Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ: ವಿವಾದಾತ್ಮಕ ಹೇಳಿಕೆ ನೀಡಿದ ಸಲೀಂ ಅಹ್ಮದ್

ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಎಲ್ ಸಂತೋಷ್ ಬಹುಶ ಕನಸು ಕಾಣುತ್ತಿದ್ದಾರೆ. ನಿದ್ದೆಯಲ್ಲಿ ಮಾತಾಡುತ್ತಿರಬಹುದು. ಅವರ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಜಗಜ್ಜಾಹೀರಾಗಿದೆ. ಸಂತೋಷ್ ಅವರಿಗೆ ವಾಸ್ತವ ಸ್ಥಿತಿ ಗೊತ್ತಿಲ್ಲ ಎಂದರು.

ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ: ವಿವಾದಾತ್ಮಕ ಹೇಳಿಕೆ ನೀಡಿದ ಸಲೀಂ ಅಹ್ಮದ್
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Rakesh Nayak Manchi

Updated on:Sep 03, 2023 | 3:43 PM

ಹುಬ್ಬಳ್ಳಿ, ಸೆ.3: ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ ಎಂದು ಹೇಳುವ ಮೂಲಕ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Salim Ahmed) ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೆ, 40 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (B.L.Santhosh) ಹೇಳಿಕೆಗೆ ತಿರುಗೇಟು ನೀಡಿದ ಸಲೀಂ ಅಹಮ್ಮದ್, ಅವರು ನಿದ್ದೆಯಲ್ಲಿ ಮಾತಾಡುತ್ತಿರಬಹುದು. ಅವರಿಗೆ ವಾಸ್ತವ ಸ್ಥಿತಿ ಗೊತ್ತಿಲ್ಲ ಎಂದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಲೀಂ ಅಹಮ್ಮದ್, ಕರ್ನಾಟಕದಲ್ಲಿ ನಮ್ಮ ಶಾಸಕರನ್ನು ಬಾಂಬೆ ಕರೆದುಕೊಂಡು ಹೋಗಿ ಸರ್ಕಾರ ಮಾಡಿದ್ದರು. ಮಧ್ಯಪ್ರದೇಶದಲ್ಲಿ ಆಪರೇಶನ್ ಮಾಡಿದ್ದಾರೆ. ಬಿಎಲ್ ಸಂತೋಷ್ ಅವರು ಬಹುಶ ಕನಸು ಕಾಣುತ್ತಿದ್ದಾರೆ. ಸಂತೋಷ್ ನಿದ್ದೆಯಲ್ಲಿ ಮಾತಾಡುತ್ತಿರಬಹುದು. ಬಿಜೆಪಿ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಜಗಜ್ಜಾಹೀರಾಗಿದೆ. ಸಂತೋಷ್ ಅವರಿಗೆ ವಾಸ್ತವ ಸ್ಥಿತಿ ಗೊತ್ತಿಲ್ಲ. ಅವರ ಹೇಳಿಕೆಗೆ ನಗಬೇಕೋ ಏನೋ ಮಾಡಬೇಕೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಬಿಎಲ್ ಸಂತೋಷ್ ಉತ್ತರಿಸಲಿ ಎಂದ ಪ್ರಿಯಾಂಕ್ ಖರ್ಗೆ

ಕಳೆದ ಬಾರಿ ಚುನಾವಣೆಯಲ್ಲಿ ಜನ ಬಿಜೆಪಿಗೆ ಉತ್ತರ ಕೊಟ್ಟಿದ್ದಾರೆ. ಮೋದಿ ಸುಳ್ಳು ಹೇಳುತ್ತಾ ಒಂಬತ್ತು ವರ್ಷ ಕಳೆದಿದ್ದಾರೆ. ನಾವು 100 ದಿನದಲ್ಲಿ ನುಡಿದಂತೆ ನಡೆದಿದ್ದೇವೆ. ಯಾವ ಘನಕಾರ್ಯ ಮಾಡೀದ್ದೀರಿ ಅಂತಾ ಜನ ನಿಮಗೆ ಉತ್ತರ‌ ಕೊಡಬೇಕು? ನಾವು ಮುಂದಿನ‌ ದಿನಗಳಲ್ಲಿ ಬಿಜೆಪಿಯನ್ನು ಬೆತ್ತಲೆ ಮಾಡುತ್ತೇವೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜೀನಾಮೆ ಕೊಡಿಸಿದ ಕಣ್ಣೀರ ಕಥೆಗೆ ಉತ್ತರ ಕೊಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಆಪರೇಶನ್ ಹಸ್ತದ ಅವಶ್ತಕತೆ ಇಲ್ಲ. ನಮಗೆ ಅದರ ಅನಿವಾರ್ಯತೆ ಇಲ್ಲ. ಕಾಂಗ್ರೆಸ್ ಒಪ್ಪಿ ಕೆಲವರು ಬರುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Sun, 3 September 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ