ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು

ಅತ್ತ ಜಾತಿ ಜನಗಣತಿ ಒತ್ತಾಯಿಸಿ ಬೃಹತ್ ಜಾಗೃತಿ ಸಮಾವೇಶ ಆಯೋಜನೆ ಮಾಡುತ್ತಾ, ಇತ್ತ ತಾವೂ ಅಖಾಡಕ್ಕೆ ಇಳಿಯಲು ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಸಜ್ಜಾಗಿ ನಿಂತಿದ್ದಾರೆ. ಸಿದ್ದರಾಮಯ್ಯ ತಂತ್ರಗಾರಿಕೆ ಪ್ರತಿಯಾಗಿ ಬಿಕೆ ಹರಿಪ್ರಸಾದ್ ಕೂಡ ಸಮಯದಾಯ ಒಗ್ಗೂಡಿಸುತ್ತಿದ್ದಾರೆ. ಮೊದಲು ಹಿಂದುಳಿದ ವರ್ಗಗಳ ಒಗ್ಗೂಡಿಸಿ ತಮ್ಮ ಸಾಮರ್ಥ್ಯವನ್ನು ಎದುರಾಳಿಗಳಿಗೆ ಮನವರಿಕೆ ಮಾಡಿದ್ದ ಹರಿಪ್ರಸಾದ್, ಮತ್ತೊಂದು ಸಮಾವೇಶ ನಡೆಸಲು ಸಜ್ಜಾಗುತ್ತಿದ್ದಾರೆ.

ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು
ಬಿಕೆ ಹರಿಪ್ರಸಾದ್ ಮತ್ತು ಸಿದ್ದರಾಮಯ್ಯ
Edited By: Rakesh Nayak Manchi

Updated on: Dec 17, 2023 | 9:04 AM

ಬೆಂಗಳೂರು, ಡಿ.17: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಟೀಕೆಗಳನ್ನು ನಡೆಸುತ್ತಾ ಬರುತ್ತಿರುವ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ (B.K. Hariprasad), ಸಿದ್ದರಾಮಯ್ಯ ಅವರ ತಂತ್ರಗಾರಿಕೆ ಪ್ರತಿಯಾಗಿ ಸಮಯದಾಯ ಒಗ್ಗೂಡಿಸುತ್ತಾ ಬರುತ್ತಿದ್ದಾರೆ. ಮೊದಲು ಹಿಂದುಳಿದ ವರ್ಗಗಳ ಒಗ್ಗೂಡಿಸಿ ತಮ್ಮ ಸಾಮರ್ಥ್ಯವನ್ನು ಎದುರಾಳಿಗಳಿಗೆ ಮನವರಿಕೆ ಮಾಡಿದ್ದ ಹರಿಪ್ರಸಾದ್, ಇದೀಗ ಮತ್ತೊಂದು ಸಮಾವೇಶ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

ಈಡಿಗ, ಬಿಲ್ಲವ, ನಾಮಧಾರಿ ಸಮಾವೇಶ ಮೂಲಕ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಒಡ್ಡಿದ್ದರು. ಇವರಿಗೆ ಕೌಂಟರ್​ ನೀಡಲೆಂದೇ ಸರ್ಕಾರದ ಇರಾದೆ ಮೇರೆಯೇ ಮತ್ತೊಂದು ಈಡಿಗ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಸಮಯದಾಯದ ನಾಯಕ ಹರಿಪ್ರಸಾದ್ ಅವರನ್ನೇ ದೂರ ಇಡಲಾಗಿತ್ತು.

ಇದನ್ನೂ ಓದಿ: ಈಡಿಗ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಗಳಿಗೆ ಟಕ್ಕರ್ ಕೊಟ್ಟ ಬಿಕೆ ಹರಿಪ್ರಸಾದ್

ಇದೀಗ ಜಾತಿ ಜನಣತಿಗೆ ಒತ್ತಾಯಿಸಿ ನಡೆಯುತ್ತಿರುವ ಅಹಿಂದ ಸಮಾವೇಶಕ್ಕೆ ಹರಿಪ್ರಸಾದ್ ಕಾಯುತ್ತಿದ್ದಾರೆ. ಜನವರಿಯಲ್ಲಿ ಮತ್ತೊಂದು ಸುತ್ತಿನ ಬೃಹತ್ ಹಿಂದುಳಿದ ಸಮಾವೇಶ ನಡೆಸಲು ಹರಿಪ್ರಸಾದ್ ಸಿದ್ಧತೆ ನಡೆಸುತ್ತಿದ್ದಾರೆ. ಆ ಮೂಲಕ ತಮ್ಮ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲು ಸಜ್ಜಾಗುತ್ತಿದ್ದಾರೆ.

ಹರಿಪ್ರಸಾದ್ ಅವರು ಹಿಂದುಳಿದ ವರ್ಗ ತಮ್ಮ ಬೆನ್ನಿಗೆ ನಿಂತಿದೆ ಎಂದು ಮತ್ತೆ ಸಂದೇಶ ರವಾನಿಸಲು ಮುಂದಾಗಿದ್ದು, ಮತ್ತೊಂದು ಸುತ್ತು ರಾಜ್ಯ ಪ್ರವಾಸ ಮಾಡಲಿದ್ದಾರೆ. ಹಿಂದುಳಿದ ವರ್ಗಗಳ ಹಲವು ಸ್ವಾಮೀಜಿಗಳು ಜನವರಿಯಲ್ಲಿ ಬೃಹತ್ ಸಮಾವೇಶ ನಡೆಸಲು ಹರಿಪ್ರಸಾದ್ ಬೆನ್ನಿಗೆ ನಿಂತಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us