೇಲ್ಕೂರ್, ಚಂದ್ರಶೇಖರ ಪಾಟೀಲ್ ಹಲಗೇರಿ, ಕೆ.ಎಸ್.ನವೀನ್, ಎಸ್.ಮುನಿರಾಜು, ಹೆಚ್.ಎಸ್.ಗೋಪಿನಾಥರೆಡ್ಡಿ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ Lok ಮಾಡಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ