Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿ: ಸಿಟಿ ರವಿ

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಾಟೆಯಲ್ಲಿ ಪಾಲ್ಗೊಂಡವರನ್ನು ಅಮಾಯಕರು ಎಂದು ಕಾಂಗ್ರೆಸ್ ವಕಾಲತ್ತು ವಹಿಸಿತ್ತು. ಅವರ ಪರವಾಗಿ ವಕಾಲತ್ತು ವಹಿಸಿದ ಪರಿಣಾಮ ರಾಮೇಶ್ವರಂ ಕಫೆಗೆ ಬಾಂಬ್ ಹಾಕಿದರು. ಬ್ರ್ಯಾಂಡ್​ ಬೆಂಗಳೂರು ಮಾಡುತ್ತೇವೆ ಅಂತ ಕಾಂಗ್ರೆಸ್​ ನಾಯಕರು ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ಮಾಡಿದರು.

ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿ: ಸಿಟಿ ರವಿ
ಸಿಟಿ ರವಿ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on: Apr 01, 2024 | 2:44 PM

ಬೆಂಗಳೂರು, ಏಪ್ರಿಲ್​ 01: ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು (Bengaluru) ಮಾದರಿಯಾಗಿದೆ. ಬೆಂಗಳೂರನ್ನು ಬಾಂಬ್​ನಿಂದ ರಕ್ಷಣೆ ಮಾಡಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ರಾಜ್ಯಸಭೆ ಚುನಾವಣೆಯಲ್ಲಿ ನಾಸೀರ್ ಹುಸೇನ್ (Nasir Hussain) ಗೆದ್ದಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದವು. ಕಾಂಗ್ರೆಸ್ (Congress)​ ನಾಯಕರು ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಟಿ ರವಿ (CT Ravi) ಹರಿಹಾಯ್ದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆದ್ದಾಗಲೂ ಕೂಡ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆಲುವನ್ನು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿ ಸಂಭ್ರಮಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡುತ್ತಾ ಸಿಎಂ, ಡಿಸಿಎಂ, ಪರಮೇಶ್ವರ್, ದಿನೇಶ್ ಗುಂಡೂರಾವ್ ನಮ್ಮ ಕಿವಿಗೆ ಹೂ‌ವು ಮೂಡಿಸಲು ಪ್ರಯತ್ನ ಮಾಡಿದರು ಎಂದು ವಾಗ್ದಾಳಿ ಮಾಡಿದರು.

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಾಟೆಯಲ್ಲಿ ಪಾಲ್ಗೊಂಡವರನ್ನು ಅಮಾಯಕರು ಎಂದು ಕಾಂಗ್ರೆಸ್ ವಕಾಲತ್ತು ವಹಿಸಿತ್ತು. ಅವರ ಪರವಾಗಿ ವಕಾಲತ್ತು ವಹಿಸಿದ ಪರಿಣಾಮ ರಾಮೇಶ್ವರಂ ಕಫೆಗೆ ಬಾಂಬ್ ಹಾಕಿದರು. ಬ್ರ್ಯಾಂಡ್​ ಬೆಂಗಳೂರು ಮಾಡುತ್ತೇವೆ ಅಂತ ಕಾಂಗ್ರೆಸ್​ ನಾಯಕರು ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ. ರಾಜಸ್ಥಾನಕ್ಕಿಂತ ಬೆಂಗಳೂರಿನಲ್ಲಿ ನೀರಿಗೆ ಬರ ಬಂದಿದೆ ಎಂದು ಸಿಟಿ ರವಿ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ: ಯತೀಂದ್ರ ವಿರುದ್ಧ ಸಿಟಿ ರವಿ ಆಕ್ರೋಶ

ಮೋದಿ ಮತ್ತೊಮ್ಮೆ ಪ್ರಧಾನಿ ಆದರೆ ಭಯೋತ್ಪಾದಕರ ಬಾಲ ಮಾತ್ರ ಅಲ್ಲ, ತಲೆಯೂ ಕಟ್ ಆಗುತ್ತದೆ. ಬಾಂಬ್ ಹಾಕುವುದು ಬ್ರಾಂಡ್ ಬೆಂಗಳೂರು ಮಾದರಿ. ಕಾಂಗ್ರೆಸ್​ ತನ್ನ ಸ್ನೇಹ ಸಂಬಂಧವನ್ನು ಉಳಿಸಿಕೊಳ್ಳಲು ರಾಜ್ಯದಲ್ಲಿನ ಕಂಪನಿಗಳನ್ನು ಕೇರಳಕ್ಕೆ ಕಳುಹಿಸುತ್ತಿದ್ದಾರೆ. ಇವರ ಕಮ್ಯುನಿಸ್ಟ್ ಸ್ನೇಹಿತರು ಫುಲ್ ಖುಷಿ ಆಗಿದ್ದಾರೆ. ಹಾಗೆ ಸಂಬಂಧ ಉಳಿಸಿಕೊಳ್ಳಲು ತಮಿಳುನಾಡಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಕಚೇರಿಯಲ್ಲಿ ದೀಪ ಹಚ್ಚುವವರು ಇಲ್ಲದ ಸ್ಥಿತಿ ಕಾಂಗ್ರೆಸ್​ಗೆ ಬರಲಿದೆ: ಕಾರಜೋಳ

ಬಿಜೆಪಿ, ಆರ್​ಎಸ್​ಎಸ್ ವಿಷವಿದ್ದಂತೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರು ವಿಷ, ಯಾರು ಹಾಲು-ಜೇನು ಎಂಬುವುದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತಷ್ಟು ಹೀನಾಯ ಸ್ಥಿತಿ ತಲುಪಲಿದೆ. ಕಾಂಗ್ರೆಸ್ ದಿಕ್ಕಿಲ್ಲದ ಪರಿಸ್ಥಿತಿಗೆ ತಲುಪಲಿದೆ. ​ಕಚೇರಿಯಲ್ಲಿ ದೀಪ ಹಚ್ಚುವವರು ಇಲ್ಲದ ಸ್ಥಿತಿ ಕಾಂಗ್ರೆಸ್ ಬರಲಿದೆ ಎಂದು ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್