AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರದ 100 ದಿನದ ನೂರಾರು ಹಳವಂಡಗಳು: ವಿಡಿಯೋ ಹಂಚಿಕೊಂಡ ಬಿಜೆಪಿ

ಕಾಂಗ್ರೆಸ್​ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ಬಿಜೆಪಿ ಸರಣಿ ಟ್ವೀಟ್​​ ಮಾಡಿ ಬರೀ 100 ದಿನಕ್ಕೆ ನೂರಾರು ಹಳವಂಡಗಳು ಎಂದು ವ್ಯಂಗ್ಯವಾಡಿದೆ. ಅಧಿಕಾರ, ಆಡಳಿತದ ಸೂತ್ರ ಅಸಮರ್ಥ ಅಧಿಕಾರದಾಹಿಗಳ ಕೈ ಸೇರಿದರೆ ಹೇಗಿರುತ್ತೆ ಎನ್ನುವುದಕ್ಕೆ ಇದಕ್ಕಿಂತಲೂ ಉದಾಹರಣೆ ಸಿಗಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯ ಸರ್ಕಾರದ 100 ದಿನದ ನೂರಾರು ಹಳವಂಡಗಳು: ವಿಡಿಯೋ ಹಂಚಿಕೊಂಡ ಬಿಜೆಪಿ
TV9 Web
| Edited By: |

Updated on: Aug 29, 2023 | 1:56 PM

Share

ಬೆಂಗಳೂರು, (ಆಗಸ್ಟ್ 29): ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಕಾಂಗ್ರೆಸ್​ (Congress) ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ(Congress government 100 days ). ಇದಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ರಾಜ್ಯದ ಜನತೆಗೆ ಕೃತಜ್ಞತೆ ತಿಳಿಸಿದ್ದಾರೆ. ಇತ್ತ ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ(Congress government) ನೂರು ದಿನಗಳಲ್ಲಿ ನೂರೆಂಟು ಕರ್ಮಕಾಂಡಗಳನ್ನು ಮಾಡಿದೆ ಎಂದು ವಿಡಿಯೋವೊಂದನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬೆಲೆ ಏರಿಕೆ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ, ಶ್ಯಾಡೋ ಸಿಎಂ, ವರ್ಗಾವಣೆ ದಂಧೆ, ರೈತರ ಆತ್ಮಹತ್ಯೆ, ಕಲುಷಿತ ನೀರು, ಕಳಪೆ ಆಹಾರ, ಗುತ್ತಿಗೆದಾರರ ಪ್ರತಿಭಟನೆ, ಉಡುಪಿ ಘಟನೆ, ಸುಳ್ಳು ಸುದ್ದಿ, ಮರಳು ಮಾಫಿಯಾ ಅಬ್ಬಬ್ಬಾ ಒಂದಾ ಎರಡಾ. ಅಸಮರ್ಥ ಸರ್ಕಾರದ ಹಳವಂಡಗಳ ಬೃಹತ್ ಪಟ್ಟಿಯೇ ಇಲ್ಲಿದೆ ನೋಡಿ ಎಂದು ವಿಡಿಯೋವೊಂದನ್ನು ಹಂಚಿಕೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್​ ಸರ್ಕಾರಕ್ಕೆ 100 ದಿನ ಸಂಭ್ರಮ: ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ, ಜನತೆಗೆ ಧನ್ಯವಾದ ತಿಳಿಸಿದ ಸಿಎಂ

ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು. ತನ್ನ ಹಿಂದಿನ‌ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್​ ಮಿನಿಸ್ಟರ್​ ಪ್ರಿಯಾಂಕ್ ತವರು‌ ಜಿಲ್ಲೆಯಲ್ಲೇ ಮರಳು ಮಾಫಿಯಾ ಕಾನ್ಸ್​ಟೇಬಲ್​ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು. ಹೀಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ