AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್‌ವೈ ಅವರ ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಸಿಕ್ಕಿದ ಮನ್ನಣೆ: ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ

ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಸಿಕ್ಕಿದ ಮನ್ನಣೆ. ಬಿಎಸ್‌ವೈಗೆ ಜವಾಬ್ದಾರಿ ನೀಡಿದ್ದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು ಎಂದ ಬೊಮ್ಮಾಯಿ ಇದು ದೂರದೃಷ್ಟಿಯ ತೀರ್ಮಾನ ಎಂದು ಹೇಳಿದ್ದಾರೆ.

ಬಿಎಸ್‌ವೈ ಅವರ ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಸಿಕ್ಕಿದ ಮನ್ನಣೆ: ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 17, 2022 | 6:06 PM

Share

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಆಯ್ಕೆ ಬಿಎಸ್ ಯಡಿಯೂರಪ್ಪ(BS Yediyurappa) ಆಯ್ಕೆ ಹಿನ್ನೆಲೆಯಲ್ಲಿ ಇಂದು ಬಿಎಸ್​​ವೈ ಅವರ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಎಸ್ ಯಡಿಯೂರಪ್ಪ ಅವರಿಗೆ ಅತ್ಯಂತ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸವಾಗಿದೆ. ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಮನ್ನಣೆ ಎಂದಿದ್ದಾರೆ. ಬಿಎಸ್‌ವೈಗೆ ಜವಾಬ್ದಾರಿ ನೀಡಿದ್ದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು ಎಂದ ಬೊಮ್ಮಾಯಿ ಇದು ದೂರದೃಷ್ಟಿಯ ತೀರ್ಮಾನ ಎಂದಿದ್ದಾರೆ.  ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ  ಬಹಳ ಸಕ್ರಿಯರಾಗಿದ್ದರು.  ಯಡಿಯೂರಪ್ಪ ಮಾರ್ಗದರ್ಶನದಲ್ಲೇ ನಾನು ನಡೆಯುತ್ತಿದ್ದೇನೆ.  ಇದನ್ನು ನಾನು ಸಿಎಂ ಸ್ಥಾನ ಸ್ವೀಕರಿಸಿದಾಗಲೇ ಹೇಳಿದ್ದೇನೆ. ರಾಜ್ಯ ಹಾಗೂ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಸಿಕ್ಕಿದೆ. ಬಿಎಸ್‌ವೈಗೆ ಜವಾಬ್ದಾರಿ ನೀಡಿದ್ದರಿಂದ ನಮ್ಮ ಉತ್ಸಾಹ ಹೆಚ್ಚಾಗಿದೆ.  2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರೋದು ಶತಃಸಿದ್ಧ. ವಿಪಕ್ಷಗಳ ಸರ್ವೆ ಯಾವ ರೀತಿ ಮಾಡಿದ್ದಾರೆಂದು ನಮಗೆ ಗೊತ್ತಿದೆ.  ಹೀಗಾಗಿ ಮತ್ತೆ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಖಚಿತ. ಬಿಎಸ್‌ವೈಗೆ ಹುದ್ದೆ ನೀಡಿದ್ದು ಪ್ರಮೋಷನ್ ಅಲ್ಲ, ಡಿಮೋಷನ್ ಅಲ್ಲ. ಯಡಿಯೂರಪ್ಪಗೆ ಹೊಣೆ ನೀಡಿದ್ದು ಮಿಷನ್ ದಕ್ಷಿಣ ಭಾಗ ಮತ್ತು ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಬರಬೇಕು ಎಂಬುದರ ಎರಡೂ ಭಾಗ ಎಂದು  ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬಿಎಸ್​ವೈಗೆ ಸಿಹಿ ತಿನ್ನಿಸಿ ಸಂಭ್ರಮ

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಯಲ್ಲಿ ಯಡಿಯೂರಪ್ಪ  ಅವರಿಗೆ ಸ್ಥಾನ ಸಿಕ್ಕಿದ್ದಕ್ಕೆ ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬಿಎಸ್​ವೈಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಸಚಿವರು, ಶಾಸಕರು ಯಡಿಯೂರಪ್ಪ ಅವರಿಗೆ  ಹೂಗುಚ್ಛ ನೀಡಿ ಅಭಿನಂದಿಸಿದರು.

Published On - 5:53 pm, Wed, 17 August 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು