AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

ಕರ್ನಾಟಕ ವಿಧಾನಸಭೆ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕನ ಆಯ್ಕೆ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದ್ದು, ಈ ಸಭೆಯಲ್ಲಿ ಪಾಲ್ಗೊಂಡು ಶಾಸಕರ ಅಭಿಪ್ರಾಯ ಸಂಗ್ರಹಿಸಿಲು ಕೇಂದ್ರ ಬಿಜೆಪಿಯಿಂದ ವೀಕ್ಷಕರು ಬೆಂಗಳೂರಿಗೆ ಬಂದಿಳಿಸಿದ್ದಾರೆ.

ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು
ನಿರ್ಮಲಾ ಸೀತರಾಮನ್ ಭೇಟಿಯಾದ ವಿಜಯೇಂದ್ರ
TV9 Web
| Edited By: |

Updated on:Nov 17, 2023 | 11:51 AM

Share

ಬೆಂಗಳೂರು, (ನವೆಂಬರ್, 17): ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್​ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ಹೌದು.. ಕೆಳಮನೆ ಹಾಗೂ ಮೇಲ್ಮನೆಗೆ ವಿರೋಧ ಪಕ್ಷದ (Opposition Leaders )ಆಯ್ಕೆ ಮಾಡುವ ಸಂಬಂಧ ಇಂದು(ನವೆಂಬರ್ 17) ಸಂಜೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಶಾಸಕರ ಅಭಿಪ್ರಾಯಕ್ಕೆ ಕೇಂದ್ರ ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ವೀಕ್ಷಕರನ್ನು ಬರಮಾಡಿಕೊಂಡ ವಿಜಯೇಂದ್ರ

ವಿಪಕ್ಷ ನಾಯಕ ಆಯ್ಕೆ ಮಾಡುವ ಸಂಬಂಧ ಶಾಸಕ ಅಭಿಪ್ರಾಯ ಸಂಗ್ರಹಿಸಲು ಬಂದಿರುವ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರವ ಬಿಜೆಪಿ ಕಚೇರಿಗೆ ಭೇಟಿ ನೀಡಿದು. ಈ ವೇಳ ಅವರನ್ನು ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸ್ವಾಗತಿಸಿದರು. ಬಳಿಕ ವಿಜಯೇಂದ್ರ ಅವರು ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ ನಡೆಸಿದರು. ಬಳಿಕ ಎಲ್ಲರೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ತೆರಳಿದರು.

ಇದನ್ನೂ ಓದಿ: ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ ಫೈನಲ್: ಒಕ್ಕಲಿಗ ನಾಯಕನಿಗೆ ಪಟ್ಟ ಫಿಕ್ಸ್​, ಯಾರು ಗೊತ್ತಾ?

ವೀಕ್ಷಕರನ್ನು ಭೇಟಿಯಾದ ಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ

ಇನ್ನು ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರು ವೀಕ್ಷಕರಾದ ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪೂಜಾರಿ ಮೇಲ್ಮನೆ ವಿರೋಧ ಪಕ್ಷದ ಸ್ಥಾನದ ಅವಕಾಶ ಕೊಟ್ಟರೆ, ನಿಭಾಯಿಸುವುದಾಗಿ ವರಿಷ್ಠರಿಗೆ ಹೇಳಿದ್ದೇನೆ. ಇವತ್ತು ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಸಭೆಯಲ್ಲಿ ಎರಡು ಮನೆಗಳಿಗೂ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ. ನಾನು ಆಕಾಂಕ್ಷಿ ಎನ್ನುವುದಕ್ಕಿಂತ ಮುಖ್ಯವಾಗಿ ನನಗೆ ಅವಕಾಶ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮನವಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:50 am, Fri, 17 November 23

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?