AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್‌ವೈ ಅವರ ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಸಿಕ್ಕಿದ ಮನ್ನಣೆ: ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ

ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಸಿಕ್ಕಿದ ಮನ್ನಣೆ. ಬಿಎಸ್‌ವೈಗೆ ಜವಾಬ್ದಾರಿ ನೀಡಿದ್ದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು ಎಂದ ಬೊಮ್ಮಾಯಿ ಇದು ದೂರದೃಷ್ಟಿಯ ತೀರ್ಮಾನ ಎಂದು ಹೇಳಿದ್ದಾರೆ.

ಬಿಎಸ್‌ವೈ ಅವರ ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಸಿಕ್ಕಿದ ಮನ್ನಣೆ: ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 17, 2022 | 6:06 PM

Share

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಆಯ್ಕೆ ಬಿಎಸ್ ಯಡಿಯೂರಪ್ಪ(BS Yediyurappa) ಆಯ್ಕೆ ಹಿನ್ನೆಲೆಯಲ್ಲಿ ಇಂದು ಬಿಎಸ್​​ವೈ ಅವರ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಎಸ್ ಯಡಿಯೂರಪ್ಪ ಅವರಿಗೆ ಅತ್ಯಂತ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸವಾಗಿದೆ. ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಮನ್ನಣೆ ಎಂದಿದ್ದಾರೆ. ಬಿಎಸ್‌ವೈಗೆ ಜವಾಬ್ದಾರಿ ನೀಡಿದ್ದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು ಎಂದ ಬೊಮ್ಮಾಯಿ ಇದು ದೂರದೃಷ್ಟಿಯ ತೀರ್ಮಾನ ಎಂದಿದ್ದಾರೆ.  ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ  ಬಹಳ ಸಕ್ರಿಯರಾಗಿದ್ದರು.  ಯಡಿಯೂರಪ್ಪ ಮಾರ್ಗದರ್ಶನದಲ್ಲೇ ನಾನು ನಡೆಯುತ್ತಿದ್ದೇನೆ.  ಇದನ್ನು ನಾನು ಸಿಎಂ ಸ್ಥಾನ ಸ್ವೀಕರಿಸಿದಾಗಲೇ ಹೇಳಿದ್ದೇನೆ. ರಾಜ್ಯ ಹಾಗೂ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಸಿಕ್ಕಿದೆ. ಬಿಎಸ್‌ವೈಗೆ ಜವಾಬ್ದಾರಿ ನೀಡಿದ್ದರಿಂದ ನಮ್ಮ ಉತ್ಸಾಹ ಹೆಚ್ಚಾಗಿದೆ.  2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರೋದು ಶತಃಸಿದ್ಧ. ವಿಪಕ್ಷಗಳ ಸರ್ವೆ ಯಾವ ರೀತಿ ಮಾಡಿದ್ದಾರೆಂದು ನಮಗೆ ಗೊತ್ತಿದೆ.  ಹೀಗಾಗಿ ಮತ್ತೆ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಖಚಿತ. ಬಿಎಸ್‌ವೈಗೆ ಹುದ್ದೆ ನೀಡಿದ್ದು ಪ್ರಮೋಷನ್ ಅಲ್ಲ, ಡಿಮೋಷನ್ ಅಲ್ಲ. ಯಡಿಯೂರಪ್ಪಗೆ ಹೊಣೆ ನೀಡಿದ್ದು ಮಿಷನ್ ದಕ್ಷಿಣ ಭಾಗ ಮತ್ತು ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಬರಬೇಕು ಎಂಬುದರ ಎರಡೂ ಭಾಗ ಎಂದು  ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬಿಎಸ್​ವೈಗೆ ಸಿಹಿ ತಿನ್ನಿಸಿ ಸಂಭ್ರಮ

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಯಲ್ಲಿ ಯಡಿಯೂರಪ್ಪ  ಅವರಿಗೆ ಸ್ಥಾನ ಸಿಕ್ಕಿದ್ದಕ್ಕೆ ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬಿಎಸ್​ವೈಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಸಚಿವರು, ಶಾಸಕರು ಯಡಿಯೂರಪ್ಪ ಅವರಿಗೆ  ಹೂಗುಚ್ಛ ನೀಡಿ ಅಭಿನಂದಿಸಿದರು.

Published On - 5:53 pm, Wed, 17 August 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್