Karnataka Breaking Kannada News Highlights : ಸಿದ್ದರಾಮಯ್ಯ ಸರ್ಕಾರ 2.O: ಜೋಡೆತ್ತು ಸಂಪುಟ ಸೇರುವ ಸಚಿವರ ಹೆಸರುಗಳು ಇಲ್ಲಿವೆ

| Updated By: ವಿವೇಕ ಬಿರಾದಾರ

Updated on:May 26, 2023 | 10:52 PM

Weather Forecast, Breaking News Highlights: ಕರ್ನಾಟಕ ರಾಜಕೀಯ ಬೆಳವಣಿಗೆಗಳ ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಟಿವಿ9 ಡಿಜಿಟಲ್ ಲೈವ್ ಮೂಲಕ ರಾಜಕೀಯ ಹಾಗೂ ಮಳೆಯ ಕ್ಷಣ ಕ್ಷಣದ ಅಪ್​ಡೇಟ್ಸ್ ಪಡೆಯಿರಿ.

Karnataka Breaking Kannada News Highlights : ಸಿದ್ದರಾಮಯ್ಯ ಸರ್ಕಾರ 2.O: ಜೋಡೆತ್ತು ಸಂಪುಟ ಸೇರುವ ಸಚಿವರ ಹೆಸರುಗಳು ಇಲ್ಲಿವೆ
ಡಿಕೆ ಶಿವಕುಮಾರ್​​, ಮಲ್ಲಿಕಾರ್ಜುನ್​ ಖರ್ಗೆ, ಸಿದ್ದರಾಮಯ್ಯ

Karnataka Breaking Kannada News Highlights: ಸರ್ಕಾರ ಅಧಿಕಾರಕ್ಕೆ ಬಂದಾಯ್ತು, ಸಿಎಂ ಆಗಿ ಸಿದ್ದರಾಮಯ್ಯ(Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್ (DK Shivakumar) ಆಯ್ಕೆ ಆಗಿದ್ದಾರೆ. ಆದ್ರೆ ಸಂಪುಟಕ್ಕೆ ಸೇರಿರೋದು ಮಾತ್ರ ಕೇವಲ 8 ಸಚಿವರು. ಇನ್ನೂ 18 ಶಾಸಕರು ಸಚಿವ ಸಂಪುಟಕ್ಕೆ ಸೇರಲಿದ್ದಾರೆ. ಇಂದು ಕೂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಮ್ಮ ಆಪ್ತರಿಗೆ ಸಚಿವ ಸ್ಥಾನ ನೀಡಲು ದೆಹಲಿಯಲ್ಲಿ ಪಕ್ಷದ ಉನ್ನತ ನಾಯಕರೊಂದಿಗೆ ಸರ್ಕಸ್ ನಡೆಸುತ್ತಿದ್ದಾರೆ. ಹೀಗಾಗಿ ಸಂಪುಟ ರಚನೆ ತಡವಾಗುತ್ತಿದೆ. ಅದಾಗ್ಯೂ, ನಾಳೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ರಾತ್ರಿಯೊಳಗೆ ಸಚಿವರ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ರಾಜಕೀಯ ಬೆಳವಣಿಗೆಗಳ ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ (Bengaluru Rain). ಟಿವಿ9 ಡಿಜಿಟಲ್ ಲೈವ್ ಮೂಲಕ ರಾಜಕೀಯ ಹಾಗೂ ಮಳೆಯ ಕ್ಷಣ ಕ್ಷಣದ ಅಪ್​ಡೇಟ್ಸ್ ಪಡೆಯಿರಿ.

LIVE NEWS & UPDATES

The liveblog has ended.
  • 26 May 2023 10:43 PM (IST)

    Karnataka Breaking Kannada News Live: ಜೋಡೆತ್ತು ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ  ಅಂತಿಮಗೊಂಡಿದೆ. ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ.

    ಜೋಡೆತ್ತು ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ

    1. ಹೆಚ್.ಕೆ.ಪಾಟೀಲ್​​​​
    2. ಕೃಷ್ಣ ಭೈರೇಗೌಡ
    3. ಚಲುವರಾಯಸ್ವಾಮಿ
    4. ಪಿರಿಯಾಪಟ್ಟಣ ವೆಂಕಟೇಶ್​
    5. ಡಾ.ಹೆಚ್.ಸಿ.ಮಹದೇವಪ್ಪ
    6. ಈಶ್ವರ ಖಂಡ್ರೆ
    7. ಕೆ.ಎನ್.ರಾಜಣ್ಣ
    8. ದಿನೇಶ್ ಗುಂಡೂರಾವ್ಶ
    9. ರಣಬಸಪ್ಪ ದರ್ಶನಾಪುರ
    10. ಶಿವಾನಂದ ಪಾಟೀಲ್
    11. ಆರ್.ಬಿ.ತಿಮ್ಮಾಪುರ
    12. ಎಸ್.ಎಸ್.ಮಲ್ಲಿಕಾರ್ಜುನ
    13. ಶಿವರಾಜ ತಂಗಡಗಿ
    14. ಡಾ.ಶರಣ ಪ್ರಕಾಶ್ ಪಾಟೀಲ್​​​
    15. ಮಂಕಾಳು ವೈದ್ಯ
    16. ಲಕ್ಷ್ಮೀ ಹೆಬ್ಬಾಳ್ಕರ್​
    17. ರಹೀಂ ಖಾನ್​​
    18. ಡಿ.ಸುಧಾಕರ್​​
    19. ಸಂತೋಷ್ ಲಾಡ್​
    20. ಬೋಸರಾಜು
    21. ಬಿ.ಎಸ್.ಸುರೇಶ್ಮ
    22. ಧು ಬಂಗಾರಪ್ಪ
    23. ಎಂ.ಸಿ.ಸುಧಾಕರ್ಬಿ
    24. .ನಾಗೇಂದ್ರ
  • 26 May 2023 09:49 PM (IST)

    Karnataka Breaking Kannada News Live: ನಗೆ ಸಚಿವ ಸ್ಥಾನ ಕೊಡುತ್ತಾರೆ ಎನ್ನವ ನಂಬಿಕೆ ಇದೆ; ಹೆಬ್ಬಾಳ್ಕರ್

    ಬೆಂಗಳೂರು: ದೆಹಲಿಯಿಂದ ಒಳ್ಳೆ ಸುದ್ದಿ ಬರುವ ಭರವಸೆ ನನಗಿದೆ. ಅಧಿಕೃತವಾಗಿ ಪಟ್ಟಿ ಬಿಡುಗಡೆಯಾದ ಮೇಲೆ ಎಷ್ಟು ಜನರಿಗೆ ಸಿಗಲಿದೆ ಅನ್ನೂದು ಗೊತ್ತಾಗಲಿದೆ. ನಾನು ವರಿಷ್ಟರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೇನೆ. ನನಗೆ ಸಚಿವ ಸ್ಥಾನ ಕೊಡುತ್ತಾರೆ ಎನ್ನವ ನಂಬಿಕೆ ಇದೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

  • 26 May 2023 09:22 PM (IST)

    Karnataka Breaking Kannada News Live: ಕೆ.ಎನ್​.ರಾಜಣ್ಣಗೆ ಸಿಎಂ, ಡಿಸಿಎಂ ಫೋನ್​ ಕರೆ

    ನವದೆಹಲಿ: ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್​.ರಾಜಣ್ಣ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋನ್ ಕರೆ ಮಾಡಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ.

  • 26 May 2023 08:27 PM (IST)

    Karnataka Breaking Kannada News Live: ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ 23 ಶಾಸಕರು

    ಬೆಂಗಳೂರು: ನಾಳೆ (ಮೇ.27) 23 ಶಾಸಕರು ರಾಜಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಾಂಭವ್ಯ ಪಟ್ಟಿ ಇಲ್ಲಿದೆ: ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್​, ಎಂ.ಸಿ.ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್​, ಹೆಚ್.ಕೆ.ಪಾಟೀಲ್, ಡಾ.ಶರಣ ಪ್ರಕಾಶ್ ಪಾಟೀಲ್, ಈಶ್ವರ ಖಂಡ್ರೆ, ರಹೀಂ ಖಾನ್, ಬಿ.ನಾಗೇಂದ್ರ, ಮಂಕಾಳು ವೈದ್ಯ, ಮಧು ಬಂಗಾರಪ್ಪ, ಬೋಸರಾಜು, ಕೆ.ಎನ್.ರಾಜಣ್ಣ, ಶಿವಾನಂದ ಪಾಟೀಲ್, ಪಿರಿಯಾಪಟ್ಟಣ ವೆಂಕಟೇಶ್​ಎಸ್.ಎಸ್.ಮಲ್ಲಿಕಾರ್ಜುನ, ಸಿ.ಪುಟ್ಟರಂಗಶೆಟ್ಟಿ, ಚಲುವರಾಯಸ್ವಾಮಿ, ಶಿವರಾಜ ತಂಗಡಗಿ, ಆರ್.ಬಿ.ತಿಮ್ಮಾಪುರ, ರುದ್ರಪ್ಪ ಲಮಾಣಿ, ಡಾ.ಹೆಚ್.ಸಿ.ಮಹದೇವಪ್ಪ ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

  • 26 May 2023 08:22 PM (IST)

    Karnataka Breaking Kannada News Live: ಸಚಿವಸ್ಥಾನ ಕೈತಪ್ಪಿದ್ದಕ್ಕೆ ಬಿಕೆ ಹರಿಪ್ರಸಾದ್​​ ಬೇಸರ, ಎಂಎಲ್​ಸಿ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ?

    ಬೆಂಗಳೂರು:  ಸಚಿವಸ್ಥಾನ ಕೈತಪ್ಪಿದ ಹಿನ್ನೆಲೆ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​​ ಬೇಸರ ವ್ಯಕ್ತಪಡಿಸಿದ್ದು, ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ರಾಜೀನಾಮೆ ಬಗ್ಗೆ ಆಪ್ತರ ಜತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

  • 26 May 2023 07:17 PM (IST)

    Karnataka Breaking Kannada News Live: ಹಿರಿಯರು, ಕಿರಿಯರು ಇರುವ ಸಂಪುಟ ರಚನೆಯಾಗಲಿದೆ; ಈಶ್ವರ ಖಂಡ್ರೆ

    ಬೆಂಗಳೂರು: ನಾಳೆ ಬೆಳಗ್ಗೆ ಪೂರ್ಣಪ್ರಮಾಣದ ಸಂಪುಟ ರಚನೆಯಾಗಲಿದೆ. ನಾಳೆ ಬೆಳಿಗ್ಗೆ 22 ರಿಂದ 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಹಿರಿಯರು, ಕಿರಿಯರು ಇರುವ ಸಂಪುಟ ರಚನೆಯಾಗಲಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿದ್ದೇವೆ. ಸಚಿವರ ಪಟ್ಟಿ ಬಿಡುಗಡೆ ಇನ್ನೂ 1 ರಿಂದ 2 ಗಂಟೆ ತಡವಾಗಲಿದೆ ಎಂದು ಕಾಂಗ್ರೆಸ್​ ನಾಯಕ ಈಶ್ವರ ಖಂಡ್ರೆ ಹೇಳಿದ್ದಾರೆ.

  • 26 May 2023 05:53 PM (IST)

    Karnataka Breaking Kannada News Live: ಅಂತಿಮ ಸುತ್ತಿನ ಚರ್ಚೆ ಬಳಿಕ ಬೆಂಗಳೂರಿಗೆ ವಾಪಸಾಗ್ತಿರುವ ಸಿಎಂ ಸಿದ್ದರಾಮಯ್ಯ

    ನವದೆಹಲಿ: ಸಚಿವ ಸಂಪುಟ ಕುರಿತು ಹೈಕಮಾಂಡ್​ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ಬಳಿಕ ದೆಹಲಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಪಸ್ಸಾಗುತ್ತಿದ್ದಾರೆ. ಇಂದು (ಮೇ.26) ರಾತ್ರಿಯೊಳಗೆ ಸಿಎಂ ಸಿದ್ದರಾಮಯ್ಯ ನಾಳೆ ಪ್ರಮಾಣ ವಚನ ಕಾರ್ಯಕ್ರಮದ ಬಗ್ಗೆ ಸಂಭವನೀಯ ಸಚಿವರಿಗೆ ಕರೆ ಮಾಡುವ ಸಾಧ್ಯತೆ ಇದೆ. ಅಲ್ಲದೇ ರಾತ್ರಿಯೊಳಗಾಗಿ ಸಚಿವ ಸಂಪುಟದ ಪಟ್ಟಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

  • 26 May 2023 05:22 PM (IST)

    Karnataka Breaking Kannada News Live: ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂದು ಸಿಎಂ ನಿರ್ಧರಿಸುತ್ತಾರೆ: ಸುರ್ಜೇವಾಲ

    ಬೆಂಗಳೂರು: ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ನಿರ್ಧಾರ ಮಾಡುತ್ತಾರೆ. ಹಲವು ಹೆಸರುಗಳನ್ನು ಅವರು ಮುಂದಿಟ್ಟಿದ್ದಾರೆ. ಎಲ್ಲವೂ ಕೂಡ ಸಿಎಂ ಸಿದ್ದರಾಮಯ್ಯ ವಿವೇಚನೆ ಅವರ ಪರಮಾಧಿಕಾರ. ನಾಳೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

  • 26 May 2023 04:45 PM (IST)

    Karnataka Breaking Kannada News Live: ಕಿಮ್ಮನೆ ರತ್ನಾಕರ್​ಗೆ ಪತ್ರ ಬರೆದ ಡಿ.ಕೆ.ಶಿವಕುಮಾರ್​

    ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್​ ಅಭೂತಪೂರ್ವವಾದ ಬಹುಮತ ಸಿಕ್ಕಿದೆ. ತಾವು ಈ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾಗಿರಬಹುದು. ಆದರೆ ಈ ಗೆಲುವಿನಲ್ಲಿ ನಿಮ್ಮೆಲ್ಲರ ಪರಿಶ್ರಮವಿದೆ. ನಿರೀಕ್ಷೆಗೂ ಮೀರಿ ವಿಧಾನಸಭೆ ಚುನಾವಣೆಯಲ್ಲಿ ಕೆಲಸ ಮಾಡಿದ್ದೀರಿ. ವರಿಷ್ಠರು ಮುಂದಿನ ಲೋಕಸಭೆ ಚುನಾವಣೆಗೆ ಒತ್ತು ನೀಡಿದ್ದಾರೆ. ಚುನಾವಣೆ ಸೋಲಿನ ಬಗ್ಗೆ ಎದೆಗುಂದದೆ ಪಕ್ಷ ಸಂಘಟನೆ ಮಾಡಿ ಎಂದು ತೀರ್ಥಹಳ್ಳಿ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿ​ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪತ್ರ ಬರೆದಿದ್ದಾರೆ.

  • 26 May 2023 04:05 PM (IST)

    Karnataka Breaking Kannada News Live: ಹೈಕಮಾಂಡ್​ ಬುಲಾವ್; ಶಾಸಕ ಸುಬ್ಬಾರೆಡ್ಡಿ ದೆಹಲಿಗೆ ಪ್ರಯಾಣ

    ನವದೆಹಲಿ: ಸಚಿವ ಸಂಪುಟ ರಚನೆ ವಿಚಾರವಾಗಿ ದೆಹಲಿಗೆ ಬರುವಂತೆ ಶಾಸಕ ಸುಬ್ಬಾರೆಡ್ಡಿಗೆ ಕಾಂಗ್ರೆಸ್​ ಹೈಕಮಾಂಡ್​  ಸೂಚನೆ ನೀಡಿದೆ. ಹೈಕಮಾಂಡ್ ಸೂಚನೆ ಮೇರೆಗೆ ಶಾಸಕ ಸುಬ್ಬಾರೆಡ್ಡಿ ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ  ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ​​ಸುಬ್ಬಾರೆಡ್ಡಿ ದೆಹಲಿಗೆ ತೆರಳಿದ್ದಾರೆ.

  • 26 May 2023 03:25 PM (IST)

    Karnataka Breaking Kannada News Live: ಆರ್​ಎಸ್​ಎಸ್​​ ನಿಷೇಧ ಯಾರಿಂದಲೂ ಸಾಧ್ಯವಿಲ್ಲ-ಬೊಮ್ಮಾಯಿ

    ಬೆಂಗಳೂರು: ಆರ್​ಎಸ್​ಎಸ್​ ನಿಷೇಧ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನಾನು ಸವಾಲು ಹಾಕುತ್ತೇನೆ, RSS​​ ನಿಷೇಧಿಸಲಿ ನೋಡೋಣ. ಯಾವುದೇ ಸಂಘ-ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ.  ಒಂದು ಸಮುದಾಯದ ತುಷ್ಟೀಕರಣಕ್ಕೆ ಇಂತಹ ಹೇಳಿಕೆ ಕೊಡುತ್ತಿದ್ದಾರೆ. RSS, ಬಜರಂಗದಳ ನಿಷೇಧ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಅಂತ ಜನರಿಗೆ ತಿಳಿಸಲಿ. ಆರ್​ಎಸ್​ಎಸ್​​ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಹೇಳಿದರು.

  • 26 May 2023 03:22 PM (IST)

    Karnataka Breaking Kannada News Live: ರೋಣ ಶಾಸಕ ಜಿ ಎಸ್ ಪಾಟೀಲ್​​ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

    ಗದಗ: ರೋಣ ಶಾಸಕ ಜಿ ಎಸ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೊಳೆ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಒತ್ತಾಯಿಸಿದ್ದು, ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೇ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ. ನಾಲ್ಕು ಬಾರಿ ಶಾಸಕರಾದರೂ ಒಂದೇ ಒಂದು ಬಾರಿ ಸಚಿವ ಸ್ಥಾನ ನೀಡಿಲ್ಲ. ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ನೀಡುತ್ತೇವೆ. ಗದಗ ಜಿಲ್ಲಾ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟನೆ ಮಾಡಿದ್ದಾರೆ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಗದಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಮುಖಂಡ ಮಾಂತೇಶ ಅಂಗಡಿ ಒತ್ತಾಯ ಮಾಡಿದ್ದಾರೆ.

  • 26 May 2023 02:47 PM (IST)

    Karnataka Breaking Kannada News Live: ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೂ ಅವಕಾಶ ನೀಡಬೇಕು: ಸತೀಶ್​ ಜಾರಕಿಹೊಳಿ

    ಬೆಂಗಳೂರು: ನಾಳೆ ಬೆಳಗ್ಗೆ 11:30ರ ವೇಳೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತದೆ. ಯಾರಿಗೆ ಸಚಿವ ಸ್ಥಾನ ಎಂಬುದು ಪಟ್ಟಿ ಬಿಡಗಡೆ ಬಳಿಕ ಗೊತ್ತಾಗುತ್ತೆ. ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೂ ಅವಕಾಶ ನೀಡಬೇಕು. ಕನಿಷ್ಠ 10 ಹೊಸಬರಿಗೆ ಅವಕಾಶ ನೀಡಬೇಕು ಅಂತ ಹೇಳಿದ್ದೇನೆ. ಅದೇ ರೀತಿ ಈ ಬಾರಿ ಹೊಸಬರಿಗೂ ಅವಕಾಶ ನೀಡುತ್ತಿದ್ದಾರೆ. 1-2 ತಿಂಗಳಿನಲ್ಲಿ ನಿಗಮ ಮಂಡಳಿಗಳ ಸ್ಥಾನ ಸಹ ಭರ್ತಿ ಆಗುತ್ತೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

  • 26 May 2023 02:20 PM (IST)

    Karnataka Breaking Kannada News Live: ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಡಿಕೆ ಶಿವಕುಮಾರ್

    ಮೇ 28ರ ನೂತನ ಸಂಸತ್​ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ ಬಹಿಷ್ಕರಿಸಿದ್ದನ್ನು ಕುಮಾರಸ್ವಾಮಿ ಟೀಕಿಸಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವರ ​ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡಲ್ಲ ಎಂದರು.  ವಿಧಾನಸಭೆ ಚುನಾವಣೆಯಲ್ಲಿ JDS​ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ ಎಂದರು.

  • 26 May 2023 01:26 PM (IST)

    Karnataka Breaking Kannada News Live: ನಾನು ಸಹ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ದೆಹಲಿಗೆ ಹೋಗಿದ್ದೆ: ಅನಿಲ್ ಚಿಕ್ಕಮಾದು

    ದೇವನಹಳ್ಳಿ: ನಾನು ಸಹ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ದೆಹಲಿಗೆ ಹೋಗಿದ್ದೆ, ಆದರೆ ಬಹಳಷ್ಟು ಹಿರಿಯ ನಾಯಕರು ಪಕ್ಷದಿಂದ ಗೆದ್ದಿದ್ದಾರೆ. ಮುಂದೆ ಒಳ್ಳೆಯ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅನಿಲ್ ಚಿಕ್ಕಮಾದು ಹೇಳುವ ಮೂಲಕ ತನಗೆ ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,  ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡುತ್ತೇವೆ. ಪಕ್ಷದ ವರಿಷ್ಠರ ತೀರ್ಮಾನದಂತೆ‌ ನಾನು ಕೆಲಸ ಮಾಡುತ್ತೇನೆ. ಪಕ್ಷ ನಿಗಮ ಮಂಡಳಿ ಸೇರಿದಂತೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದರು.

  • 26 May 2023 12:52 PM (IST)

    Karnataka Breaking Kannada News Live: ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧಕ್ಕೆ ಕುಮಾರಸ್ವಾಮಿ ಗರಂ

    ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಟೀಕಿಸಿದ ಕುಮಾರಸ್ವಾಮಿ, ಸಂಸತ್ ಭವನ ಒಂದು ಪಕ್ಷಕ್ಕೆ, ವ್ಯಕ್ತಿಗೆ ಸೀಮಿತವಲ್ಲ. ದೇಶದ ತೆರಿಗೆ ಹಣದಿಂದ ಕಟ್ಟಿರುವ ಭವನ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಧ್ವನಿ ಎತ್ತಿದ್ದಾರೆ. ರಾಷ್ಟ್ರಪತಿಯಾಗಿರುವ ಆದಿವಾಸಿ ಮಹಿಳೆಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಧ್ವನಿ ಎತ್ತಿದೆ. ಯಾವುದೇ ಭವನವನ್ನು ಉದ್ಘಾಟನೆ ಮಾಡಬೇಕಾದಾಗ ರಾಷ್ಟ್ರಪತಿ, ರಾಜ್ಯಪಾಲರನ್ನು ಕರೆದ ಉದಾಹರಣೆ ಇಲ್ಲ. ಛತ್ತೀಸ್ಗಢ ವಿಧಾನಸಭೆ ಅಡಿಗಲ್ಲಿಗೆ ಸೋನಿಯಾಗಾಂಧಿ, ರಾಹುಲ್ ಗಾಂಧಿಯನ್ನು ಕರೆದಿದ್ದರೂ. ರಾಜ್ಯಪಾಲರನ್ನು ಕರೆಸಿ ಅಡಿಗಲ್ಲು ಹಾಕಿಸಿರಲಿಲ್ಲ. ಕರ್ನಾಟಕದ ವಿಕಾಸಸೌಧವನ್ನು ಅಂದಿನ ಮುಖ್ಯಮಂತ್ರಿ ಉದ್ಘಾಟನೆ ಮಾಡಿದ್ದರು. ಕಾಂಗ್ರೆಸ್ ಪಕ್ಷ ಈಗ ರಾಷ್ಟ್ರಪತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

  • 26 May 2023 12:47 PM (IST)

    Karnataka Breaking Kannada News Live: ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

    ಬಾಗಲಕೋಟೆ: ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಬಸವೇಶ್ವರ ಸರ್ಕಲ್‌ನಲ್ಲಿ ಘೋಷಣೆ ಕೂಗಲಾಗುತ್ತಿದೆ.

  • 26 May 2023 12:41 PM (IST)

    Karnataka Breaking Kannada News Live: ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಲಾಗಿದೆ: ಕುಮಾರಸ್ವಾಮಿ

    ಚುನಾವಣೆಗೂ ಮುನ್ನ ಕಾಂಗ್ರೆಸ್​​ ನಿನಗೂ ಫ್ರೀ.. ನನಗೂ ಫ್ರೀ ಎಂದಿದ್ದ ಸಿದ್ದರಾಮಯ್ಯ

    ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್​​ ನಿನಗೂ ಫ್ರೀ ನನಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಕಂಡಿಷನ್ಸ್ ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು. ಎಲ್ಲಿಗೂ 5 ಗ್ಯಾರಂಟಿ ಫ್ರೀ ಎಂದಿದ್ದ ಸಿದ್ದರಾಮಯ್ಯ, ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಆದರೆ ಈವರೆಗೆ ಜಾರಿ ಮಾಡಿಲ್ಲ. ಅವರು ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ. ರಾಜ್ಯದ ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ​. ಯಾವ ಮಹಿಳೆ ಕೂಡ ಟಿಕೆಟ್​ ಪಡೆಯಬೇಡಿ. ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸುವಂತೆ ಹೇಳಿದರು.

  • 26 May 2023 11:36 AM (IST)

    Karnataka Breaking Kannada News Live: ಪ್ರಿಯಾಂಕ ಖರ್ಗೆಯವರಿಗೆ ಕಾನೂನಿನ ಅರಿವು ಇಲ್ಲ: ಯಶ್ಪಾಲ್ ಸುವರ್ಣ

    ಪಿಎಫ್ ಐ ಸಂಘಟನೆ ದೇಶ ದ್ರೋಹಿ ಕೆಸಲ‌ ಮಾಡುವದನ್ನು ಕೇಂದ್ರ ಸರ್ಕಾರ ಮಾಹಿತಿ‌ ಪಡೆದು ಬ್ಯಾನ್ ಮಾಡಿದೆ. ಭಜರಂಗದಳ, ಅರ್ ಎಸ್ ಎಸ್ ದೇಶದ ಗೌರವ ಎತ್ತಿ ಹಿಡಿಯುವ ಕೆಲಸ ಮಾಡಿದೆ. ಆದರೆ ಕಾಂಗ್ರೆಸ್​ ನಾಯಕರು ಕಾನೂನಿನ ಅರಿವಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆಯವರಿಗೆ ಕಾನೂನಿನ ಅರಿವು ಇಲ್ಲ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಭಜರಂಗದಳ ನಿಷೇಧ ಮಾಡುವುದು ಕಾಂಗ್ರೆಸ್ ನ ಕನಸು ಅದು ನನಸು ಆಗುವುದಿಲ್ಲ. 2024 ರ‌‌ ಚುನಾವಣೆಯಲ್ಲಿ ಈ ರೀತಿಯ ಹೇಳಿಕೆಗಳಿಗೆ ಸರಿಯಾದ ಉತ್ತರ ಕೊಡುತ್ತಾರೆ ಎಂದರು.

  • 26 May 2023 10:52 AM (IST)

    Karnataka Breaking Kannada News Live: ಕೊರಟಗೆ ತಾಲ್ಲೂಕಿನ ಹಲವೆಡೆ ಆಲಿಕಲ್ಲು ಸಹಿತ ಬಿರುಗಾಳಿ ಮಳೆ

    ತುಮಕೂರು: ಜಿಲ್ಲೆಯ ಕೊರಟಗೆ ತಾಲ್ಲೂಕಿನ ಹಲವೆಡೆ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಾಗಿದೆ. ಹೊಳವನಹಳ್ಳಿ, ಅರಸಾಪುರ, ಕಾಶಾಪುರ,  ಹಕ್ಕಿಪಿಕ್ಕಿ ಕಾಲೋನಿ ಗ್ರಾಮದ ಸುತ್ತಾಮುತ್ತಾ ಬಿರುಗಾಳಿ ಮಳೆಯಾಗಿದೆ. ಘಟನೆಯಲ್ಲಿ 8 ಮನೆಗಳ ಮೇಲ್ಛಾವಣಿ ಗಾಳಿಗೆ ಹಾರಿ ಹೋಗಿವೆ. ಹೊಳವನಳ್ಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದು ಶಾರ್ಟ್ ಸರ್ಕ್ಯೂಟ್ ಆಗಿ ಮೊಹಮದ್ ಆಲಿ ಎಂಬುವರ ಮನೆಗೆ ಬೆಂಕಿ ತಗುಲಿದೆ. ಘಟನೆಯಲ್ಲಿ ಗೃಹಪಯೋಗಿ ವಸ್ತುಗಳು ಭಸ್ಮವಾಗಿವೆ. ಮಾಹಿತಿ ತಿಳಿದು ಕೊರಟಗೆರೆ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

  • 26 May 2023 10:48 AM (IST)

    Karnataka Breaking Kannada News Live: ಸಂಪುಟ ರಚನೆ ತಡವಾಗುತ್ತಿಲ್ಲ, ಪ್ರಕ್ರಿಯೆ ನಡೆಯುತ್ತಿದೆ: ಪರಮೇಶ್ವರ್

    ಸಚಿವ ಸಂಪುಟ ರಚನೆ ತಡವಾಗುತ್ತಿಲ್ಲ, ಬದಲಾಗಿ ಎಲ್ಲಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಬೆಂಗಳೂರು ನಗರದಲ್ಲಿ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಸಿಎಂ, ಡಿಸಿಎಂ ವರಿಷ್ಠರ ಜೊತೆ ಮಾತನಾಡುತ್ತಿದ್ದಾರೆ. ಅನೇಕ ಊಹಾಪೋಹಗಳ ನಡೆಯುತ್ತಿದೆ. ಅಧಿಕೃತವಾಗಿ ಆಗುವವರೆಗೂ ಕಾಯಬೇಕು ಎಂದರು. ಸಂಪುಟದಿಂದ ಹಿರಿಯರನ್ನು ಕೈ ಬಿಡುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,  ಈ ಬಗ್ಗೆ ನಾಯಕರು ಹೇಳಿಕೆ ಕೊಟ್ಟಿಲ್ಲ. ಹೊರಗಡೆ ಊಹಾಪೋಹಗಳು ನಡೆಯುತ್ತಿದೆ. ಮಾಧ್ಯಮಗಳಲ್ಲಿ ನೋಡಿದ್ದೇವೆ ಅಷ್ಟೆ. ಆದರೆ ಪಕ್ಷದಿಂದ ಈ ಬಗ್ಗೆ ನಮಗೆ ಮಾಹಿತಿ ತಿಳಿದುಬಂದಿಲ್ಲ ಎಂದರು.

  • 26 May 2023 10:44 AM (IST)

    Karnataka Breaking Kannada News Live: ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ: ಕಟೀಲ್

    ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ. ಇದು 80% ಪರ್ಸೆಂಟ್​ ಪಡೆಯುವ ಸರ್ಕಾರ. ನಮ್ಮ ವಿರುದ್ಧ ಕಾಂಗ್ರೆಸ್​​ನವರು ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ತನಿಖೆ ನಡೆಸಲಿ. ಹಿಂದಿನ ಎಲ್ಲ ಸರ್ಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ತಿರುಗೇಟು ನೀಡಿದ್ದಾರೆ.

  • 26 May 2023 10:43 AM (IST)

    Karnataka Breaking Kannada News Live: ಸೋನಿಯಾ ಗಾಂಧಿ ಜತೆ ಚರ್ಚಿಸಿ ತೆರಳಿದ ಸಿಎಂ ಸಿದ್ದರಾಮಯ್ಯ

    ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಜತೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ತೆರಳಿದ್ದಾರೆ. ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಸೋನಿಯಾ ನಿವಾಸದಲ್ಲಿ ಚರ್ಚಿಸಿ ತೆರಳಿದ್ದಾರೆ.

  • 26 May 2023 09:59 AM (IST)

    Karnataka Breaking Kannada News Live: ಸೋನಿಯಾ ಗಾಂಧಿ ಭೇಟಿಗೆ ತೆರಳಿದ ಸಿದ್ದರಾಮಯ್ಯ

    ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ

    ಕರ್ನಾಟಕ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಫೈನಲ್ ಹಂತದಲ್ಲಿದೆ. ಸದ್ಯ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಭೇಟಿಗೆ ತೆರಳಿದ್ದು, ಇತ್ತ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಡಿಕೆ ಶಿವಕುಮಾರ್ ಅವರು ವಾಪಸ್ ದೆಹಲಿಗೆ ಪ್ರಯಾಣ ಕೈಗೊಂಡಿದ್ದಾರೆ.

  • 26 May 2023 09:17 AM (IST)

    Karnataka Breaking Kannada News Live: ಆರ್​ಎಸ್​ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಯಿಂದ ಸಾಧ್ಯವೇ?: ಬಿಜೆಪಿ ಶಾಸಕ ಚನ್ನಬಸಪ್ಪ

    ಬಜರಂಗದಳ, RSS ಸಂಘಟನೆ ನಿಷೇಧ ನೆಹರೂರಿಂದಲೇ ಆಗಲಿಲ್ಲ. ಇನ್ನು ಸಚಿವ ಪ್ರಿಯಾಂಕ್​​ ಖರ್ಗೆ ಅವರಿಂದ ಸಾಧ್ಯವೇ ಎಂದು ಚನ್ನಬಸಪ್ಪ ಅವರು ಶಿವಮೊಗ್ಗ ನಗರದಲ್ಲಿ ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು, ಮನೆ ಮನೆಯಲ್ಲಿ ಹಿಂದುತ್ವ ಮತ್ತು ಆರ್​​ಎಸ್​​ಎಸ್ ಬೆರೆತು ಹೋಗಿದೆ. ಪ್ರಿಯಾಂಕ್​ ಖರ್ಗೆ ಇಂತಹ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅಶ್ವತ್ಥ್​ ನಾರಾಯಣ, ಕಾರ್ಯಕರ್ತರ ಮೇಲೆ ಕೇಸ್​ ದಾಖಲಾಗಿದೆ ಎಂದು ಆಕ್ರೋಶ ಹೊರಹಾಕಿದರು.

  • Published On - May 26,2023 9:14 AM

    Follow us
    ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
    ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
    Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
    Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
    ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
    ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
    Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
    Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
    Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
    Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
    ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
    ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
    ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
    ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
    ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
    ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
    ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
    ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
    ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
    ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್