ಆರ್​ಡಿ ಪಾಟೀಲ್ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರಬರುವ ಆತಂಕ ಎಟಿಎಂ ಸರ್ಕಾರಕ್ಕೆ: ಬಿಜೆಪಿ ವಾಗ್ದಾಳಿ

ಮಾನ್ಯ ಗೃಹ ಸಚಿವ ಜಿ ಪರಮೇಶ್ವರ ಸಾಹೇಬರೇ, ಯಾರಿಗಾಗಿ ಯಾರಿಗೋಸ್ಕರ ಕಿಂಗ್ ಪಿನ್ ಆರ್​ಡಿ ಪಾಟೀಲ್ ಅವರನ್ನು ಬಂಧಿಸದೆ ಕಳ್ಳಾಟವಾಡುತ್ತಿದ್ದೀರಿ? ಆತನ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರ ಬರಲಿದೆ ಎನ್ನುವ ಆತಂಕ #ATMSarkaraಕ್ಕೆ ಇದ್ದಂತಿದೆ ಎಂದು ಬಿಜೆಪಿ ಟೀಕಿಸಿದೆ.

ಆರ್​ಡಿ ಪಾಟೀಲ್ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರಬರುವ ಆತಂಕ ಎಟಿಎಂ ಸರ್ಕಾರಕ್ಕೆ: ಬಿಜೆಪಿ ವಾಗ್ದಾಳಿ
ಸಾಂದರ್ಭಿಕ ಚಿತ್ರ
Follow us
|

Updated on: Nov 07, 2023 | 3:10 PM

ಬೆಂಗಳೂರು, ನವೆಂಬರ್ 7: ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ (RD Patil) ಪೊಲೀಸರಿಂದ ತಪ್ಪಿಸಿಕೊಂಡಿರುವ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್​ಡಿ ಪಾಟೀಲ್ ಬಂಧನವಾದರೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೆಸರು ಹೊರಬರುವ ಆತಂಕ ‘ಎಟಿಎಂ ಸರ್ಕಾರ’ಕ್ಕೆ ಇದೆ. ಹೀಗಾಗಿಯೇ ನೇಮಕಾತಿ ಪರೀಕ್ಷೆಯ ಅಕ್ರಮದ ಕಿಂಗ್‌ಪಿನ್ ಕಾಂಪೌಂಡ್‌ ಹಾರಿ ಹೋಗಲು ಬಿಟ್ಟಿದೆ ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸರಣಿ ಪೋಸ್ಟ್ ಪ್ರಕಟಿಸುವ ಮೂಲಕ ಆರೋಪಿಸಿದೆ.

ಮಾನ್ಯ ಗೃಹ ಸಚಿವ ಜಿ ಪರಮೇಶ್ವರ ಸಾಹೇಬರೇ, ಯಾರಿಗಾಗಿ ಯಾರಿಗೋಸ್ಕರ ಕಿಂಗ್ ಪಿನ್ ಆರ್​ಡಿ ಪಾಟೀಲ್ ಅವರನ್ನು ಬಂಧಿಸದೆ ಕಳ್ಳಾಟವಾಡುತ್ತಿದ್ದೀರಿ? ಆತನ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರ ಬರಲಿದೆ ಎನ್ನುವ ಆತಂಕ #ATMSarkaraಕ್ಕೆ ಇದ್ದಂತಿದೆ. ಹೀಗಾಗಿಯೇ‌ ನೇಮಕಾತಿ ಪರೀಕ್ಷೆಯ ಅಕ್ರಮದ ಕಿಂಗ್‌ಪಿನ್ ಕಾಂಪೌಂಡ್‌ ಹಾರಿ ಹೋಗಲು ಬಿಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಳ್ಳ ಪೊಲೀಸ್ ಆಟ ಆಡುತ್ತಾ ಕಳ್ಳರನ್ನು ರಾಜಾರೋಷವಾಗಿ ಓಡಾಡಿಕೊಂಡು ಇರುವಂತೆ ಬಿಟ್ಟು, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸಿ ಕಲೆಕ್ಷನ್ ಮಾಡುತ್ತಿದೆ. ವರ್ಷಪೂರ್ತಿ ಕಷ್ಟಪಟ್ಟು ಓದಿ ನೌಕರಿ ಕನಸು ಕಾಣುತ್ತಿರುವ ಬಡ ವಿದ್ಯಾರ್ಥಿಗಳ ಹೊಟ್ಟೆ ಮೇಲೆ ಹೊಡೆಯುವ ಗ್ಯಾರಂಟಿ ಕೊಟ್ಟಿದೆ ಸಿದ್ದರಾಮಯ್ಯ ಅವರ ಸರ್ಕಾರ! ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸುವುದಕ್ಕೆ ಕುಖ್ಯಾತಿ ಪಡೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಪಾಟೀಲ್, ಕಾನ್‌ಸ್ಟೇಬಲ್ ಪರೀಕ್ಷೆಯಲ್ಲೂ ಅಕ್ರಮ ನಡೆಸಲು ಹೊಂಚು ಹಾಕಿ ಕೂತಿದ್ದು ಬೆಳಕಿಗೆ ಬಂದಿದೆ. ಪ್ರತಿಯೊಂದು ಪರೀಕ್ಷೆಯಲ್ಲೂ ಆರ್. ಡಿ. ಪಾಟೀಲ್ ರಾಜಾರೋಷವಾಗಿ ಅಕ್ರಮ ನಡೆಸಲು ಕಾರಣ ಆತನ ಬೆನ್ನಿಗೆ #ATMSarkara ನಿಂತಿರುವುದರಿಂದ. ಸಿಬಿಐ ತನಿಖೆಗೆ ವಹಿಸಿ ಎಂದರೆ #TrollMinister ಪ್ರಿಯಾಂಕ್ ಖರ್ಗೆ ಮೂಗು ಮುರಿಯುವುದಕ್ಕೆ ಕಾರಣ ತಮ್ಮ ಬುಡಕ್ಕೆ ಪ್ರಕರಣ ಬಂದು ಬೀಳಲಿದೆ ಎನ್ನುವುದು ಅವರಿಗೆ ಖಾತರಿಯಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ

ಹಗರಣ, ಅಕ್ರಮಗಳ ಹೂರಣದಲ್ಲಿ ಯಾವುದೇ ಮುಲಾಜಿಲ್ಲದೆ ಭಾಗಿಯಾಗಿ, ಸದಾ ಕಲೆಕ್ಷನ್‌, ಕಮಿಷನ್‌ ಎನ್ನುತ್ತಾ, ಕೆ.ಇ.ಎ ಪರೀಕ್ಷಾ ಅಕ್ರಮ ಹಾಗೂ ಕಿಯೋನಿಕ್ಸ್ ಹಗರಣದಲ್ಲಿ ಭಾಗಿಯಾಗಿರುವ ಕಿಂಗ್‌ ಪಿನ್‌‌ಗಳನ್ನು ರಕ್ಷಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಒಂದು ಕ್ಷಣವೂ ಅರ್ಹರಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಮೊದಲು ಈ ಕಡುಭ್ರಷ್ಟ ಸಚಿವರನ್ನು ನಿಮ್ಮ ಸಂಪುಟದಿಂದ ವಜಾ ಮಾಡಿ ಎಂದು ಬಿಜೆಪಿ ಆಗ್ರಹಿಸಿದೆ.

ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿರುವ ಬೆನ್ನಲ್ಲೇ ಬಿಜೆಪಿಯು ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು