AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು

ಅತ್ತ ಜಾತಿ ಜನಗಣತಿ ಒತ್ತಾಯಿಸಿ ಬೃಹತ್ ಜಾಗೃತಿ ಸಮಾವೇಶ ಆಯೋಜನೆ ಮಾಡುತ್ತಾ, ಇತ್ತ ತಾವೂ ಅಖಾಡಕ್ಕೆ ಇಳಿಯಲು ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಸಜ್ಜಾಗಿ ನಿಂತಿದ್ದಾರೆ. ಸಿದ್ದರಾಮಯ್ಯ ತಂತ್ರಗಾರಿಕೆ ಪ್ರತಿಯಾಗಿ ಬಿಕೆ ಹರಿಪ್ರಸಾದ್ ಕೂಡ ಸಮಯದಾಯ ಒಗ್ಗೂಡಿಸುತ್ತಿದ್ದಾರೆ. ಮೊದಲು ಹಿಂದುಳಿದ ವರ್ಗಗಳ ಒಗ್ಗೂಡಿಸಿ ತಮ್ಮ ಸಾಮರ್ಥ್ಯವನ್ನು ಎದುರಾಳಿಗಳಿಗೆ ಮನವರಿಕೆ ಮಾಡಿದ್ದ ಹರಿಪ್ರಸಾದ್, ಮತ್ತೊಂದು ಸಮಾವೇಶ ನಡೆಸಲು ಸಜ್ಜಾಗುತ್ತಿದ್ದಾರೆ.

ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು
ಬಿಕೆ ಹರಿಪ್ರಸಾದ್ ಮತ್ತು ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Dec 17, 2023 | 9:04 AM

Share

ಬೆಂಗಳೂರು, ಡಿ.17: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಟೀಕೆಗಳನ್ನು ನಡೆಸುತ್ತಾ ಬರುತ್ತಿರುವ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ (B.K. Hariprasad), ಸಿದ್ದರಾಮಯ್ಯ ಅವರ ತಂತ್ರಗಾರಿಕೆ ಪ್ರತಿಯಾಗಿ ಸಮಯದಾಯ ಒಗ್ಗೂಡಿಸುತ್ತಾ ಬರುತ್ತಿದ್ದಾರೆ. ಮೊದಲು ಹಿಂದುಳಿದ ವರ್ಗಗಳ ಒಗ್ಗೂಡಿಸಿ ತಮ್ಮ ಸಾಮರ್ಥ್ಯವನ್ನು ಎದುರಾಳಿಗಳಿಗೆ ಮನವರಿಕೆ ಮಾಡಿದ್ದ ಹರಿಪ್ರಸಾದ್, ಇದೀಗ ಮತ್ತೊಂದು ಸಮಾವೇಶ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

ಈಡಿಗ, ಬಿಲ್ಲವ, ನಾಮಧಾರಿ ಸಮಾವೇಶ ಮೂಲಕ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಒಡ್ಡಿದ್ದರು. ಇವರಿಗೆ ಕೌಂಟರ್​ ನೀಡಲೆಂದೇ ಸರ್ಕಾರದ ಇರಾದೆ ಮೇರೆಯೇ ಮತ್ತೊಂದು ಈಡಿಗ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಸಮಯದಾಯದ ನಾಯಕ ಹರಿಪ್ರಸಾದ್ ಅವರನ್ನೇ ದೂರ ಇಡಲಾಗಿತ್ತು.

ಇದನ್ನೂ ಓದಿ: ಈಡಿಗ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಗಳಿಗೆ ಟಕ್ಕರ್ ಕೊಟ್ಟ ಬಿಕೆ ಹರಿಪ್ರಸಾದ್

ಇದೀಗ ಜಾತಿ ಜನಣತಿಗೆ ಒತ್ತಾಯಿಸಿ ನಡೆಯುತ್ತಿರುವ ಅಹಿಂದ ಸಮಾವೇಶಕ್ಕೆ ಹರಿಪ್ರಸಾದ್ ಕಾಯುತ್ತಿದ್ದಾರೆ. ಜನವರಿಯಲ್ಲಿ ಮತ್ತೊಂದು ಸುತ್ತಿನ ಬೃಹತ್ ಹಿಂದುಳಿದ ಸಮಾವೇಶ ನಡೆಸಲು ಹರಿಪ್ರಸಾದ್ ಸಿದ್ಧತೆ ನಡೆಸುತ್ತಿದ್ದಾರೆ. ಆ ಮೂಲಕ ತಮ್ಮ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲು ಸಜ್ಜಾಗುತ್ತಿದ್ದಾರೆ.

ಹರಿಪ್ರಸಾದ್ ಅವರು ಹಿಂದುಳಿದ ವರ್ಗ ತಮ್ಮ ಬೆನ್ನಿಗೆ ನಿಂತಿದೆ ಎಂದು ಮತ್ತೆ ಸಂದೇಶ ರವಾನಿಸಲು ಮುಂದಾಗಿದ್ದು, ಮತ್ತೊಂದು ಸುತ್ತು ರಾಜ್ಯ ಪ್ರವಾಸ ಮಾಡಲಿದ್ದಾರೆ. ಹಿಂದುಳಿದ ವರ್ಗಗಳ ಹಲವು ಸ್ವಾಮೀಜಿಗಳು ಜನವರಿಯಲ್ಲಿ ಬೃಹತ್ ಸಮಾವೇಶ ನಡೆಸಲು ಹರಿಪ್ರಸಾದ್ ಬೆನ್ನಿಗೆ ನಿಂತಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್