AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ ವ್ಯಂಗ್ಯವಾಡಿದ್ದಾರೆ.

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ
TV9 Web
| Edited By: ವಿವೇಕ ಬಿರಾದಾರ|

Updated on:Aug 20, 2022 | 5:29 PM

Share

ಬೆಂಗಳೂರು: ಪ್ರತ್ಯೇಕ ಲಿಂಗಾಯತ (Lingayat) ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ (BS Yadiyurappa) ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ (Bengaluru) ವ್ಯಂಗ್ಯವಾಡಿದ್ದಾರೆ. ಬಿ.ಎಸ್​ ಯಡಿಯೂರಪ್ಪ ಇಂದು ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ (Adichunchanagiri) ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.

ನಿನ್ನೆ (ಆಗಸ್ಟ್​ 19) ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ್ದರು. ಆದರೆ ಮರುಗಳಿಗೆಯಲ್ಲೇ ಮಠದಿಂದ ಹೊರಬಂದು ಯೂ ಟರ್ನ್​ ಹೊಡೆದ ಸಿದ್ದರಾಮಯ್ಯ ನಾನು ಪಶ್ಚಾತಾಪ ವ್ಯಕ್ತಪಡಿಸಿಲ್ಲ, ಪ್ರಸ್ತಾಪ ಮಾಡಿದ್ದೆ ಅಷ್ಟೇ ಎಂದಿದ್ದರು.

ಈ ಸಂಬಂಧ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ. ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನು ಯಾಕೆ ಅವರ ಬಗ್ಗೆ ಟೀಕೆ ಮಾಡಲಿ? ಎಂದು ಹೇಳಿದರು. ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮೊಟ್ಟೆ ಎಸೆದವರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ಹೇಳಿದರು.

ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಸುದೀರ್ಘವಾಗಿ ಶ್ರೀಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾವು ಏನೇನು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಅಂತ ತಿಳಿಸಿದ್ದೇನೆ. ಶ್ರೀಗಳಿಂದ ಅನೇಕ ಸಲಹೆಗಳನ್ನು ಪಡೆದುಕೊಂಡಿದ್ದೇನೆ ಎಂದರು.

ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೊಟ್ಟೆ ಎಸೆದ ಬಗ್ಗೆ ಕಾಂಗ್ರೆಸ್​​ ಕಾರ್ಯಕರ್ತ ತಪ್ಪೊಪ್ಪಿಗೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾಳೆ ಮತ್ತೊಬ್ಬ ನಾನೇ ಮಾಡಿದ್ದು ಅಂತ ಬರುತ್ತಾನೆ. ಹೀಗಾಗಿ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತೆ. ಈ ಬಗ್ಗೆ ಎಸ್​ಪಿ ಜೊತೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

Published On - 3:48 pm, Sat, 20 August 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ