AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿ: ಸಿಟಿ ರವಿ

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಾಟೆಯಲ್ಲಿ ಪಾಲ್ಗೊಂಡವರನ್ನು ಅಮಾಯಕರು ಎಂದು ಕಾಂಗ್ರೆಸ್ ವಕಾಲತ್ತು ವಹಿಸಿತ್ತು. ಅವರ ಪರವಾಗಿ ವಕಾಲತ್ತು ವಹಿಸಿದ ಪರಿಣಾಮ ರಾಮೇಶ್ವರಂ ಕಫೆಗೆ ಬಾಂಬ್ ಹಾಕಿದರು. ಬ್ರ್ಯಾಂಡ್​ ಬೆಂಗಳೂರು ಮಾಡುತ್ತೇವೆ ಅಂತ ಕಾಂಗ್ರೆಸ್​ ನಾಯಕರು ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ಮಾಡಿದರು.

ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿ: ಸಿಟಿ ರವಿ
ಸಿಟಿ ರವಿ
ಕಿರಣ್​ ಹನಿಯಡ್ಕ
| Edited By: |

Updated on: Apr 01, 2024 | 2:44 PM

Share

ಬೆಂಗಳೂರು, ಏಪ್ರಿಲ್​ 01: ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು (Bengaluru) ಮಾದರಿಯಾಗಿದೆ. ಬೆಂಗಳೂರನ್ನು ಬಾಂಬ್​ನಿಂದ ರಕ್ಷಣೆ ಮಾಡಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ರಾಜ್ಯಸಭೆ ಚುನಾವಣೆಯಲ್ಲಿ ನಾಸೀರ್ ಹುಸೇನ್ (Nasir Hussain) ಗೆದ್ದಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದವು. ಕಾಂಗ್ರೆಸ್ (Congress)​ ನಾಯಕರು ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಟಿ ರವಿ (CT Ravi) ಹರಿಹಾಯ್ದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆದ್ದಾಗಲೂ ಕೂಡ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆಲುವನ್ನು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿ ಸಂಭ್ರಮಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡುತ್ತಾ ಸಿಎಂ, ಡಿಸಿಎಂ, ಪರಮೇಶ್ವರ್, ದಿನೇಶ್ ಗುಂಡೂರಾವ್ ನಮ್ಮ ಕಿವಿಗೆ ಹೂ‌ವು ಮೂಡಿಸಲು ಪ್ರಯತ್ನ ಮಾಡಿದರು ಎಂದು ವಾಗ್ದಾಳಿ ಮಾಡಿದರು.

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಾಟೆಯಲ್ಲಿ ಪಾಲ್ಗೊಂಡವರನ್ನು ಅಮಾಯಕರು ಎಂದು ಕಾಂಗ್ರೆಸ್ ವಕಾಲತ್ತು ವಹಿಸಿತ್ತು. ಅವರ ಪರವಾಗಿ ವಕಾಲತ್ತು ವಹಿಸಿದ ಪರಿಣಾಮ ರಾಮೇಶ್ವರಂ ಕಫೆಗೆ ಬಾಂಬ್ ಹಾಕಿದರು. ಬ್ರ್ಯಾಂಡ್​ ಬೆಂಗಳೂರು ಮಾಡುತ್ತೇವೆ ಅಂತ ಕಾಂಗ್ರೆಸ್​ ನಾಯಕರು ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ. ರಾಜಸ್ಥಾನಕ್ಕಿಂತ ಬೆಂಗಳೂರಿನಲ್ಲಿ ನೀರಿಗೆ ಬರ ಬಂದಿದೆ ಎಂದು ಸಿಟಿ ರವಿ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ: ಯತೀಂದ್ರ ವಿರುದ್ಧ ಸಿಟಿ ರವಿ ಆಕ್ರೋಶ

ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ಭಯೋತ್ಪಾದಕರ ಬಾಲ ಮಾತ್ರ ಅಲ್ಲ, ತಲೆಯೂ ಕಟ್ ಆಗುತ್ತದೆ. ಬಾಂಬ್ ಹಾಕುವುದು ಬ್ರಾಂಡ್ ಬೆಂಗಳೂರು ಮಾದರಿ. ಕಾಂಗ್ರೆಸ್​ ತನ್ನ ಸ್ನೇಹ ಸಂಬಂಧವನ್ನು ಉಳಿಸಿಕೊಳ್ಳಲು ರಾಜ್ಯದಲ್ಲಿನ ಕಂಪನಿಗಳನ್ನು ಕೇರಳಕ್ಕೆ ಕಳುಹಿಸುತ್ತಿದ್ದಾರೆ. ಇವರ ಕಮ್ಯುನಿಸ್ಟ್ ಸ್ನೇಹಿತರು ಫುಲ್ ಖುಷಿ ಆಗಿದ್ದಾರೆ. ಹಾಗೆ ಸಂಬಂಧ ಉಳಿಸಿಕೊಳ್ಳಲು ತಮಿಳುನಾಡಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಕಚೇರಿಯಲ್ಲಿ ದೀಪ ಹಚ್ಚುವವರು ಇಲ್ಲದ ಸ್ಥಿತಿ ಕಾಂಗ್ರೆಸ್​ಗೆ ಬರಲಿದೆ: ಕಾರಜೋಳ

ಬಿಜೆಪಿ, ಆರ್​ಎಸ್​ಎಸ್ ವಿಷವಿದ್ದಂತೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರು ವಿಷ, ಯಾರು ಹಾಲು-ಜೇನು ಎಂಬುವುದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತಷ್ಟು ಹೀನಾಯ ಸ್ಥಿತಿ ತಲುಪಲಿದೆ. ಕಾಂಗ್ರೆಸ್ ದಿಕ್ಕಿಲ್ಲದ ಪರಿಸ್ಥಿತಿಗೆ ತಲುಪಲಿದೆ. ​ಕಚೇರಿಯಲ್ಲಿ ದೀಪ ಹಚ್ಚುವವರು ಇಲ್ಲದ ಸ್ಥಿತಿ ಕಾಂಗ್ರೆಸ್ ಬರಲಿದೆ ಎಂದು ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ