AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಖಾಡಕ್ಕಿಳಿದ ಬಿ.ಎಲ್.ಸಂತೋಷ್, ಬಣ ಬೇಗುದಿಗೆ ಸಿಗುವುದೇ ಮುಲಾಮು?

ಬೆಳಗಾವಿ ಪರಿಷತ್ ಚುನಾವಣೆ ಸೋಲಿನ ಬಳಿಕ ಬೆಳಗಾವಿ ಜಿಲ್ಲೆಯಲ್ಲಿ ಬಣ ರಾಜಕೀಯ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ ಕತ್ತಿ, ಜಾರಕಿಹೊಳಿ ಬಣಗಳ ನಡುವೆ ತಿಕ್ಕಾಟ ಇದೆ. ಇದನ್ನು ಪರಿಹರಿಸಲು ಖುದ್ದು ಬಿಎಲ್​ ಸಂತೋಷ್ ಅಖಾಡಕ್ಕಿಳಿದ್ದಾರೆ.

ಬೆಳಗಾವಿ ಅಖಾಡಕ್ಕಿಳಿದ ಬಿ.ಎಲ್.ಸಂತೋಷ್, ಬಣ ಬೇಗುದಿಗೆ ಸಿಗುವುದೇ ಮುಲಾಮು?
B L Santosh
TV9 Web
| Edited By: |

Updated on:Oct 10, 2022 | 8:09 PM

Share

ಬೆಳಗಾವಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಭಾಷ್ಯ ಬರೆಯುವ ಬೆಳಗಾವಿಯಲ್ಲಿ (Belagavi) ಕಳೆದ ಕೆಲವು ವರ್ಷಗಳಿಂದ ಬಿಜೆಪಿಯದ್ದೇ ಪಾರುಪತ್ಯ. ಕಾಂಗ್ರೆಸ್ ನಾಯಕರು ಕಮಲದ ಭದ್ರಕೋಟೆಯನ್ನು ಅದೆಷ್ಟೋ ಬಾರಿ ಬೇಧಿಸಲು ಹೊರಟರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇದೀಗ ಬದಲಾದ ರಾಜಕೀಯ ವಿದ್ಯಾಮಾನಗಳಿಂದ ಬೆಳಗಾವಿ ಬಿಜೆಪಿ ಹೊಡೆದು ಹೋಳು ಹೋಳಾಗಿದೆ. ಮೂಲ ಬಿಜೆಪಿಗರು ಹಾಗೂ ಜಾರಕಿಹೊಳಿ ಬದರ್ಸ್​ ಮಧ್ಯೆ ಮುಸುಕಿನ ಗುದ್ದಾಟ ಶುರುವಾಗಿದೆ.

ಅಖಾಡಕ್ಕಿಳಿದ ಬಿಎಲ್​ ಸಂತೋಷ್​

ಇದಕ್ಕೆ ಇದೀಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅಖಾಡಕ್ಕಿಳಿದಿದ್ದು, ಜಿಲ್ಲೆಯಲ್ಲಿನ ಬಣಗಳ ಒಳಬೇಗುದಿಯನ್ನು ತಣಿಸಲು ಮುಂದಾಗಿದ್ದಾರೆ.

ಇದನ್ನೂ ಒದಿ: ಕಾಂಗ್ರೆಸ್ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದ ಬಿಜೆಪಿ ಅಸ್ತ್ರ, ಕೈ ಅಲೆಯನ್ನು ತಡೆದ SC, ST ಮೀಸಲಾತಿ ಹೆಚ್ಚಳ

2 ಬಣಗಳಾಗಿ ಎಂಎಲ್‌ಸಿ ಚುನಾವಣೆಯಲ್ಲಿ ಸೋತಿದ್ದ ಬಿಜೆಪಿಯನ್ನು ಒಗ್ಗೂಡಿಸಲು ಬಿ.ಎಲ್​.ಸಂತೋಷ್​ ನೇತೃತ್ವದಲ್ಲಿ ಸಾವಗಾಂವ್​​​​ನ ಅಂಗಡಿ ಕಾಲೇಜಿನಲ್ಲಿ ಸಭೆ ಮಾಡುವ ಮೂಲಕ ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ. ಎರಡು ಬಣಗಳಾಗಿ ಎಂ.ಎಲ್‌.ಸಿ ಚುನಾವಣೆಯಲ್ಲಿ ಎರಡು ಸ್ಥಾನ ಕಳೆದುಕೊಂಡಿದ್ದ ಬಿಜೆಪಿ, ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಬಣ ರಾಜಕೀಯದಿಂದ ಪರಿಣಾಮ ಆಗದಂತೆ ಮುನ್ನೆಚ್ಚರಿಕೆ ವಹಿಸಿದೆ. ಈ ಹಿನ್ನೆಲೆ ಸವದಿ ಬಣ ಹಾಗೂ ಜಾರಕಿಹೊಳಿ ಬಣ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರ ಜತೆಗೆ ಮಹತ್ವದ ಸಭೆ ನಡೆಸಿದರು.

ಈ ವರೆಗೂ ಪಕ್ಷದ ಕಾರ್ಯಚಟುವಟಿಕೆಗಳಿಂದ ಸಭೆಗಳಿಂದ ಅಂತರ ಕಾಯ್ದುಕೊಂಡಿದ್ದ ಜಾರಕಿಹೊಳಿ ಬ್ರದರ್ಸ್ (ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ) ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಸೊರಬದಲ್ಲಿ ಮತ್ತೆ ಶುರುವಾಯ್ತು ಸಹೋದರರ ಸವಾಲ್. ಒಡಹುಟ್ಟಿದ ಮಧು ಬಗ್ಗೆ ಕುಮಾರ್ ಬಂಗಾರಪ್ಪ ಎಂತಾ ಮಾತಂದ್ರು ನೋಡಿ

18 ವಿಧಾನಸಭಾ ಕ್ಷೇತ್ರಗಳು ಮತ್ತು ಎರಡು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಬೆಳಗಾವಿಯಲ್ಲಿ ಬಿಜೆಪಿಯು ತನ್ನ ನೆಲೆ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿ.ಎಲ್.ಸಂತೋಷ್ ಅವರನ್ನು ಅಖಾಡಕ್ಕಿಳಿಸಿರುವುದು ವಿಶೇಷ.

ಜಾರಕಿಹೊಳಿ ಬ್ರದರ್ಸ್​ ವಿರುದ್ಧ ದೂರು ನೀಡಿದ್ದ ಬಿಜೆಪಿ

ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಸಹೋದರ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾನ್ನಾಗಿ ಕಣಕ್ಕಿಳಿಸಿ ಬಿಜೆಪಿ ಅಭ್ಯರ್ಥಿ, ಹಿರಿಯ ನಾಯಕ ಮಹಾಂತೇಶ ಕವಟಿಗಿಮಠ ಸೋಲಿಗೆ ಕಾರಣರಾಗಿದ್ದಾರೆ. ಇದು ಬೆಳಗಾವಿ ಜಿಪಿಯಲ್ಲಿನ ಭಿನ್ನಮತಕ್ಕೆ ಪ್ರಮುಖ ಕಾರಣವಾಗಿದೆ.

ಕಳೆದ ಹಲವು ದಿನಗಳ ಹಿಂದೆ ಜಾರಕಿಹೊಳಿ ಸಹೋದರನ್ನು ಹೊರಗಿಟ್ಟು ಸಚಿವ ಉಮೇಶ್ ಕತ್ತಿ ನೇತೃತ್ವದ ಬಣದ ಲಕ್ಷಣ್ ಸವದಿ, ಶಶಿಕಲಾ ಜೊಲ್ಲೆ, ಮಹಾಂತೇಶ್ ಕವಟಗಿಮಠ ಒಂದಾಗಿ ಮಹತ್ವದ ಸಭೆ ನಡೆಸುವ ಮೂಲಕ ಜಾರಕಿಹೊಳಿ ಬಣದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅಲ್ಲದೇ ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲಿನಿಂದಾಗಿ, ಪಕ್ಷದ ವರಿಷ್ಠರಿಗೆ ರಾಜ್ಯದ ಹಲವು ನಾಯಕರು ಉತ್ತರ ಕೊಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಈಗ ಜಿಲ್ಲೆಯ ಬಿಜೆಪಿ ಇಬ್ಬಾಗದತ್ತ ಸಾಗುತ್ತಿದ್ದು, ರಮೇಶ್ ಜಾರಕಿಹೊಳಿ ವಿರುದ್ದ ಸ್ವಪಕ್ಷೀಯರು ದೆಹಲಿ ಮಟ್ಟಕ್ಕೆ ದೂರು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 8:08 pm, Mon, 10 October 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ