AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಎದುರು ರಾಹುಲ್ ಗಾಂಧಿ ಬಚ್ಚಾ: ಬಿಎಸ್​ ಯಡಿಯೂರಪ್ಪ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಎದುರು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಚ್ಛಾ ಇದ್ದ ಹಾಗೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Mar 04, 2023 | 9:32 PM

Share

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಎದುರು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಚ್ಛಾ ಇದ್ದ ಹಾಗೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹರಿಹಾಯ್ದಿದ್ದಾರೆ. ರಾಮದುರ್ಗ ಪಟ್ಟಣದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿ, ಇಡೀ ಜಗತ್ತೇ ಮೆಚ್ಚಿರೋ ನಾಯಕ ಅಂದ್ರೆ ಮೋದಿ. ಅಭಿವೃದ್ಧಿ ದಾಪುಗಾಲು ಹಾಕುವ ಶುಭ ಸಂದರ್ಭ ಇದು. ಜನರು ಪ್ರಧಾನಿ ಮೋದಿ ಆಡಳಿತ ಮೆಚ್ಚಿದ್ದಾರೆ. ಮೋದಿ ಒಂದೇ ಒಂದು ದಿನ ವಿಶ್ರಾಂತಿ ತೆಗೆದುಕೊಂಡಿಲ್ಲ. ಅವರ ಕಾರ್ಯಕ್ಕೆ ನಾವು ಬೆಂಬಲ ನೀಡಬೇಕಿದೆ. ನಿತ್ಯ ಪೂಜೆ ಮಾಡುವ ವೇಳೆ ಮೋದಿಗೆ ಒಳ್ಳೆಯದು ಆಗಲಿ, ದೇಶಕ್ಕೆ ಒಳ್ಳೆಯದು ಆಗಲಿ ಅಂತ ಬೇಡಿಕೊಳ್ಳಿ ಎಂದು ಮಹಿಳೆಯರಿಗೆ ಯಡಿಯೂರಪ್ಪ ಮನವಿ ಮಾಡಿಕೊಂಡರು. ಸ್ಪಷ್ಟ ಬಹುಮತ ಮತ್ತೆ ನಮಗೆ ಬರುತ್ತೆ. ನಾನು ಮನೆಯಲ್ಲಿ ಕುಳಿತುಕೊಳ್ಳಲ್ಲ. ಮೂರು ತಿಂಗಳ ಕಾಲ ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ ಮತ್ತು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.

ಇಲ್ಲಿನ ಶಾಸಕರು ಮೂರು ಸಾವಿರ ಕೋಟಿ ಅನುದಾನ ತಂದಿದ್ದಾರೆ. ಕ್ಷೇತ್ರದ ಅಭಿವೃದ್ಧ ಮಾಡಿದ್ದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾದವಾಡ ಬಗ್ಗೆ ಇಷ್ಟೊಂದು ಗೌರವ ಸಲ್ಲಿಸಿದ್ದು ಖುಷಿ ತಂದಿದೆ. ಇಲ್ಲಿಗೆ ನಾವು 500 ರೂ ಕೊಟ್ಟು ಯಾರನ್ನೂ ನಾವು ಕರೆದುಕೊಂಡು ಬಂದಿಲ್ಲ. ಸಿದ್ದರಾಮಯ್ಯ ಆ್ಯಂಡ್ ಕಂಪನಿ ನಿಮಗೆ ಹೇಳುದು ನಾನು. ಹಗಲು ಕನಸು ಕಾಣುತ್ತಿದ್ದೀರಿ ಅದು ಆಗೋದಿಲ್ಲ. ದೇಶದ ಎಲ್ಲ ಕಡೆ ಅಧಿಕಾರ ಕಳೆದುಕೊಂಡು ತಬ್ಬಲಿಯಾಗಿದ್ದೀರಿ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬೆಂಗಳೂರಿನ ಒಂದು ರಸ್ತೆಗೆ ಪಿಆರ್​ ತಿಪ್ಪೇಸ್ವಾಮಿ ಹೆಸರಿಡಲು ಬೇಡಿಕೆ: ನಾಳೆಯೇ ಚರ್ಚಿಸಿ ಕ್ರಮಕೈಗೊಳ್ಳುವೆ ಎಂದ ಸಿಎಂ ಬೊಮ್ಮಾಯಿ

ನಾನು ಸಿಎಂ ಆಗಿದ್ದಾಗ ಉಚಿತ ವಿದ್ಯುತ್ ಕೊಟ್ಟಿದ್ದೇನೆ, ನೀವೇನು ಕೊಟ್ಟಿದ್ದೀರಿ? ಭಾಗ್ಯಲಕ್ಷ್ಮೀ ಯೋಜನೆ, ಹಾಲು ಉತ್ಪಾದಕರಿಗೆ ಸಹಾಯ ಮಾಡಿದ್ದೇನೆ, ನೀವೇನು ಮಾಡಿದ್ರಿ. ಭಾರತ ಕಾಂಗ್ರೆಸ್ ಮುಕ್ತ ಭಾರತ ಆಗಬೇಕು. 50 ವರ್ಷದಲ್ಲಿ ಏನು ಮಾಡಿದ್ದೀರಿ ನೀವು. ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ ನಾವು ಗೆಲ್ಲಬೇಕಿದೆ ಎಂದು ಹೇಳಿದರು.

ನಾವೀಗ ವಿಶ್ವದ 5ನೇ ಶಕ್ತಿಯಾಗಿ ಬೆಳೆದು ನಿಂತಿದ್ದೇವೆ: ಪ್ರಲ್ಹಾದ್​​ ಜೋಶಿ

ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​​ ಜೋಶಿ ಮಾತನಾಡಿ, 300 ವರ್ಷಗಳ ಹಿಂದೆ ಅಯೋಧ್ಯೆಯಲ್ಲಿ ದೇವಸ್ಥಾನ ಒಡೆದು ಹಾಕಿದ್ದರು. ಬಾಬರ್​ ದೇವಸ್ಥಾನ ಒಡೆದು ಹಾಕಿದ್ದ ಸ್ಥಳದಲ್ಲೇ ದೇಗುಲ ನಿರ್ಮಿಸಿದ್ದೇವೆ. 2024ರ ಜನವರಿಯಲ್ಲಿ ಅದೇ ಸ್ಥಳದಲ್ಲಿ ದೇವಸ್ಥಾನ ಉದ್ಘಾಟಿಸುತ್ತಿದ್ದೇವೆ. ದೇಶದ ಅಸ್ಮಿತೆಗಾಗಿ ನಾವು ಹೊಡೆದಾಡುತ್ತಿರುವುದು ನಮ್ಮ ಕಣ್ಣ ಮುಂದಿದೆ. 200 ವರ್ಷಗಳ ಹಿಂದೆ ಹಾವಾಡಿಸುವವರು, ಗಿಡ ಪೂಜಿಸುವವರು ಅಂತಿದ್ರು. ಆದರೆ ನಾವೀಗ ವಿಶ್ವದ 5ನೇ ಶಕ್ತಿಯಾಗಿ ಬೆಳೆದು ನಿಂತಿದ್ದೇವೆ. ಬ್ರಿಟನ್​ ಹಿಂದಿಕ್ಕಿ ನಾವು ಮುಂದೆ ಹೋಗಿದ್ದೇವೆ. ಮುಂದಿನ ದಿನಗಳಲ್ಲಿ ಅಮೆರಿಕ, ಚೀನಾಗೆ ಫೈಟ್ ಕೊಟ್ಟು ಮುಂದೋಗುತ್ತೇವೆ ಎಂದರು.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ ಕಳ್ಳಮಳ್ಳ ಇದ್ದಹಾಗೆ: ಸಚಿವ ಆರ್‌.ಅಶೋಕ್‌ ವಾಗ್ದಾಳಿ

ಕಾಂಗ್ರೆಸ್​ನವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಆತಂಕವಿದೆ ಎಂದು ರಾಹುಲ್​ ಹೇಳಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್​ನವರು 200 ಯೂನಿಟ್ ಉಚಿತ ವಿದ್ಯುತ್​ ಘೋಷಿಸಿದ್ದಾರೆ. ಮನೆಯ ಮುಖ್ಯಸ್ಥೆ ಖಾತೆಗೆ 2 ಸಾವಿರ ಹಣ ಹಾಕುವುದಾಗಿ ಹೇಳಿದ್ದಾರೆ. ಕಾಂಗ್ರೆಸ್​ನವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ವಿಪಕ್ಷ ನಾಯಕ ಸಿದ್ದರಾಮಯ್ಯ ಹಣೆಗೆ ತಿಲಕವಿಟ್ಟರೆ ಒರೆಸಿಕೊಳ್ಳುತ್ತಾರೆ. 75 ವರ್ಷದ ನಿಮ್ಮ ಆಡಳಿತದಲ್ಲಿ 24 ಗಂಟೆ ಕರೆಂಟ್ ಕೊಡಲು ಆಗಲಿಲ್ಲ. ಮೋದಿ ಅಧಿಕಾರಕ್ಕೆ ಬಂದ ಬಳಿಕ ಒನ್ ನೇಷನ್ ಒನ್ ಕರೆಂಟ್​ ಮಾಡಿದ್ವಿ. ನಾವೀಗ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುತ್ತಿದ್ದೇವೆ. ಕಾಶ್ಮೀರಕ್ಕೆ ಹೋಗಿ ಐಸ್ ಆಟ ಆಡಿರುವುದಕ್ಕೆ ಮೋದಿ, ಶಾ ಕಾರಣ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:32 pm, Sat, 4 March 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು