AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ ವ್ಯಂಗ್ಯವಾಡಿದ್ದಾರೆ.

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ
TV9 Web
| Edited By: |

Updated on:Aug 20, 2022 | 5:29 PM

Share

ಬೆಂಗಳೂರು: ಪ್ರತ್ಯೇಕ ಲಿಂಗಾಯತ (Lingayat) ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ (BS Yadiyurappa) ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ (Bengaluru) ವ್ಯಂಗ್ಯವಾಡಿದ್ದಾರೆ. ಬಿ.ಎಸ್​ ಯಡಿಯೂರಪ್ಪ ಇಂದು ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ (Adichunchanagiri) ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.

ನಿನ್ನೆ (ಆಗಸ್ಟ್​ 19) ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ್ದರು. ಆದರೆ ಮರುಗಳಿಗೆಯಲ್ಲೇ ಮಠದಿಂದ ಹೊರಬಂದು ಯೂ ಟರ್ನ್​ ಹೊಡೆದ ಸಿದ್ದರಾಮಯ್ಯ ನಾನು ಪಶ್ಚಾತಾಪ ವ್ಯಕ್ತಪಡಿಸಿಲ್ಲ, ಪ್ರಸ್ತಾಪ ಮಾಡಿದ್ದೆ ಅಷ್ಟೇ ಎಂದಿದ್ದರು.

ಈ ಸಂಬಂಧ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ. ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನು ಯಾಕೆ ಅವರ ಬಗ್ಗೆ ಟೀಕೆ ಮಾಡಲಿ? ಎಂದು ಹೇಳಿದರು. ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮೊಟ್ಟೆ ಎಸೆದವರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ಹೇಳಿದರು.

ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಸುದೀರ್ಘವಾಗಿ ಶ್ರೀಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾವು ಏನೇನು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಅಂತ ತಿಳಿಸಿದ್ದೇನೆ. ಶ್ರೀಗಳಿಂದ ಅನೇಕ ಸಲಹೆಗಳನ್ನು ಪಡೆದುಕೊಂಡಿದ್ದೇನೆ ಎಂದರು.

ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೊಟ್ಟೆ ಎಸೆದ ಬಗ್ಗೆ ಕಾಂಗ್ರೆಸ್​​ ಕಾರ್ಯಕರ್ತ ತಪ್ಪೊಪ್ಪಿಗೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾಳೆ ಮತ್ತೊಬ್ಬ ನಾನೇ ಮಾಡಿದ್ದು ಅಂತ ಬರುತ್ತಾನೆ. ಹೀಗಾಗಿ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತೆ. ಈ ಬಗ್ಗೆ ಎಸ್​ಪಿ ಜೊತೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

Published On - 3:48 pm, Sat, 20 August 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ