AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ ವ್ಯಂಗ್ಯವಾಡಿದ್ದಾರೆ.

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ
TV9 Web
| Edited By: |

Updated on:Aug 20, 2022 | 5:29 PM

Share

ಬೆಂಗಳೂರು: ಪ್ರತ್ಯೇಕ ಲಿಂಗಾಯತ (Lingayat) ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ (BS Yadiyurappa) ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ (Bengaluru) ವ್ಯಂಗ್ಯವಾಡಿದ್ದಾರೆ. ಬಿ.ಎಸ್​ ಯಡಿಯೂರಪ್ಪ ಇಂದು ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ (Adichunchanagiri) ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.

ನಿನ್ನೆ (ಆಗಸ್ಟ್​ 19) ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ್ದರು. ಆದರೆ ಮರುಗಳಿಗೆಯಲ್ಲೇ ಮಠದಿಂದ ಹೊರಬಂದು ಯೂ ಟರ್ನ್​ ಹೊಡೆದ ಸಿದ್ದರಾಮಯ್ಯ ನಾನು ಪಶ್ಚಾತಾಪ ವ್ಯಕ್ತಪಡಿಸಿಲ್ಲ, ಪ್ರಸ್ತಾಪ ಮಾಡಿದ್ದೆ ಅಷ್ಟೇ ಎಂದಿದ್ದರು.

ಈ ಸಂಬಂಧ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ. ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನು ಯಾಕೆ ಅವರ ಬಗ್ಗೆ ಟೀಕೆ ಮಾಡಲಿ? ಎಂದು ಹೇಳಿದರು. ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮೊಟ್ಟೆ ಎಸೆದವರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ಹೇಳಿದರು.

ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಸುದೀರ್ಘವಾಗಿ ಶ್ರೀಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾವು ಏನೇನು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಅಂತ ತಿಳಿಸಿದ್ದೇನೆ. ಶ್ರೀಗಳಿಂದ ಅನೇಕ ಸಲಹೆಗಳನ್ನು ಪಡೆದುಕೊಂಡಿದ್ದೇನೆ ಎಂದರು.

ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೊಟ್ಟೆ ಎಸೆದ ಬಗ್ಗೆ ಕಾಂಗ್ರೆಸ್​​ ಕಾರ್ಯಕರ್ತ ತಪ್ಪೊಪ್ಪಿಗೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾಳೆ ಮತ್ತೊಬ್ಬ ನಾನೇ ಮಾಡಿದ್ದು ಅಂತ ಬರುತ್ತಾನೆ. ಹೀಗಾಗಿ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತೆ. ಈ ಬಗ್ಗೆ ಎಸ್​ಪಿ ಜೊತೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

Published On - 3:48 pm, Sat, 20 August 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?