AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಜಯೇಂದ್ರ ಏನು ಮಾಡಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ: ಬಿಕೆ ಹರಿಪ್ರಸಾದ್

ಕಾಂಗ್ರೆಸ್​ ವಿರುದ್ಧ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಅವರು ಮಾಡಿದ ಭ್ರಷ್ಟಾಚಾರದ ಆರೋಪಕ್ಕೆ ತಿರುಗೇಟು ನೀಡಿದ ಎಂಎಲ್​ಸಿ ಬಿಕೆ ಹರಿಪ್ರಸಾದ್, ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಜಯೇಂದ್ರ ಏನು ಮಾಡಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ ಎಂದರು. ಅಲ್ಲದೆ, ಐಟಿ ದಾಳಿ ಚುನಾವಣೆ ಗಿಮಿಕ್ ಎಂದ ಅವರು, ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿದರು.

ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಜಯೇಂದ್ರ ಏನು ಮಾಡಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ: ಬಿಕೆ ಹರಿಪ್ರಸಾದ್
ಬಿಕೆ ಹರಿಪ್ರಸಾದ್, ಬಿವೈ ವಿಜಯೇಂದ್ರ
TV9 Web
| Edited By: Rakesh Nayak Manchi|

Updated on: Oct 16, 2023 | 7:09 PM

Share

ಬೆಂಗಳೂರು, ಅ.16: ಕಾಂಗ್ರೆಸ್​ ವಿರುದ್ಧ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರು ಮಾಡಿದ ಭ್ರಷ್ಟಾಚಾರದ ಆರೋಪಕ್ಕೆ ತಿರುಗೇಟು ನೀಡಿದ ಎಂಎಲ್​ಸಿ ಬಿಕೆ ಹರಿಪ್ರಸಾದ್ (BK Hariprasad), ಯಡಿಯೂರಪ್ಪ (BS Yediyurappa) ಸಿಎಂ ಆಗಿದ್ದಾಗ ವಿಜಯೇಂದ್ರ ಏನು ಮಾಡಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ ಎಂದರು. ಅಲ್ಲದೆ, ಐಟಿ ದಾಳಿ ಚುನಾವಣೆ ಗಿಮಿಕ್ ಎಂದ ಅವರು, ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಬಗ್ಗೆ ಮಾತನಾಡಲು ವಿಜಯೇಂದ್ರಗೆ ನೈತಿಕತೆ ಇದೆಯಾ? ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಜಯೇಂದ್ರ ಏನು ಮಾಡಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಅಷ್ಟಕ್ಕೂ ಯಡಿಯೂರಪ್ಪರನ್ನ ಯಾವ ಆಧಾರದ ಮೇಲೆ ಸಿಎಂ ಸ್ಥಾನದಿಂದ ತೆಗೆದರು? ಈ ಬಗ್ಗೆ ಇದೂವರೆಗೂ ಯಾರೂ ಹೇಳಿಲ್ಲ. ಭ್ರಷ್ಟಾಚಾರದ ಬಗ್ಗೆ ಮಾತನ್ನಾಡಲು ನೈತಿಕತೆಯನ್ನ ಕಳೆದುಕೊಂಡಿದ್ದಾರೆ ಎಂದರು.

ಜಾತಿ ಗಣತಿ ಸಮೀಕ್ಷಾ ವರದಿ ಬಹಿರಂಗಕ್ಕೆ ಒತ್ತಾಯ

ಜಾತಿ ಗಣತಿ ಸಮೀಕ್ಷಾ ವರದಿ ಬಹಿರಂಗಕ್ಕೆ ಒತ್ತಾಯಿಸಿದ ಹರಿಪ್ರಸಾದ್, ಇಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಭೇಟಿ ಮಾಡಿದ್ದೇನೆ. ತೀರಾ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಲು ಈ ವರದಿ ಸಹಕಾರಿಯಾಗಲಿದೆ. ಹಾಗಾಗಿ ತಡಮಾಡದೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಒತ್ತಾಯಿಸಿದ್ದೇನೆ ಎಂದರು.

ಇದನ್ನೂ ಓದಿ: ಐಟಿ ದಾಳಿ ವೇಳೆ ‌ಸಿಕ್ಕಿರುವ ಹಣ SST ಟ್ಯಾಕ್ಸ್​​ಗೆ ಸೇರಿದ್ದು; ಪರೋಕ್ಷವಾಗಿ ಡಿಕೆ ಬ್ರದರ್ಸ್​ ಮೇಲೆ ಕುಮಾರಸ್ವಾಮಿ ಆರೋಪ

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಲಾಗಿದೆ. ಜನರ ಹಣವನ್ನೇ ಸಮೀಕ್ಷಾ ವರದಿಗೆ ಬಳಸಿಕೊಳ್ಳಲಾಗಿದೆ. ಮೊದಲೇ ಸರ್ಕಾರ ಅಂಗೀಕರಿಸಿದ್ದರೆ ದೇಶದಲ್ಲೇ ಜಾತಿಗಣತಿ ಅಂಗೀಕರಿಸಿದ ಮೊದಲ ರಾಜ್ಯ ಕರ್ನಾಟಕ ಎಂಬುದಾಗುತ್ತಿತ್ತು. ಈಗಲೂ ತಡಮಾಡದೆ ಜಾತಿಗಣತಿ ಸಮೀಕ್ಷಾ ವರದಿ ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.

ಐಟಿ ದಾಳಿ ಚುನಾವಣಾ ಗಿಮಿಗ್ ಎಂದ ಬಿಕೆ ಹರಿಪ್ರಸಾದ್

ಐಟಿ ದಾಳಿ ವೇಳೆ ಪತ್ತೆಯಾದ ಹಣ ಕಾಂಗ್ರೆಸ್​ನದ್ದು ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಹರಿಪ್ರಸಾದ್, ಕೇಂದ್ರದವರು ಚುನಾವಣೆಗಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಪತ್ತೆಯಾಗಿರುವ ಹಣ ಯಾರದ್ದು ಎಂಬುದರ ಕುರಿತು ತನಿಖೆಯಾಗಲಿ. ಆಮೇಲೆ ಯಾರು ಹಾಲಲ್ಲಿದ್ದಾರೆ, ನೀರಲ್ಲಿದ್ದಾರೆ ಎಂಬುದು ಗೊತ್ತಾಗುತ್ತದೆ. ಕಾಂಗ್ರೆಸ್ ಕೇವಲ ಕರ್ನಾಟಕ ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇಲ್ಲ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್​ ಅಧಿಕಾರದಲ್ಲಿ ಇದೆ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ಆರೋಪ ಮಾಡುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​