AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅವಲೋಕನ ಸಭೆ: ಸೋಲಿಗೆ ಕಾರಣಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಪರಾಜಿತ ಅಭ್ಯರ್ಥಿಗಳು

ಇಂದು ನಡೆದ ಬಿಜೆಪಿ ಅವಲೋಕನ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಸೋಲಿಗೆ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Jun 08, 2023 | 6:44 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Results 2023) ಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು (BJP) ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಮಾಡಲಾಗಿದೆ. ನಗರದ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್(Arun Singh) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಬಿಜೆಪಿ ಸೋಲಿಗೆ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ಸೋಲಿಗೆ ಪರಾಜಿತ ಅಭ್ಯರ್ಥಿಗಳ ಕಾರಣಗಳು?

  • ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳು
  • ಒಳ ಮೀಸಲಾತಿ ಹಂಚಿಕೆಯ ಒಳ ಏಟು
  • 40% ಕಮೀಷನ್ ಆರೋಪ ಸೇರಿ ಕೆಲವು ಭ್ರಷ್ಟಾಚಾರ ಆರೋಪ ಪ್ರಕರಣಗಳು
  • ಅಲ್ಲಲ್ಲಿ ಬೀಸಿದ ವಿರೋಧಿ ಅಲೆ
  • ಟಿಕೆಟ್ ಹಂಚಿಕೆಯಲ್ಲಿನ ವಿಳಂಬ
  • ಹೈಕಮಾಂಡ್ ಮೇಲಿನ ಹೆಚ್ಚಿನ ಅವಲಂಬನೆ
  • ಸಚಿವರು ಸರ್ಕಾರ ಇದ್ದಾಗ ಸರಿಯಾಗಿ ಸ್ಪಂದಿಸಲಿಲ್ಲ
  • ಪಕ್ಷದ ಮುಖಂಡರು ಅಭ್ಯರ್ಥಿಗಳ ಮಾತಿಗೆ ಬೆಲೆ ಕೊಡಲಿಲ್ಲ
  • ಲಕ್ಷ್ಮಣ ಸವದಿ ಪಕ್ಷ ಬಿಟ್ಟಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಡೆತ ಆಯಿತು
  • ಚುನಾವಣೆ ಸಂದರ್ಭದಲ್ಲಿ ಅಕ್ಕಿ ಕೊಡುವುದನ್ನು ಕಡಿಮೆ ಮಾಡಿದ್ದೂ ಪ್ರಮುಖ ಕಾರಣ
  • ನಾಯಕರು ಮಾಡಿರುವ ತಪ್ಪಿನಿಂದ ನಾವು ಬಲಿಯಾದೆವು ಎಂದು ಪರಾಜಿತ ಅಭ್ಯರ್ಥಿಗಳು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?

ಸೋಲಿನಿಂದ ಯಾರೂ ಧೃತಿಗೆಡಬೇಡಿ: ಬಿಎಸ್​ ಯಡಿಯೂರಪ್ಪ ಕಿವಿಮಾತು

ಸಭೆಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮಾತನಾಡಿ, ವಿಧಾನಸಭಾ ಚುನಾವಣೆ ಸೋಲಿನಿಂದ ಯಾರೂ ಧೃತಿಗೆಡಬೇಡಿ. ರಾಜ್ಯದಲ್ಲಿ 2 ಸ್ಥಾನದಿಂದ ಇಲ್ಲಿಯವರೆಗೆ ಪಕ್ಷ ಕಟ್ಟಿ ಬೆಳೆಸಿದ್ದೇನೆ. ವಿಧಾನಸಭೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರ ಮಾತ್ರ ಇದ್ದೆವು. ಬಿಜೆಪಿ ಶಾಸಕರಾಗಿದ್ದ ವಸಂತ ಬಂಗೇರ ಪಕ್ಷ ಬಿಟ್ಟು ಹೋದರು. ಆಗ ನಾನು ಒಬ್ಬನೇ ಸದನದಲ್ಲಿ ನಿಂತು ಹೋರಾಟ ಮಾಡಿದ್ದೇನೆ.

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿ. ನರೇಂದ್ರ ಮೋದಿ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಿ. ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಕಿವಿಮಾತು ಹೇಳಿದರು.

ನನ್ನ ಮತ್ತು ಚಿಂತಾಮಣಿ ಅಭ್ಯರ್ಥಿ ಸೋಲಿಗೆ ಸುಧಾಕರ್ ಕಾರಣ: ಎಂಟಿಬಿ ನಾಗರಾಜ್ 

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಕಾಂಗ್ರೆಸ್​ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ. ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ ಎಂದರು.

ಇದನ್ನೂ ಓದಿ: BJP Introspection Meeting: ಬಿಜೆಪಿ ಆತ್ಮಾವಲೋಕನ ಸಭೆ; ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?

ಡಾ. ಸುಧಾಕರ್​ಗೆ ಉಸ್ತುವಾರಿ ನೀಡಿದರು. ಆತನೂ ಸೋತ, ನಮ್ಮನ್ನೂ ಸೋಲಿಸಿದ. ಉಸ್ತುವಾರಿಯನ್ನು ಸಮರ್ಥವಾಗಿ ಸುಧಾಕರ್‌ ನಿಭಾಯಿಸಲಿಲ್ಲ. ನಾನು ಹಣ, ಅಧಿಕಾರದ ಆಮಿಷಕ್ಕೆ ಬಿಜೆಪಿಗೆ ಬಂದವನಲ್ಲ. ನನ್ನ ಮತ್ತು ಚಿಂತಾಮಣಿ ಅಭ್ಯರ್ಥಿ ಸೋಲಿಗೆ ಸುಧಾಕರ್ ಕಾರಣ ಎಂದು ವಾಗ್ದಾಳಿ ಮಾಡಿದರು.

40% ಕಮಿಷನ್ ಆರೋಪಕ್ಕೆ ಕೌಂಟರ್ ಅಟ್ಯಾಕ್ ಮಾಡಿಲ್ಲ. ನಾವು ಕೇವಲ ಸಿದ್ದರಾಮಯ್ಯಗೆ ಅಷ್ಟೇ ಬೈದೆವು. ನಮ್ಮಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಸರಿಯಾಗಿ ಆರೋಪಕ್ಕೆ ತಿರುಗೇಟು ಕೊಟ್ಟಿಲ್ಲ. ಚುನಾವಣೆ ಸಂದರ್ಭದಲ್ಲಿ ಅಕ್ಕಿ ಕೊಡುವುದನ್ನು ಕಡಿಮೆ ಮಾಡಿದ್ದೂ ಪ್ರಮುಖ ಕಾರಣಗಳಲ್ಲಿ ಒಂದು. ಪಕ್ಷದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಂಡಿಲ್ಲ. ಕಾರ್ಯಕರ್ತರ ಆಗು ಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲಿಲ್ಲ. ಇದರಿಂದ ಕಾರ್ಯಕರ್ತರು ಸಿಟ್ಟಾಗಿದ್ದರು. ಹತ್ತು ಕೆಜಿ ಅಕ್ಕಿ ಗ್ಯಾರಂಟಿಯೂ ನನ್ನ ಸೋಲಿಗೆ ಕಾರಣವಾಗಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:43 pm, Thu, 8 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ