Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ; ಬಿಜೆಪಿಗೂ ಗುಡ್​​ಬೈ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ; ಬಿಜೆಪಿಗೂ ಗುಡ್​​ಬೈ
ಬಾಬುರಾವ್ ಚಿಂಚನಸೂರ್ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
Follow us
Ganapathi Sharma
|

Updated on:Mar 20, 2023 | 10:47 PM

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ(BJP) ಬಾಬುರಾವ್ ಚಿಂಚನಸೂರ್ (Baburao Chinchansur) ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಜತೆಗೆ, ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ‘ಟಿವಿ9’ ಗೆ ಮಾಹಿತಿ ನೀಡಿವೆ. ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರ್, 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ.

ಗುರುಮಠಕಲ್‌ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2018ರ ವಿಧಾನಸಭ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋತಿದ್ದ ಅವರು ಇದೀಗ ಮತ್ತೆ ‘ಕೈ’ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Belagavi: ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

2019ರ ಲೋಕಸಭಾ ಚುನಾವಣೆಯಲ್ಲಿ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ಕೊಡಲು‌ ಮುಂದಾಗಿದ್ದರು. ಆದರೆ, ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಬಿಜೆಪಿಯಲ್ಲೇ ಉಳಿಯುವುದಾಗಿ ಹೇಳಿದ್ದರು.

ಮಂಗಳವಾರ ಬೆಳಿಗ್ಗೆ ಕಾಂಗ್ರೆಸ್ ಸೇರ್ಪಡೆ

ಬಾಬೂರಾವ್ ಚಿಂಚನಸೂರ್ ಮಂಗಳವಾರ ಬೆಳಿಗ್ಗೆ 9.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸಮ್ಮುಖದಲ್ಲಿ ಅವರು ‘ಕೈ’ ಹಿಡಿಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Mon, 20 March 23

ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ