AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​​ಡಿಎಲ್​ ಟೆಂಡರ್​​ಗಾಗಿ ಲಂಚ ಸ್ವೀಕಾರ ಆರೋಪ: ಮಾಡಾಳ್ ಪ್ರಶಾಂತ್​ಗೆ ಜಾಮೀನು

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್​ಗಾಗಿ ಲಂಚ ಪಡೆದ ಆರೋಪ ಸಂಬಂಧ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಇತ್ತೀಚೆಗಷ್ಟೇ ಜಾಮೀನು ಮಂಜೂರಾಗಿತ್ತು. ಇದೀಗ ಅವರ ಪುತ್ರ ಪ್ರಶಾಂತ್​ಗೂ ಜಾಮೀನು ಮಂಜೂರಾಗಿದೆ.

ಕೆಎಸ್​​ಡಿಎಲ್​ ಟೆಂಡರ್​​ಗಾಗಿ ಲಂಚ ಸ್ವೀಕಾರ ಆರೋಪ: ಮಾಡಾಳ್ ಪ್ರಶಾಂತ್​ಗೆ ಜಾಮೀನು
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್Image Credit source: Oneindia.Com
Rakesh Nayak Manchi
|

Updated on:Apr 21, 2023 | 3:31 PM

Share

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಸಂಬಂಧ ಇತ್ತೀಚೆಗಷ್ಟೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಇವರ ಬೆನ್ನಲ್ಲೇ ಪುತ್ರ ಮಾಡಾಳ್ ಪ್ರಶಾಂತ್​ಗೂ (Madal Prashanth) ಕರ್ನಾಟಕ ಹೈಕೋರ್ಟ್ (Karnataka High Court), ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಮಾರ್ಚ್ 2 ರಂದು ನಡೆದ ಟ್ರ್ಯಾಪ್ ಕಾರ್ಯಚರಣೆ ವೇಳೆ 2 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಪೈಕಿ ಶ್ರೇಯಸ್ ಕಶ್ಯಪ್ ಕಂಪೆನಿಯಿಂದ 40 ಲಕ್ಷ ರೂ. ಲಂಚ ಪಡೆಯುವಾಗ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು.

ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿವೆ. ಈ ಸಂಬಂಧ ಬೆಂಗಳೂರು ಜಲ ಮಂಡಳಿ ಮತ್ತು ಒಳಚರಂಡಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು.

ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು. ನಂತರ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಿದ್ದರು.

ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ; ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ 6 ವರ್ಷಗಳ ಅವಧಿಗೆ ಬಿಜೆಪಿಯಿಂದ ಉಚ್ಛಾಟನೆ

ಪ್ರಶಾಂತ್​​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ವಿರುದ್ಧ ಮತ್ತೆರಡಲು ಎಫ್​ಐಆರ್ ದಾಖಲಾಗಿದ್ದವು. ಪಿಸಿ ಆ್ಯಕ್ಟ್ ಅಡಿ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದರು. ನಂತರದಲ್ಲಿ ಶಾಸಕರ ಮನೆ ಮೇಲೂ ದಾಳಿ ನಡೆದಿತ್ತು. ಈ ವೇಳೆ, ಕೋಟ್ಯಂತರ ರೂ. ನಗದು, ಚಿನ್ನಾಭರಣ ದೊರೆತಿತ್ತು.

ಇದೇ ಪ್ರಕರಣದಲ್ಲಿ ಸಿಲುಕಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈಗಾಗಲೇ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ. ಜತೆಗೆ, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Fri, 21 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ