AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತವಕ್ಕಿಂತ ಕಡಿಮೆ ಆಸ್ತಿ ಘೋಷಿಸಿದ ಡಿಕೆಶಿ ವಿರುದ್ಧ ತನಿಖೆಯಾಗಲಿ; ಬಿಜೆಪಿ ಆಗ್ರಹಕ್ಕೆ ಈ ವಿಡಿಯೋ ಕಾರಣ!

ನಾನೇ ಆಸ್ತಿ ಘೋಷಣೆ ಮಾಡುವಾಗ ಎಷ್ಟೋ ಲೆಕ್ಕಾಚಾರ ಕಡಿಮೆ ಘೋಷಣೆ ಮಾಡಿದ್ದೇನೆ. ಇಂಥವೆಲ್ಲ ಇದೆ. ನಮ್ಮಂಥವರು ಎಷ್ಟೋ ತಪ್ಪು ಮಾಡುತ್ತಿದ್ದೇವೆ. ಇಂಥವೆಲ್ಲ ಇದೆ ಎಂದು ಡಿಕೆಶಿ ಹೇಳಿದ್ದರು.

ವಾಸ್ತವಕ್ಕಿಂತ ಕಡಿಮೆ ಆಸ್ತಿ ಘೋಷಿಸಿದ ಡಿಕೆಶಿ ವಿರುದ್ಧ ತನಿಖೆಯಾಗಲಿ; ಬಿಜೆಪಿ ಆಗ್ರಹಕ್ಕೆ ಈ ವಿಡಿಯೋ ಕಾರಣ!
ಡಿಕೆ ಶಿವಕುಮಾರ್
Ganapathi Sharma
|

Updated on: Jun 23, 2023 | 8:47 PM

Share

ಬೆಂಗಳೂರು: ವಾಸ್ತವಕ್ಕಿಂತ ಕಡಿಮೆ ಆಸ್ತಿ ಘೋಷಣೆ ಮಾಡಿದ್ದೇನೆ ಎಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ತನಿಖೆಯಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸ್ವಯಂಪ್ರೇರಣೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಮಾತನಾಡಿರುವ ವಿಡಿಯೋ ತುಣುಕನ್ನು ಉಲ್ಲೇಖಿಸಿದೆ.

ವಾಸ್ತವಕ್ಕಿಂತಲೂ ಕಡಿಮೆ ಘೋಷಣೆ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಅವರು ಗರ್ವದಿಂದ ಹೇಳಿದ್ದಾರೆ. ಹಾಗಾದರೆ, ಉಪಮುಖ್ಯಮಂತ್ರಿ ಎನಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಲೆಕ್ಕ ತೋರಿಸಿದ್ದಾರೆ ಎಂದಾಯಿತಲ್ಲವೇ? ಅವರು ಆಸ್ತಿ ತೆರಿಗೆವಂಚಕ ಎಂದು ಖುದ್ದು ಒಪ್ಪಿಕೊಂಡರಲ್ಲವೇ! ಧೈರ್ಯವಾಗಿ ಆಸ್ತಿ ಘೋಷಣೆ ಮಾಡಲು ಅವರಿಗೆ ಐಟಿ, ಇಡಿ, ಸಿಬಿಐ ಮೇಲೆ ಭಯವೇ? ಅಕ್ರಮ ಎಸಗುವವರು ಭಯ ಬೀಳಲೇ ಬೇಕು ಬಿಡಿ! ಈ ಪ್ರಕರಣವನ್ನು ಸಿದ್ದರಾಮಯ್ಯನವರು ಸ್ವಯಂಪ್ರೇರಿತರಾಗಿ ಪಾರದರ್ಶಕ ತನಿಖೆಗೆ ಒಳಪಡಿಸಲಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: BBMP Wards: ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚಿಸಿದ ಸರ್ಕಾರ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ತೆರಿಗೆ ವಂಚನೆ, ಕಟ್ಟಡ ತೆರಿಗೆ ವಂಚನೆ, ಸೆಲ್ಫ್ ಅಸೆಸ್​​ಮೆಂಟ್ ಸ್ಕೀಮ್ ಇತ್ಯಾದಿಗಳ ಬಗ್ಗೆ ಮಾತನಾಡಿದ್ದರು. ಇದೇ ವೇಳೆ, ನಾನೇ ಆಸ್ತಿ ಘೋಷಣೆ ಮಾಡುವಾಗ ಎಷ್ಟೋ ಲೆಕ್ಕಾಚಾರ ಕಡಿಮೆ ಘೋಷಣೆ ಮಾಡಿದ್ದೇನೆ. ಇಂಥವೆಲ್ಲ ಇದೆ. ನಮ್ಮಂಥವರು ಎಷ್ಟೋ ತಪ್ಪು ಮಾಡುತ್ತಿದ್ದೇವೆ. ಇಂಥವೆಲ್ಲ ಇದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು