ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

ಕರ್ನಾಟಕ ವಿಧಾನಸಭೆ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕನ ಆಯ್ಕೆ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದ್ದು, ಈ ಸಭೆಯಲ್ಲಿ ಪಾಲ್ಗೊಂಡು ಶಾಸಕರ ಅಭಿಪ್ರಾಯ ಸಂಗ್ರಹಿಸಿಲು ಕೇಂದ್ರ ಬಿಜೆಪಿಯಿಂದ ವೀಕ್ಷಕರು ಬೆಂಗಳೂರಿಗೆ ಬಂದಿಳಿಸಿದ್ದಾರೆ.

ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು
ನಿರ್ಮಲಾ ಸೀತರಾಮನ್ ಭೇಟಿಯಾದ ವಿಜಯೇಂದ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 17, 2023 | 11:51 AM

ಬೆಂಗಳೂರು, (ನವೆಂಬರ್, 17): ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್​ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ಹೌದು.. ಕೆಳಮನೆ ಹಾಗೂ ಮೇಲ್ಮನೆಗೆ ವಿರೋಧ ಪಕ್ಷದ (Opposition Leaders )ಆಯ್ಕೆ ಮಾಡುವ ಸಂಬಂಧ ಇಂದು(ನವೆಂಬರ್ 17) ಸಂಜೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಶಾಸಕರ ಅಭಿಪ್ರಾಯಕ್ಕೆ ಕೇಂದ್ರ ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ವೀಕ್ಷಕರನ್ನು ಬರಮಾಡಿಕೊಂಡ ವಿಜಯೇಂದ್ರ

ವಿಪಕ್ಷ ನಾಯಕ ಆಯ್ಕೆ ಮಾಡುವ ಸಂಬಂಧ ಶಾಸಕ ಅಭಿಪ್ರಾಯ ಸಂಗ್ರಹಿಸಲು ಬಂದಿರುವ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರವ ಬಿಜೆಪಿ ಕಚೇರಿಗೆ ಭೇಟಿ ನೀಡಿದು. ಈ ವೇಳ ಅವರನ್ನು ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸ್ವಾಗತಿಸಿದರು. ಬಳಿಕ ವಿಜಯೇಂದ್ರ ಅವರು ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ ನಡೆಸಿದರು. ಬಳಿಕ ಎಲ್ಲರೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ತೆರಳಿದರು.

ಇದನ್ನೂ ಓದಿ: ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ ಫೈನಲ್: ಒಕ್ಕಲಿಗ ನಾಯಕನಿಗೆ ಪಟ್ಟ ಫಿಕ್ಸ್​, ಯಾರು ಗೊತ್ತಾ?

ವೀಕ್ಷಕರನ್ನು ಭೇಟಿಯಾದ ಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ

ಇನ್ನು ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರು ವೀಕ್ಷಕರಾದ ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪೂಜಾರಿ ಮೇಲ್ಮನೆ ವಿರೋಧ ಪಕ್ಷದ ಸ್ಥಾನದ ಅವಕಾಶ ಕೊಟ್ಟರೆ, ನಿಭಾಯಿಸುವುದಾಗಿ ವರಿಷ್ಠರಿಗೆ ಹೇಳಿದ್ದೇನೆ. ಇವತ್ತು ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಸಭೆಯಲ್ಲಿ ಎರಡು ಮನೆಗಳಿಗೂ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ. ನಾನು ಆಕಾಂಕ್ಷಿ ಎನ್ನುವುದಕ್ಕಿಂತ ಮುಖ್ಯವಾಗಿ ನನಗೆ ಅವಕಾಶ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮನವಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:50 am, Fri, 17 November 23

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?