AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರದ 100 ದಿನದ ನೂರಾರು ಹಳವಂಡಗಳು: ವಿಡಿಯೋ ಹಂಚಿಕೊಂಡ ಬಿಜೆಪಿ

ಕಾಂಗ್ರೆಸ್​ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ಬಿಜೆಪಿ ಸರಣಿ ಟ್ವೀಟ್​​ ಮಾಡಿ ಬರೀ 100 ದಿನಕ್ಕೆ ನೂರಾರು ಹಳವಂಡಗಳು ಎಂದು ವ್ಯಂಗ್ಯವಾಡಿದೆ. ಅಧಿಕಾರ, ಆಡಳಿತದ ಸೂತ್ರ ಅಸಮರ್ಥ ಅಧಿಕಾರದಾಹಿಗಳ ಕೈ ಸೇರಿದರೆ ಹೇಗಿರುತ್ತೆ ಎನ್ನುವುದಕ್ಕೆ ಇದಕ್ಕಿಂತಲೂ ಉದಾಹರಣೆ ಸಿಗಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯ ಸರ್ಕಾರದ 100 ದಿನದ ನೂರಾರು ಹಳವಂಡಗಳು: ವಿಡಿಯೋ ಹಂಚಿಕೊಂಡ ಬಿಜೆಪಿ
TV9 Web
| Edited By: |

Updated on: Aug 29, 2023 | 1:56 PM

Share

ಬೆಂಗಳೂರು, (ಆಗಸ್ಟ್ 29): ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಕಾಂಗ್ರೆಸ್​ (Congress) ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ(Congress government 100 days ). ಇದಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ರಾಜ್ಯದ ಜನತೆಗೆ ಕೃತಜ್ಞತೆ ತಿಳಿಸಿದ್ದಾರೆ. ಇತ್ತ ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ(Congress government) ನೂರು ದಿನಗಳಲ್ಲಿ ನೂರೆಂಟು ಕರ್ಮಕಾಂಡಗಳನ್ನು ಮಾಡಿದೆ ಎಂದು ವಿಡಿಯೋವೊಂದನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬೆಲೆ ಏರಿಕೆ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ, ಶ್ಯಾಡೋ ಸಿಎಂ, ವರ್ಗಾವಣೆ ದಂಧೆ, ರೈತರ ಆತ್ಮಹತ್ಯೆ, ಕಲುಷಿತ ನೀರು, ಕಳಪೆ ಆಹಾರ, ಗುತ್ತಿಗೆದಾರರ ಪ್ರತಿಭಟನೆ, ಉಡುಪಿ ಘಟನೆ, ಸುಳ್ಳು ಸುದ್ದಿ, ಮರಳು ಮಾಫಿಯಾ ಅಬ್ಬಬ್ಬಾ ಒಂದಾ ಎರಡಾ. ಅಸಮರ್ಥ ಸರ್ಕಾರದ ಹಳವಂಡಗಳ ಬೃಹತ್ ಪಟ್ಟಿಯೇ ಇಲ್ಲಿದೆ ನೋಡಿ ಎಂದು ವಿಡಿಯೋವೊಂದನ್ನು ಹಂಚಿಕೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್​ ಸರ್ಕಾರಕ್ಕೆ 100 ದಿನ ಸಂಭ್ರಮ: ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ, ಜನತೆಗೆ ಧನ್ಯವಾದ ತಿಳಿಸಿದ ಸಿಎಂ

ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು. ತನ್ನ ಹಿಂದಿನ‌ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್​ ಮಿನಿಸ್ಟರ್​ ಪ್ರಿಯಾಂಕ್ ತವರು‌ ಜಿಲ್ಲೆಯಲ್ಲೇ ಮರಳು ಮಾಫಿಯಾ ಕಾನ್ಸ್​ಟೇಬಲ್​ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು. ಹೀಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್