AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ದೆಹಲಿಗೆ 6 ಬ್ಯಾಗ್​ ತೆಗೆದುಕೊಂಡು ಹೋಗಿದ್ದಾರೆ; ಒಳಗೆ ಏನೇನಿದೆ ಎಂದು ಅವರೇ ಹೇಳಲಿ: ಹೆಚ್​.ಡಿ.ಕುಮಾರಸ್ವಾಮಿ

ಮುಖ್ಯಮಂತ್ರಿ ನಿನ್ನೆ ದೆಹಲಿಗೆ ಹೋಗುವಾಗ ವಿಮಾನದಲ್ಲಿ 6 ಬ್ಯಾಗ್ ತೆಗೆದುಕೊಂಡು ಹೋಗಿದ್ದಾರೆ. ಅವುಗಳಲ್ಲಿ ಉಡುಗೊರೆ ಇದೆಯೋ, ಬೇರೆ ಏನಾದರೂ ಇದೆಯೋ ಎನ್ನುವುದನ್ನು ಅವರೇ ಹೇಳಬೇಕು: ಹೆಚ್​.ಡಿ.ಕುಮಾರಸ್ವಾಮಿ

ಯಡಿಯೂರಪ್ಪ ದೆಹಲಿಗೆ 6 ಬ್ಯಾಗ್​ ತೆಗೆದುಕೊಂಡು ಹೋಗಿದ್ದಾರೆ; ಒಳಗೆ ಏನೇನಿದೆ ಎಂದು ಅವರೇ ಹೇಳಲಿ: ಹೆಚ್​.ಡಿ.ಕುಮಾರಸ್ವಾಮಿ
ಎಚ್​.ಡಿ.ಕುಮಾರಸ್ವಾಮಿ, ಬಿ.ಎಸ್​.ಯಡಿಯೂರಪ್ಪ
TV9 Web
| Edited By: |

Updated on:Jul 17, 2021 | 1:38 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (CM B.S Yediyurappa) ಹಾಗೂ ಬಿ.ವೈ ವಿಜಯೇಂದ್ರ (B.Y Vijayendra) ದೆಹಲಿಗೆ ಹೋಗಿರುವ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಗಂಭೀರ ಆರೋಪವೊಂದನ್ನು ಸಿಎಂ ಹೆಗಲಿಗೆ ಹೊರಿಸಿದ್ದಾರೆ. ಮುಖ್ಯಮಂತ್ರಿ ನಿನ್ನೆ ದೆಹಲಿಗೆ (Delhi) ಹೋಗುವಾಗ ವಿಮಾನದಲ್ಲಿ 6 ಬ್ಯಾಗ್ ತೆಗೆದುಕೊಂಡು ಹೋಗಿದ್ದಾರೆ. ಅವುಗಳಲ್ಲಿ ಉಡುಗೊರೆ ಇದೆಯೋ, ಬೇರೆ ಏನಾದರೂ ಇದೆಯೋ ಎನ್ನುವುದನ್ನು ಅವರೇ ಹೇಳಬೇಕು. ಆದರೆ, ಅವರು ಬ್ಯಾಗ್​ ತೆಗೆದುಕೊಂಡು ಹೋಗಿರುವ ಮಾಹಿತಿ ನನಗೆ ಬಂದಿರುವುದಂತೂ ಹೌದು ಎಂದು ಹೇಳಿದ್ದಾರೆ.

ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ದೆಹಲಿ ಪ್ರವಾಸ ಕೈಗೊಂಡಿರುವ ಬಗ್ಗೆ ಮಾತನಾಡಿದ ಹೆಚ್​.ಡಿ.ಕುಮಾರಸ್ವಾಮಿ, ಸಿಎಂ ಬ್ಯಾಗ್​ ತೆಗೆದುಕೊಂಡು ಹೋದ ವಿಷಯ ಕೆಲ ಮಾಧ್ಯಮಗಳಲ್ಲೂ ಬಂದಿದೆ. ನಾಯಕರಿಗೆ ಕೊಡಲು ದೊಡ್ಡ ದೊಡ್ಡ ಉಡುಗೊರೆಗಳನ್ನ ತೆಗೆದುಕೊಂಡು ಹೋಗಿದ್ದಾರೆ ಅಂತಾ ಕೆಲ ಮಾಧ್ಯಮಗಳಲ್ಲಿ ಬರುತ್ತಿದೆ. ಆ ಬ್ಯಾಗ್​ಗಳಲ್ಲಿ ನಿಜವಾಗಿಯೂ ಏನಿದೆ ಎನ್ನುವುದನ್ನು ಮುಖ್ಯಮಂತ್ರಿಗಳೇ ಹೇಳಬೇಕು ಎಂದಿದ್ದಾರೆ.

ಬಹುಶಃ ಆರು ಬ್ಯಾಗ್​ಗಳಲ್ಲಿ ರಾಜ್ಯದ ಸಮಸ್ಯೆಗಳನ್ನು ತೆಗೆದುಕೊಂಡು ಹೋಗಿದ್ದಾರೋ ಅಥವಾ ಬೇರೆ ಏನಾದರೂ ತೆಗೆದುಕೊಂಡು ಹೈಕಮಾಂಡ್​ಗೆ ಕೊಡಲು ಹೋಗಿದ್ದಾರೋ ಎನ್ನುವುದನ್ನು ಅವರೇ ಹೇಳಬೇಕು. ಅಂತೆಯೇ, ಮೋದಿಯನ್ನ ಯಡಿಯೂರಪ್ಪ ಒಬ್ಬರೇ ಹೋಗಿ ಭೇಟಿ ಮಾಡಿದರೋ ಅಥವಾ ಆರು ಬ್ಯಾಗ್​ಗಳೊಂದಿಗೆ ಭೇಟಿ ಮಾಡಿದರೋ ಎನ್ನುವುದನ್ನೂ ಹೇಳಬೇಕು ಎನ್ನುವ ಮೂಲಕ ಹೆಚ್​.ಡಿ.ಕುಮಾರಸ್ವಾಮಿ ಸಿಎಂಗೆ ತಿರುಗೇಟು ನೀಡಿದ್ದಾರೆ.

ರಾಜೀನಾಮೆ ಕೇಳಿಲ್ಲ, ಕೊಟ್ಟಿಲ್ಲ ಅದು ಶುದ್ಧ ಸುಳ್ಳು: ಯಡಿಯೂರಪ್ಪ ಏತನ್ಮಧ್ಯೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿದ್ದು, ಅದಕ್ಕೆ ದೆಹಲಿಯಿಂದಲೇ ಸಂದೇಶ ರವಾನಿಸಿರುವ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಶುದ್ಧ ಸುಳ್ಳು ಎಂದು ಘಂಟಾಘೋಷವಾಗಿ ಹೇಳಿದ್ದಾರೆ. ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ. ರಾಜೀನಾಮೆ ನೀಡುವ ವಿಚಾರ ಸುಳ್ಳು. ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಯಡಿಯೂರಪ್ಪ ದೆಹಲಿಯಲ್ಲಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿ ಮೋತಿಲಾಲ್​ ನೆಹರು ರಸ್ತೆಯಲ್ಲಿರುವ ನಿವಾಸದಲ್ಲಿ ಬಿಎಸ್​​ವೈ ಭೇಟಿಯಾದರು. ಸಿಎಂ ಯಡಿಯೂರಪ್ಪಗೆ ಪುತ್ರ ವಿಜಯೇಂದ್ರ ಸಾಥ್ ನೀಡಿದರು. ರಾಜ್ಯ ರಾಜಕೀಯ ಬಗ್ಗೆ ಜೆ.ಪಿ. ನಡ್ಡಾ ಜತೆ ಚರ್ಚೆ ನಡೆಯಿತು. ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಡ್ಡಾ ಸೂಚನೆ ನೀಡಿದ್ದಾರೆ. ರಾಜೀನಾಮೆ ಕೇಳಿದ್ದರೆ/ ಕೊಟ್ಟಿದ್ದರೆ ಮುಚ್ಚಿಡುವಂತಹ ಪ್ರಶ್ನೆ ಇಲ್ಲ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: ನರೇಂದ್ರ ಮೋದಿ, ಬಿ ಎಸ್ ಯಡಿಯೂರಪ್ಪ ಭೇಟಿಯನ್ನು ಹಾಲು ಜೇನಿನ ಸಂಗಮ ಎಂದು ವರ್ಣಿಸಿದ ಬಿ ವೈ ವಿಜಯೇಂದ್ರ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ ; ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

Published On - 1:32 pm, Sat, 17 July 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ