AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ: ಬಿಎಸ್ ಯಡಿಯೂರಪ್ಪ ಪುತ್ರಿ ಅರುಣಾದೇವಿ ಪ್ರತಿಕ್ರಿಯೆ

Karnataka CM BS Yediyurappa Resign: ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ಮಾಡಿದ್ದಾರೆ. ರೈತರು, ಬಡವರ ಪರ ನಿರಂತರ ಹೋರಾಟ ಮಾಡ್ತಿದ್ದಾರೆ. ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಎಂದು ಟಿವಿ9ಗೆ ಬಿಎಸ್‌ವೈ ಪುತ್ರಿ ಅರುಣಾದೇವಿ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ: ಬಿಎಸ್ ಯಡಿಯೂರಪ್ಪ ಪುತ್ರಿ ಅರುಣಾದೇವಿ ಪ್ರತಿಕ್ರಿಯೆ
ಬಿ.ಎಸ್,ಯಡಿಯೂರಪ್ಪ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 26, 2021 | 2:48 PM

Share

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯಿಂದ ನಮಗೆ ಬೇಸರವಾಗಿಲ್ಲ. ನಮ್ಮ ಕುಟುಂಬದ ಯಾರಿಗೂ ಬೇಸರವಾಗಿಲ್ಲ ಎಂದು ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿ ಅರುಣಾದೇವಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ. ರಾಜಕೀಯ ನಿರ್ಧಾರಗಳ ಬಗ್ಗೆ ಅವರು ಕುಟುಂಬಕ್ಕೆ ಮಾಹಿತಿ ಹೇಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಕೊವಿಡ್ ಸಂಕಷ್ಟದಲ್ಲಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನಗುಮುಖದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾತ್ರಿ ತುಂಬಾ ಆಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ. ಯಾವುದು ಸರಿ ಅನಿಸುತ್ತೆ ಅದನ್ನು ಅವರೇ ನಿರ್ಧರಿಸುತ್ತಾರೆ. ರಾಜೀನಾಮೆ ನೀಡಿದ ಬಗ್ಗೆಯೇ ಬಿಎಸ್‌ವೈ ಚಿಂತಿಸುತ್ತಿಲ್ಲ ಎಂದು ಅರುಣಾದೇವಿ ಹೇಳಿದ್ದಾರೆ.

ನಾಳೆಯಿಂದ ಏನು ಮಾಡಬಹುದು ಎಂದು ಅವರು ಚಿಂತಿಸುತ್ತಿದ್ದಾರೆ. ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ಮಾಡಿದ್ದಾರೆ. ರೈತರು, ಬಡವರ ಪರ ನಿರಂತರ ಹೋರಾಟ ಮಾಡ್ತಿದ್ದಾರೆ. ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಎಂದು ಟಿವಿ9ಗೆ ಬಿಎಸ್‌ವೈ ಪುತ್ರಿ ಅರುಣಾದೇವಿ ಹೇಳಿಕೆ ನೀಡಿದ್ದಾರೆ.

ಮುಂದಿನ ಸಿಎಂ ಹೆಸರನ್ನು ನಾನು ಸೂಚಿಸಲು ಹೋಗಲ್ಲ ನನ್ನ ಪರವಾಗಿ ಕೆಲಸ ಮಾಡಿದ ಎಲ್ಲರಿಗೂ ಅಭಿನಂದನೆ. ದೆಹಲಿಯಿಂದ ನನಗೆ ಯಾವುದೇ ಒತ್ತಡ ಇರಲಿಲ್ಲ. ನಾನೇ ನಿರ್ಧಾರ ಮಾಡಿ ರಾಜೀನಾಮೆಯನ್ನ ಸಲ್ಲಿಸಿದ್ದೇನೆ. ಸ್ವಯಂಪ್ರೇರಿತನಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ಸಿಎಂ ಹೆಸರನ್ನು ನಾನು ಸೂಚಿಸಲು ಹೋಗಲ್ಲ. ಯಾವುದೇ ಹೆಸರು ಹೇಳುವುದಕ್ಕೆ ನಾನು ಇಷ್ಟಪಡುವುದಿಲ್ಲ. ಹೈಕಮಾಂಡ್ ಮುಂದಿನ ಸಿಎಂ ಯಾರೆಂದು ತೀರ್ಮಾನಿಸುತ್ತೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇವೆ ಎಂದು ಯಡಿಯೂರಪ್ಪ ರಾಜೀನಾಮೆ ಬಳಿಕ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಇಲ್ಲ. ನಾಳೆಯಿಂದಲೇ ಒಟ್ಟಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ. ರಾಜ್ಯಪಾಲರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ನಾನು ರಾಜ್ಯ ರಾಜಕೀಯದಲ್ಲೇ ಇರುತ್ತೇನೆ. ಯಾವುದೇ ರಾಜ್ಯಪಾಲ ಹುದ್ದೆಯನ್ನು ಅಲಂಕರಿಸುವುದಿಲ್ಲ. ಮುಂದಿನ ಸಿಎಂಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: BS Yediyurappa Profile: ಗುಮಾಸ್ತನಿಂದ ಮುಖ್ಯಮಂತ್ರಿ ಗಾದಿಯುವರೆಗೂ ಬಿಎಸ್ ಯಡಿಯೂರಪ್ಪ ನಡೆದುಬಂದ ಹಾದಿ ಸುಲಭದ್ದೇನಲ್ಲ…

2 ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ; ರಾಜ್ಯಪಾಲ ಹುದ್ದೆ ಅಲಂಕರಿಸುವುದಿಲ್ಲ –ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ

(BS Yediyurappa daughter Aruna Devi on Karnataka CM BS Yediyurappa Resign)

Published On - 2:30 pm, Mon, 26 July 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು