AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಹಸ್ತ; ಎಸ್‌ಟಿ ಸೋಮಶೇಖರ್, ಹೆಬ್ಬಾರ್ ಸಮಸ್ಯೆ ಬಗೆಹರಿಸುವ ಹೊಣೆ ಬೊಮ್ಮಾಯಿಗೆ ವಹಿಸಿದ ಯಡಿಯೂರಪ್ಪ

BS Yediyurappa meeting with BJP Leaders; ಸೋಮಶೇಖರ್ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಬೇಕು. ಶಾಸಕ ಶಿವರಾಮ್ ಹೆಬ್ಬಾರ್ ಜೊತೆಯೂ ಮಾತನಾಡಬೇಕು. ಬೆಂಗಳೂರಿನ ಉಳಿದ ನಾಯಕರೂ ಸೋಮಶೇಖರ್ ಜತೆ ಮಾತನಾಡಬೇಕು. ನಾನೂ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ಚರ್ಚಿಸುವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಆಪರೇಷನ್ ಹಸ್ತ; ಎಸ್‌ಟಿ ಸೋಮಶೇಖರ್, ಹೆಬ್ಬಾರ್ ಸಮಸ್ಯೆ ಬಗೆಹರಿಸುವ ಹೊಣೆ ಬೊಮ್ಮಾಯಿಗೆ ವಹಿಸಿದ ಯಡಿಯೂರಪ್ಪ
ಬಸವರಾಜ ಬೊಮ್ಮಾಯಿ ಹಾಗೂ ಬಿಎಸ್ ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on:Aug 18, 2023 | 11:07 PM

Share

ಬೆಂಗಳೂರು, ಆಗಸ್ಟ್ 18: ಬಿಬಿಎಂಪಿ ಹಾಗೂ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ರಾಜಕೀಯ (Karnataka Politics) ಚಟುವಟಿಕೆ ಬಿರುಸುಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಮತ್ತು ಪ್ರತಿಪಕ್ಷ ಬಿಜೆಪಿ (BJP) ತಂತ್ರ ಹಾಗೂ ಪ್ರತಿ ತಂತ್ರ ಹೂಡುತ್ತಿವೆ. ಪ್ರತಿಪಕ್ಷಗಳು ಭ್ರಷ್ಟಾಚಾರ, ಕಾವೇರಿ ನೀರು ಹಂಚಿಕೆ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಅತ್ತ ಕಾಂಗ್ರೆಸ್ ಈ ಹಿಂದೆ ಬಿಜೆಪಿ ಸೇರಿರುವ ನಾಯಕರಿಗೆ ಗಾಳ ಹಾಕುವ ವಿಷಯವನ್ನು ಮುನ್ನೆಲೆಗೆ ತೇಲಿಬಿಟ್ಟಿದೆ. ಈ ಹಿಂದೆ ಕಾಂಗ್ರೆಸ್​​ನಲ್ಲಿದ್ದು ಬಿಜೆಪಿ ಸೇರಿರುವ ನಾಯಕರು ಘರ್​ ವಾಪ್ಸಿ ಮಾಡುತ್ತಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯದಲ್ಲಿ ಬಿರುಸುಗೊಂಡಿದೆ. ಈ ಮಧ್ಯೆ, ಎಸ್‌ಟಿ ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರ ಸಮಸ್ಯೆ ಬಗೆಹರಿಸುವ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬಿಜೆಪಿ ವಹಿಸಿದೆ.

ಬಿಬಿಎಂಪಿ, ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಇದೇ ವೇಳೆ, ಅತೃತಪ್ತ ನಾಯಕರ ಮುನಿಸು ಶಮನ ಮಾಡುವ ಹೊಣೆಯನ್ನು ಬಸವರಾಜ ಬೊಮ್ಮಾಯಿ‌ಗೆ ಅವರಿಗೆ ಯಡಿಯೂರಪ್ಪ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮಶೇಖರ್ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಬೇಕು. ಶಾಸಕ ಶಿವರಾಮ್ ಹೆಬ್ಬಾರ್ ಜೊತೆಯೂ ಮಾತನಾಡಬೇಕು. ಬೆಂಗಳೂರಿನ ಉಳಿದ ನಾಯಕರೂ ಸೋಮಶೇಖರ್ ಜತೆ ಮಾತನಾಡಬೇಕು. ನಾನೂ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ಚರ್ಚಿಸುವೆ. ಸ್ಥಳೀಯ ಮುಖಂಡರ ಜೊತೆ ಮಾತುಕತೆ ಮಾಡಿ ಸಮನ್ವಯ ಸಾಧಿಸಿ. ಎಲ್ಲರೂ ಒಟ್ಟಾಗಿ ಹೋಗುವಂತೆ ನೋಡಿಕೊಳ್ಳಿ ಎಂದು ಸಭೆಯಲ್ಲಿ ಬೊಮ್ಮಾಯಿ ಸೇರಿದಂತೆ ಪಕ್ಷದ ನಾಯಕರಿಗೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಯಾವ ನಾಯಕರೂ ಪಕ್ಷ ಬಿಡದಂತೆ ನೋಡಿಕೊಳ್ಳಿ. ವಲಸಿಗರು ಪಕ್ಷ ಬಿಡುವ ಬಗ್ಗೆ ಚರ್ಚೆಯಾದರೆ ಸ್ಪಷ್ಟೀಕರಣ ಕೊಡಿಸಿ. ಯಾರೂ ಪಕ್ಷ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆ ಆಗಬೇಕು. ಪ್ರತಿಯೊಬ್ಬ ನಾಯಕರೂ ಸಕ್ರಿಯರಾಗಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ: ಬಿ.ಎಸ್. ಯಡಿಯೂರಪ್ಪ

ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಆಯ್ಕೆ ಸದ್ಯದಲ್ಲೇ ಆಗಲಿದೆ. ಯಾರೇ ಆಯ್ಕೆ ಆದರೂ ಜೊತೆಯಾಗಿ ನಿಲ್ಲಬೇಕು. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಮುಂಬರುವ ಲೋಕಸಭೆ ಚುನಾವಣೆಯೇ ನಮ್ಮ ಗುರಿ. ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟಕ್ಕೆ ಹೆಚ್ಚು ಜನ ಬರಬೇಕು. ಇದರ ಜವಾಬ್ದಾರಿ ಎಲ್ಲರೂ ತೆಗೆದುಕೊಳ್ಳಬೇಕು ಎಂದು ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 pm, Fri, 18 August 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್